Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:9 - ಪರಿಶುದ್ದ ಬೈಬಲ್‌

9 ಈ ದಿನ ನಮಗೆ ಇದೊಂದು ಉದಾಹರಣೆಯಾಗಿದೆ. ದೇವರಿಗೆ ಅರ್ಪಿಸಲ್ಪಡುತ್ತಿದ್ದ ಕಾಣಿಕೆಗಳಿಗಾಗಲಿ ಯಜ್ಞಗಳಿಗಾಗಲಿ ದೇವಾರಾಧನೆ ಮಾಡುವ ವ್ಯಕ್ತಿಯನ್ನು ಪರಿಪೂರ್ಣನನ್ನಾಗಿ ಮಾಡಲು ಸಾಧ್ಯವಿರಲಿಲ್ಲ ಎಂಬುದನ್ನು ಇದು ತೋರ್ಪಡಿಸುತ್ತದೆ. ಆ ವ್ಯಕ್ತಿಯ ಹೃದಯವನ್ನು ಪರಿಶುದ್ಧಗೊಳಿಸಲು ಆ ಯಜ್ಞಗಳಿಗೆ ಸಾಧ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇವೆಲ್ಲವೂ ಈ ಕಾಲದ ಪರಿಸ್ಥಿತಿಗೆ ಒಂದು ನಿದರ್ಶನವಾಗಿವೆ. ಈ ವ್ಯವಸ್ಥೆಯ ಪ್ರಕಾರ ಸಮರ್ಪಣೆಯಾಗುತ್ತಿದ್ದ ಕಾಣಿಕೆಗಳೂ ಬಲಿಗಳೂ ಆರಾಧಕನ ಅಂತರಂಗವನ್ನು ಪೂರ್ಣವಾಗಿ ಶುದ್ಧಗೊಳಿಸಲು ಅಸಮರ್ಥವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಗುಡಾರವು ಈಗಿನ ಕಾಲದವರಿಗೋಸ್ಕರ ಒಂದು ಒಳಗಣ ಅರ್ಥವನ್ನು ಸೂಚಿಸುತ್ತದೆ; ಏನಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಯಜ್ಞಗಳೂ ದೇವಾರಾಧನೆ ಮಾಡುವವರನ್ನು ಮನಸ್ಸಾಕ್ಷಿಯು ಒಪ್ಪುವಂತೆ ಸಿದ್ಧಿಗೆ ತರಲಾರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಗುಡಾರವು ಈ ಕಾಲವನ್ನು ಸೂಚಿಸುವ ಒಂದು ಮಾದರಿಯಾಗಿದೆ. ಆಗ ಆರಾಧಿಸುವವರ ಮನಸ್ಸಾಕ್ಷಿಯನ್ನು ಪರಿಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲಾಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದೆವಾಕ್ ದಿತಲಿ ಕಾನಿಕ್ ಹೊಂವ್ದಿ ಯಜ್ನ್ ಹೊಂವ್ದಿ ದೆವಾಚೆ ಆರಾದನ್ ಕರ್‍ತಲ್ಯಾ ಮಾನ್ಸಾಕ್ ಪರಿಪುರ್ನ್ ಕರುಕ್ ಹೊಯ್ನಾ ಮನ್ತಲೆ ದಾಕ್ವುತಾ, ತ್ಯಾ ಮಾನ್ಸಾಚೊ ಮನ್ ಚುಕ್ ಕರುಚೆ ಮನುನ್ ಯವಜಲ್ಲ್ಯಾಂಚ್ಯಾನ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:9
16 ತಿಳಿವುಗಳ ಹೋಲಿಕೆ  

ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.


ಪ್ರತಿಯೊಬ್ಬ ಯೆಹೂದ್ಯ ಪ್ರಧಾನಯಾಜಕನೂ ಮನುಷ್ಯರೊಳಗಿಂದ ಆರಿಸಲ್ಪಟ್ಟು ದೇವರಿಗೆ ಸಂಬಂಧಿಸಿದ ಕಾರ್ಯಗಳನ್ನು ಮನುಷ್ಯರಿಗೋಸ್ಕರ ಮಾಡಲು ನೇಮಿಸಲ್ಪಡುತ್ತಾನೆ. ಆ ಯಾಜಕನು ಪಾಪಗಳಿಗಾಗಿ ದೇವರಿಗೆ ಕಾಣಿಕೆಗಳನ್ನೂ ಯಜ್ಞಗಳನ್ನೂ ಅರ್ಪಿಸಬೇಕು.


ಆದರೆ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೆ ಎಲ್ಲಾ ಜನರು ಸಾಯಲೇಬೇಕಾಯಿತು. ಆದಾಮನು ಪಾಪ ಮಾಡಿದ್ದರಿಂದ ಸತ್ತನು. ದೇವರ ಆಜ್ಞೆಗೆ ಅವಿಧೇಯನಾದದ್ದೇ ಆ ಪಾಪ. ಆದರೆ ಆದಾಮನು ಮಾಡಿದ ಪಾಪಕ್ಕೆ ಸರಿಸಮಾನವಾದ ಪಾಪವನ್ನು ಮಾಡಿಲ್ಲದವರು ಸಹ ಸಾಯಬೇಕಾಯಿತು. ಆದಾಮನು ಮುಂದಿನ ಕಾಲದಲ್ಲಿ ಬರಲಿದ್ದ ಒಬ್ಬಾತನಿಗೆ (ಕ್ರಿಸ್ತನಿಗೆ) ಮುನ್ಸೂಚನೆಯಾಗಿದ್ದನು.


ದೇವರು ಸತ್ತವರನ್ನು ಜೀವಂತವಾಗಿ ಎಬ್ಬಿಸಬಲ್ಲನೆಂದು ಅವನು ನಂಬಿದ್ದನು. ಇಸಾಕನನ್ನು ಕೊಲ್ಲದಂತೆ ದೇವರು ಅವನನ್ನು ತಡೆದಾಗ, ಅವನಿಗೆ ನಿಜವಾಗಿಯೂ ಇಸಾಕನನ್ನು ಸಾವಿನಿಂದ ಮರಳಿ ಪಡೆದಂತಾಯಿತು.


ಪ್ರತಿದಿನವೂ ಯಾಜಕರು ನಿಂತುಕೊಂಡು ತಮ್ಮ ಧಾರ್ಮಿಕ ಸೇವೆಯನ್ನು ಮಾಡುತ್ತಾರೆ. ಅವರು ಮತ್ತೆಮತ್ತೆ ಅದೇ ಯಜ್ಞಗಳನ್ನು ಅರ್ಪಿಸುತ್ತಾರೆ. ಆದರೆ ಅವರ ಪಾಪಗಳನ್ನು ತೆಗೆದುಹಾಕಲು ಯಜ್ಞಗಳಿಗೆ ಎಂದಿಗೂ ಸಾಧ್ಯವಿಲ್ಲ.


ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.


ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ.


ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರೋಧವಾಗಿದೆ ಎಂಬುದು ಇದರರ್ಥವೇ? ಇಲ್ಲ! ಜೀವವನ್ನು ಕೊಡುವಂಥ ಧರ್ಮಶಾಸ್ತ್ರವಿದ್ದಿದ್ದರೆ ಅದನ್ನು ಅನುಸರಿಸುವುದರ ಮೂಲಕ ನೀತಿವಂತರಾಗಬಹುದಾಗಿತ್ತು.


ಆತನು ಇನ್ನೂ ಭೂಮಿಯ ಮೇಲೆ ವಾಸಮಾಡುತ್ತಿದ್ದರೆ ಯಾಜಕನಾಗಿರುತ್ತಿರಲಿಲ್ಲ. ಕಾರಣವೇನೆಂದರೆ, ಧರ್ಮಶಾಸ್ತ್ರದ ಪ್ರಕಾರ ದೇವರಿಗೆ ಕಾಣಿಕೆಗಳನ್ನು ಅರ್ಪಿಸುವ ಯಾಜಕರು ಈಗಾಗಲೇ ಇಲ್ಲಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು