Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:1 - ಪರಿಶುದ್ದ ಬೈಬಲ್‌

1 ದೇವಾಲಯದೆದುರು ಎಜ್ರನು ರೋಧಿಸುತ್ತಾ, ದೇವರಿಗೆ ಅಡ್ಡಬಿದ್ದು ಪ್ರಾರ್ಥಿಸುತ್ತಾ ಪಾಪದರಿಕೆ ಮಾಡುತ್ತಾ ಇರುವಾಗ ಅವನ ಸುತ್ತಲೂ ಅನೇಕ ಮಂದಿ ಇಸ್ರೇಲರ ಗಂಡಸರು, ಹೆಂಗಸರು, ಮಕ್ಕಳು ಸೇರಿಬಂದರು. ಅವರೂ ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎಜ್ರನು ದೇವಾಲಯದ ಮುಂದೆ ಹೀಗೆ ಅಡ್ಡಬಿದ್ದು ಅಳುತ್ತಾ, ವಿಜ್ಞಾಪನೆಯನ್ನೂ ಪಾಪ ನಿವೇದನೆಯನ್ನೂ ಮಾಡುತ್ತಿರುವಾಗ ಇಸ್ರಯೇಲರ ಗಂಡಸರು, ಹೆಂಗಸರು ಹಾಗು ಮಕ್ಕಳು ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಜನರೆಲ್ಲರು ಅಲ್ಲಿ ಬಹಳವಾಗಿ ದುಃಖಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ ಪಾಪನಿವೇದನವನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲ್ಯರ ಗಂಡಸರೂ ಹೆಂಗಸರೂ ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಅಲ್ಲಿನ ಜನರು ಬಹಳವಾಗಿ ಅಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅತ್ತು ದೇವರ ಆಲಯದ ಮುಂದೆ ಅಡ್ಡಬಿದ್ದ ತರುವಾಯ ಇಸ್ರಾಯೇಲರಲ್ಲಿ ಸ್ತ್ರೀಯರೂ, ಪುರುಷರೂ, ಮಕ್ಕಳು ಮಹಾಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡು ಬಂದರು. ಜನರು ಬಹಳವಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:1
29 ತಿಳಿವುಗಳ ಹೋಲಿಕೆ  

ನಾನು ಪ್ರಾರ್ಥನೆಯಲ್ಲಿ ನನ್ನ ಪಾಪಗಳ ಬಗ್ಗೆ ಮತ್ತು ಇಸ್ರೇಲರ ಪಾಪಗಳ ಬಗ್ಗೆ ಹೇಳಿಕೊಂಡೆ. ನಾನು ನನ್ನ ದೇವರಾದ ಯೆಹೋವನ ಪವಿತ್ರ ಪರ್ವತಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದೆ.


ಜನರು ನಿನ್ನ ಉಪದೇಶಗಳಿಗೆ ವಿಧೇಯರಾಗದಿರುವುದರಿಂದ ನನ್ನ ಕಣ್ಣೀರು ಗೋಳಾಟದಿಂದ ನದಿಯಾಗಿ ಹರಿಯುತ್ತಿದೆ.


ಯೆಹೂದ್ಯರ ವಿಷಯದಲ್ಲಿ ನನಗೆ ಅತೀವ ದುಃಖವಿದೆ; ನಿರಂತರ ಮನೋವೇದನೆಯಿದೆ.


ಯೆಹೋವನೇ, ನಾನು ಮತ್ತು ಇಸ್ರೇಲಿನ ಜನರೆಲ್ಲರೂ ಈ ಸ್ಥಳದ ಕಡೆಗೆ ತಿರುಗಿ, ನಿನ್ನಲ್ಲಿ ಪ್ರಾರ್ಥಿಸುತ್ತೇವೆ. ದಯವಿಟ್ಟು ಆ ಪ್ರಾರ್ಥನೆಗಳನ್ನು ಲಾಲಿಸು. ನೀನು ಪರಲೋಕದಲ್ಲಿ ವಾಸಿಸುತ್ತಿರುವಿಯೆಂದು ನಮಗೆ ಗೊತ್ತಿದೆ. ನೀನು ನಮ್ಮ ಪ್ರಾರ್ಥನೆಗಳನ್ನು ಅಲ್ಲಿಯೇ ಕೇಳಿ, ನಮಗೆ ಕ್ಷಮೆಯನ್ನು ಅನುಗ್ರಹಿಸು.


ಯೇಸು ಜೆರುಸಲೇಮಿನ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯದಲ್ಲಿ ಕಣ್ಣೀರಿಟ್ಟು


ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದ್ದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ಹೀಗೆ ಇವರೆಲ್ಲಾ ಯೆಹೋವನಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದರು. ತಾವು ವಾಗ್ದಾನವನ್ನು ನೆರವೇರಿಸದೆ ಹೋದಲ್ಲಿ ಸಂಕಟಬಾಧೆಗಳು ಪ್ರಾಪ್ತವಾಗುವಂತೆ ಯೆಹೋವನನ್ನು ಕೇಳಿಕೊಂಡರು. ಇವರೆಲ್ಲಾ ದೇವರ ನೀತಿನಿಯಮಗಳನ್ನು ಅನುಸರಿಸುತ್ತೇವೆಂದು ಮಾತುಕೊಟ್ಟರು. ಆ ನೀತಿನಿಯಮಗಳನ್ನು ಯೆಹೋವನು ತನ್ನ ಸೇವಕನಾದ ಮೋಶೆಯ ಮೂಲಕ ನಮಗೆ ಕೊಟ್ಟನು. ಮೇಲೆ ಕಾಣಿಸಿದ ಹೆಸರುಗಳಲ್ಲದೆ ಉಳಿದ ಜನರು, ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಮತ್ತು ಇಸ್ರೇಲಿನ ಜನರು ತಮ್ಮ ಸುತ್ತಲು ವಾಸಿಸುವ ಜನರಿಂದ ಪ್ರತ್ಯೇಕಿಸಲ್ಪಟ್ಟರು. ದೇವರ ವಿಧಿನಿಯಮಗಳನ್ನು ಅನುಸರಿಸುವುದಕ್ಕಾಗಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತ್ಯೇಕಿಸಿಕೊಂಡರು. ದೇವರಿಗೆ ಮಾಡಿದ ಒಡಂಬಡಿಕೆಯನ್ನು ನಡೆಸಿಕೊಡಲು ಒಪ್ಪಿದರು ಮತ್ತು ಹಾಗೆ ಮಾಡದಿದ್ದಲ್ಲಿ ದೇವರಿಂದ ಸಂಕಟ ವ್ಯಾಧಿಗಳನ್ನು ಸ್ವೀಕರಿಸಲೂ ಒಪ್ಪಿದರು.


ಅವರು, ‘ನಮಗೆ ಖಡ್ಗ, ಕಾಯಿಲೆ, ಬರ, ಶಿಕ್ಷೆಗಳಿಂದ ಸಂಕಷ್ಟ ಉಂಟಾದರೆ ನಾವು ನಿನ್ನ ಮತ್ತು ನಿನ್ನ ಆಲಯದೆದುರು ನಿಂತು ನಿನಗೆ ಮೊರೆಯಿಡುವಾಗ ನೀನು ನಮ್ಮ ಮೊರೆಯನ್ನು ಕೇಳಿ ನಮಗೆ ಸಹಾಯ ಮಾಡುವೆ. ನಿನ್ನ ಹೆಸರು ಈ ಆಲಯದ ಮೇಲಿದೆ’ ಎಂದು ಹೇಳಿದರು.


ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.


ಯೆಹೂದದ ಜನರಾದ ನೀವು ಯೆಹೋವನ ಮಾತನ್ನು ಕೇಳದಿದ್ದರೆ, ನಾನು ಗುಟ್ಟಾದ ಸ್ಥಳದಲ್ಲಿ ಅಳುವೆನು. ನಿಮ್ಮ ಅಹಂಕಾರವು ನನ್ನನ್ನು ಅಳುವ ಹಾಗೆ ಮಾಡುವುದು. ನಾನು ಬಹಳ ಗಟ್ಟಿಯಾಗಿ ಅಳುವೆನು, ನನ್ನ ಕಣ್ಣುಗಳಿಂದ ಕಣ್ಣೀರು ಹೊರಸೂಸುವುದು. ಏಕೆಂದರೆ ಯೆಹೋವನ ಮಂದೆಯು ಸೆರೆಹಿಡಿಯಲ್ಪಡುವುದು.


ನನ್ನ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, ನನ್ನ ಕಣ್ಣುಗಳು ನೀರಿನ ಬುಗ್ಗೆಗಳಾಗಿದ್ದರೆ, ನಾಶಮಾಡಲ್ಪಟ್ಟ ನನ್ನ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ.


ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.


ಯೆಹೋವನು ಅವನಿಗೆ ಹೀಗೆ ಹೇಳಿದನು: “ನಿನ್ನ ಪ್ರಾರ್ಥನೆಯು ನನಗೆ ಕೇಳಿಸಿತು. ನಿನ್ನ ಬಿನ್ನಹಗಳನ್ನು ಆಲಿಸಿದೆನು. ಈ ಆಲಯವನ್ನು ನೀನು ಕಟ್ಟಿಸಿದೆ. ನಾನು ಅದನ್ನು ಪವಿತ್ರಸ್ಥಳವನ್ನಾಗಿ ಮಾಡಿದೆ. ಆದ್ದರಿಂದ ನಾನಿಲ್ಲಿ ಸದಾಕಾಲ ಸನ್ಮಾನಿಸಲ್ಪಡುವೆನು. ನನ್ನ ದೃಷ್ಟಿಯೂ ಮನಸ್ಸೂ ಸದಾ ಅದರ ಮೇಲಿರುತ್ತದೆ.


ಆದರೆ ನಮ್ಮ ಸಂದರ್ಶನವು ಮುಗಿದ ಮೇಲೆ ನಾವು ಅಲ್ಲಿಂದ ಹೊರಟು ಪ್ರಯಾಣವನ್ನು ಮುಂದುವರಿಸಿದೆವು. ಯೇಸುವಿನ ಎಲ್ಲಾ ಶಿಷ್ಯರು, ಸ್ತ್ರೀಯರು ಮತ್ತು ಮಕ್ಕಳು ಸಹ ನಮ್ಮನ್ನು ಬೀಳ್ಕೊಡುವುದಕ್ಕಾಗಿ ನಮ್ಮೊಂದಿಗೆ ಪಟ್ಟಣದಿಂದ ಹೊರಗೆ ಬಂದರು. ನಾವೆಲ್ಲರೂ ಸಮುದ್ರ ತೀರದಲ್ಲಿ ಮೊಣಕಾಲೂರಿ ಪ್ರಾರ್ಥಿಸಿದೆವು.


ಆಗ ಕೊರ್ನೇಲಿಯನು, “ನಾಲ್ಕು ದಿನಗಳ ಹಿಂದೆ, ನಾನು ನನ್ನ ಮನೆಯಲ್ಲಿ ಪ್ರಾರ್ಥಿಸುತ್ತಿದ್ದೆನು. ಆಗ ಮಧ್ಯಾಹ್ನದ ಸುಮಾರು ಮೂರು ಗಂಟೆ ಸಮಯವಾಗಿತ್ತು. ಇದ್ದಕ್ಕಿದ್ದಂತೆ ಒಬ್ಬ ಮನುಷ್ಯನು ನನ್ನ ಮುಂದೆ ನಿಂತನು. ಅವನು ಧರಿಸಿಕೊಂಡಿದ್ದ ಬಟ್ಟೆಗಳು ಪ್ರಕಾಶಮಾನವಾಗಿ ಹೊಳೆಯುತ್ತಿದ್ದವು.


ಯೆಹೂದದ ಎಲ್ಲಾ ಜನರು ತಮ್ಮ ಹೆಂಡತಿಮಕ್ಕಳೊಂದಿಗೆ ಯೆಹೋವನೆದುರು ನಿಂತಿದ್ದರು.


ಎಲ್ಲರನ್ನು ಅಂದರೆ ಗಂಡಸರನ್ನೂ ಹೆಂಗಸರನ್ನೂ ಚಿಕ್ಕಮಕ್ಕಳನ್ನೂ ಮತ್ತು ನಿಮ್ಮನಿಮ್ಮ ಊರಿನಲ್ಲಿ ವಾಸಿಸುವ ಪರದೇಶಸ್ಥರನ್ನೂ ಒಟ್ಟಾಗಿ ಸೇರಿಸಬೇಕು. ಅವರು ಬೋಧನೆಯನ್ನು ಕೇಳಿ ತಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಕಲಿಯುವರು ಮತ್ತು ಬೋಧನೆಯಲ್ಲಿ ತಿಳಿಸಿರುವ ಪ್ರಕಾರ ಮಾಡುವರು.


ಜನರು ತಾವು ಮಾಡಿದ ಪಾಪಗಳನ್ನು ಒಪ್ಪಿಕೊಂಡ ಮೇಲೆ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಡುತ್ತಿದ್ದನು.


ಎಜ್ರನು ಅಲ್ಲಿಂದೆದ್ದು ಎಲ್ಯಾಷೀಬನ ಮಗನಾದ ಯೆಹೋಹಾನನ ಕೋಣೆಗೆ ಹೋಗಿ ಅಲ್ಲಿ ಅನ್ನನೀರಿಲ್ಲದೆ ದುಃಖತಪ್ತನಾಗಿದ್ದನು. ಯಾಕೆಂದರೆ ಸೆರೆಯಿಂದ ಜೆರುಸಲೇಮಿಗೆ ಬಂದಿದ್ದ ಯೆಹೂದ್ಯರ ದ್ರೋಹದ ಬಗ್ಗೆ ಅವನು ತುಂಬಾ ದುಃಖಿತನಾಗಿದ್ದನು.


ಜೆರುಸಲೇಮಿನ ಪೌಳಿಗೋಡೆಯ ಮತ್ತು ಅಲ್ಲಿಯ ಜನರ ವಿಚಾರವಾಗಿ ಕೇಳಿದಾಗ ನಾನು ತುಂಬಾ ಗಲಿಬಿಲಿಗೊಂಡೆನು; ನಾನು ಅಲ್ಲಿಯೇ ನೆಲದ ಮೇಲೆ ಕುಳಿತು ಅತ್ತೆನು; ದುಃಖಕ್ರಾಂತನಾದೆನು; ಅಲ್ಲದೆ ಅನೇಕ ದಿವಸಗಳವರೆಗೆ ಉಪವಾಸಮಾಡಿ ಪರಲೋಕದ ದೇವರಿಗೆ ಪ್ರಾರ್ಥಿಸಿದೆನು.


“ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.


ಇದನ್ನು ಕೇಳಿ ಯೆಹೋಶುವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು.


ಅಲ್ಲಿ ಇಸ್ರೇಲಿನ ಎಲ್ಲ ಜನರು ಸೇರಿ ಬಂದಿದ್ದರು. ಎಲ್ಲ ಹೆಂಗಸರು ಮತ್ತು ಮಕ್ಕಳು ಮತ್ತು ಇಸ್ರೇಲಿನ ಜನರೊಂದಿಗೆ ಇದ್ದ ಎಲ್ಲ ವಿದೇಶಿಯರು ಅಲ್ಲಿ ಇದ್ದರು. ಅವರೆಲ್ಲರಿಗೆ ಕೇಳಿಸುವಂತೆ ಮೋಶೆಯು ಕೊಟ್ಟಿದ್ದ ಪ್ರತಿಯೊಂದು ಆಜ್ಞೆಯನ್ನು ಯೆಹೋಶುವನು ಓದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು