Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:4 - ಪರಿಶುದ್ದ ಬೈಬಲ್‌

4 ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗರ್ಭಗುಡಿಯಲ್ಲಿ ಚಿನ್ನದ ಧೂಪಾರತಿ ಮತ್ತು ಚಿನ್ನದ ತಗಡನ್ನು ಸುತ್ತಲೂ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇದ್ದವು. ಈ ಮಂಜೂಷದಲ್ಲಿ ಮನ್ನವನ್ನು ಇಟ್ಟಿದ್ದ ಚಿನ್ನದ ಪಾತ್ರೆ ಆರೋನನ ಚಿಗುರಿದ ಕೋಲು ಮತ್ತು ಒಡಂಬಡಿಕೆಯ ಶಿಲಾಶಾಸನಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದ ತಗಡನ್ನು ಮಡಾಯಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆ ಬರೆದಿದ್ದ ಕಲ್ಲಿನ ಹಲಿಗೆಗಳೂ ಇದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಆಗ್ದಿ ಪವಿತ್ರ್ ಜಾಗ್ಯಾರ್ ಧುಪ್ ಜಾಳ್ವುಕ್ ಸೊನ್ಯಾಚೆ ಅಲ್ತಾರ್ ಹೊತ್ತೆ, ತೆ ನಸ್ತಾನಾ ಪೈಲೆಚೆ ಕರಾರಾತ್ ಥವ್ತಲಿ ಕರಾರಾಚಿ ಪೆಟಿ ಹೊತ್ತಿ, ತೆಕಾ ಸೊನ್ಯಾಚಿ ತಗ್ಡಾ ಲಾವಲ್ಲಿ ಹೊತ್ತಿ, ತೆಚ್ಯಾ ಭುತ್ತುರ್ ಸೊನ್ಯಾಚ್ಯಾ ಆಯ್ದಾನಾತ್ ಥವಲ್ಲೊ ಮನ್ನಾ ಅನಿ ಎಕ್ನತ್ತ್ಯಾ ಎಕ್ ವೆಳಾರ್ ಪಾನಾ ಚಿಗ್ರುನ್ ಯೆಲ್ಲೊ ಆರೊನಾಚೊ ದಾಂಡೊ ಹೊತ್ತೊ, ಪೈಲೆಚಿ ಧಾ ಆಜ್ಞಾ ಲಿವಲ್ಲಿ ಹೊತ್ತಿ, ಗುಂಡ್ಯಾಂಚಿ ಫಳಿಯಾ ತ್ಯಾತುರ್ ಥವಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:4
26 ತಿಳಿವುಗಳ ಹೋಲಿಕೆ  

ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ಮತ್ತೆ ಒಡಂಬಡಿಕೆಯ ಪೆಟ್ಟಿಗೆಯ ಮುಂದಿಡು. ದಂಗೆಕೋರರಿಗೆ ಅದು ಎಚ್ಚರಿಕೆಯಾಗಿ ಅಲ್ಲೇ ಇರಬೇಕು, ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ, ಮರಣಕ್ಕೆ ಗುರಿಯಾಗದಂತೆ ನೀನು ಹೀಗೆ ಮಾಡಬೇಕು” ಎಂದು ಆಜ್ಞಾಪಿಸಿದನು.


ಒಡಂಬಡಿಕೆಯ ಪೆಟ್ಟಿಗೆಯೊಳಗೆ ಎರಡು ಕಲ್ಲಿನ ಹಲಗೆಗಳು ಮಾತ್ರ ಇದ್ದವು. ಹೋರೇಬ್ ಬೆಟ್ಟದಲ್ಲಿ ಮೋಶೆಯು ಈ ಕಲ್ಲಿನ ಹಲಗೆಗಳನ್ನು ಪೆಟ್ಟಿಗೆಯೊಳಗಿಟ್ಟನು. ಆ ಬೆಟ್ಟದಲ್ಲಿ ಯೆಹೋವನು ಈಜಿಪ್ಟಿನಿಂದ ಬಿಡುಗಡೆ ಹೊಂದಿದ ಇಸ್ರೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು.


ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತೆಗೆದುಕೊಳ್ಳಬೇಕು. ಆರೋನನು ಪರಿಮಳ ಧೂಪ ದ್ರವ್ಯದ ಪುಡಿಯಲ್ಲಿ ಎರಡು ಹಿಡಿ ತೆಗೆದುಕೊಳ್ಳುವನು. ಆರೋನನು ಆ ಧೂಪವನ್ನು ತೆರೆಯ ಹಿಂದೆ ಇರುವ ಕೋಣೆಗೆ ತೆಗೆದುಕೊಂಡು ಬರಬೇಕು.


ಪವಿತ್ರಗುಡಾರದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡು. ಪೆಟ್ಟಿಗೆಯನ್ನು ಪರದೆಯಿಂದ ಮುಚ್ಚಿಸು.


ಚಿನ್ನದ ಬಳೆಗಳ ಕೆಳಗೆ ಪರದೆಯನ್ನು ಹಾಕಿಸಬೇಕು; ಪರದೆಯ ಹಿಂಭಾಗದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಬೇಕು. ಈ ಪರದೆಯು ಪವಿತ್ರ ಸ್ಥಳವನ್ನು ಮಹಾಪವಿತ್ರ ಸ್ಥಳದಿಂದ ಪ್ರತ್ಯೇಕಿಸುವುದು.


ನಾನು ಒಬ್ಬನನ್ನು ನನ್ನ ಯಾಜಕನನ್ನಾಗಿ ಆರಿಸಿಕೊಳ್ಳುವೆನು; ಅವನ ಕೋಲು ಚಿಗುರುವುದು, ಇಸ್ರೇಲ್ ಜನರು ನಿಮ್ಮ ವಿರುದ್ಧವಾಗಿ ಹೇಳುತ್ತಿರುವ ದೂರುಗಳನ್ನು ನಾನು ಹೀಗೆ ನಿಲ್ಲಿಸುವೆನು.”


ತರುವಾಯ ಮೋಶೆಯು ಸೀನಾಯಿ ಬೆಟ್ಟದಿಂದ ಇಳಿದು ಬಂದನು. ಒಡಂಬಡಿಕೆಯ ವಾಕ್ಯಗಳು ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಅವನು ಹಿಡಿದುಕೊಂಡಿದ್ದನು. ಯೆಹೋವನು ಅವನೊಡನೆ ಮಾತಾಡಿದ್ದರಿಂದ ಅವನ ಮುಖವು ಹೊಳೆಯುತ್ತಿತ್ತು. ಆದರೆ ಮೋಶೆಗೆ ಇದು ತಿಳಿದಿರಲಿಲ್ಲ.


ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ಈ ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ಈ ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಈ ಧೂಪವನ್ನು ಇಟ್ಟನು.


ಯೆಹೋವನ ಪೆಟ್ಟಿಗೆಗಾಗಿ ಆಲಯದಲ್ಲಿ ನಾನೊಂದು ಸ್ಥಳವನ್ನು ಮಾಡಿದ್ದೇನೆ. ಯೆಹೋವನು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯು ಈ ಪವಿತ್ರಪೆಟ್ಟಿಗೆಯಲ್ಲಿದೆ. ಯೆಹೋವನು ನಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಈ ಒಡಂಬಡಿಕೆಯನ್ನು ಮಾಡಿಕೊಂಡನು” ಎಂದು ಹೇಳಿದನು.


ಪವಿತ್ರ ಪೆಟ್ಟಿಗೆಯಲ್ಲಿರುವ ಒಂದೇ ವಸ್ತುವೆಂದರೆ ಎರಡು ಕಲ್ಲಿನ ಹಲಿಗೆಗಳು. ಮೋಶೆಯು ಹೋರೇಬ್ ಎಂಬ ಸ್ಥಳದಲ್ಲಿ ಪವಿತ್ರ ಪೆಟ್ಟಿಗೆಯಲ್ಲಿಟ್ಟ ಎರಡು ಕಲ್ಲಿನ ಹಲಗೆಗಳೇ. ಇವು ಈಜಿಪ್ಟಿನಿಂದ ಹೊರಬಂದ ಇಸ್ರೇಲಿನ ಜನರೊಂದಿಗೆ ಯೆಹೋವನು ಒಪ್ಪಂದ ಮಾಡಿಕೊಂಡ ಸ್ಥಳವೇ ಹೋರೇಬ್.


ಮರುದಿನ ಮೋಶೆ ಗುಡಾರದೊಳಗೆ ಹೋಗಿ ನೋಡಲಾಗಿ ಲೇವಿಕುಲದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.


ಅವರು ಮೋಶೆಗೆ ಒಡಂಬಡಿಕೆಯ ಪೆಟ್ಟಿಗೆಯನ್ನೂ ಆ ಪೆಟ್ಟಿಗೆಯನ್ನು ಹೊರುವುದಕ್ಕಾಗಿ ಉಪಯೋಗಿಸುವ ಕೋಲುಗಳನ್ನೂ ಪೆಟ್ಟಿಗೆಯ ಕೃಪಾಸನವನ್ನೂ ಮೋಶೆಗೆ ತೋರಿಸಿದರು.


ಹೀಗೆ, ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡುವುದನ್ನು ಮುಗಿಸಿದನು. ಬಳಿಕ ಯೆಹೋವನು ಒಡಂಬಡಿಕೆ ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಗೆ ಕೊಟ್ಟನು. ಅವು ದೇವರ ಬೆರಳಿನಿಂದ ಲಿಖಿತವಾಗಿತ್ತು.


ಬಳಿಕ ಮೋಶೆ ಬೆಟ್ಟದಿಂದಿಳಿದು ಬಂದನು. ಮೋಶೆಯೊಡನೆ ಆಜ್ಞಾಶಾಸನಗಳ ಎರಡು ಕಲ್ಲಿನ ಹಲಿಗೆಗಳಿದ್ದವು. ಈ ಆಜ್ಞಾಶಾಸನಗಳ ಕಲ್ಲುಗಳ ಮುಂದೆಯೂ ಹಿಂದೆಯೂ ಬರೆಯಲ್ಪಟ್ಟಿದ್ದವು.


ಅವನು ಧೂಪವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಧೂಪವೇದಿಕೆಯು ಚೌಕವಾಗಿತ್ತು. ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಎರಡು ಮೊಳ ಎತ್ತರ ಇತ್ತು. ಧೂಪವೇದಿಕೆಯಲ್ಲಿ ನಾಲ್ಕು ಕೊಂಬುಗಳಿದ್ದವು. ಪ್ರತಿ ಮೂಲೆಯಲ್ಲಿಯೂ ಒಂದೊಂದು ಕೊಂಬುಗಳಿದ್ದವು. ಈ ಕೊಂಬುಗಳು ಒಟ್ಟಾಗಿ ಧೂಪವೇದಿಕೆಗೆ ಜೋಡಿಸಲ್ಪಟ್ಟು ಅವಿಭಾಜ್ಯವಾಗಿತ್ತು.


ನಾನು ಕಲ್ಲಿನ ಹಲಗೆಗಳನ್ನು ತೆಗೆದುಕೊಂಡು ಬರಲು ಬೆಟ್ಟದ ಮೇಲೇರಿದ್ದೆನು. ಯೆಹೋವ ದೇವರು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆ ಆ ಹಲಗೆಯ ಮೇಲೆ ಬರೆಯಲ್ಪಟ್ಟಿತ್ತು. ನಾನು ಆ ಬೆಟ್ಟದ ಮೇಲೆ ನಲವತ್ತು ದಿವಸ ಹಗಲಿರುಳು ಕಳೆದೆನು. ನಾನು ಅನ್ನವನ್ನಾಗಲಿ ನೀರನ್ನಾಗಲಿ ತೆಗೆದುಕೊಳ್ಳಲಿಲ್ಲ.


“ಹಾಗೆ ನಲವತ್ತು ದಿನಗಳ ಅಂತ್ಯದಲ್ಲಿ ಯೆಹೋವನು ಒಡಂಬಡಿಕೆಯನ್ನು ಬರೆದಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟನು.


ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು