Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:11 - ಪರಿಶುದ್ದ ಬೈಬಲ್‌

11 ಈಗ ನೀವು ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿರುವುದಾಗಿ ಅರಿಕೆ ಮಾಡಬೇಕು. ಆತನೇ ನಮ್ಮ ಪೂರ್ವಿಕರ ದೇವರಾದ ಯೆಹೋವನು. ಆತನ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು. ನಿಮ್ಮ ಅನ್ಯಜಾತಿಯ ಹೆಂಡತಿಯರಿಂದಲೂ ನಿಮ್ಮ ಸುತ್ತಲು ವಾಸಿಸುವ ಅನ್ಯ ಜನಾಂಗದವರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈಗ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರಮಾಡಿ, ನಿಮ್ಮ ಪಾಪಗಳನ್ನು ಅರಿಕೆಮಾಡಿ, ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಮತ್ತು ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈಗ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತಕ್ಕನುಸಾರ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈಗ ನಿಮ್ಮ ಪಿತೃಗಳ ದೇವರಾದ ಯೆಹೋವನಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರ ಮುಂದೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತದ ಪ್ರಕಾರಮಾಡಿ, ಈ ದೇಶದ ಜನರಿಂದಲೂ, ಅನ್ಯ ಸ್ತ್ರೀಯರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:11
24 ತಿಳಿವುಗಳ ಹೋಲಿಕೆ  

ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯರಾಗುತ್ತೇವೆ.


ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ಇಸ್ರೇಲಿನ ದೇವರಾದ ಯೆಹೋವನನ್ನು ಸನ್ಮಾನಿಸು; ಆತನಿಗೆ ಸ್ತೋತ್ರಸಲ್ಲಿಸು. ನಿನ್ನ ಪಾಪಗಳನ್ನು ಆತನಿಗೆ ಅರಿಕೆಮಾಡು. ನೀನು ಮಾಡಿದ್ದನ್ನು ನನಗೆ ಹೇಳು; ನನ್ನಿಂದ ಏನನ್ನೂ ಮುಚ್ಚಿಡಬೇಡ” ಎಂದನು.


ಪ್ರಭುವಿಗೆ ಯೋಗ್ಯರಾಗಿ ನಡೆದು ಪ್ರತಿಯೊಂದು ವಿಷಯದಲ್ಲಿ ಆತನನ್ನು ಸಂತೋಷಪಡಿಸಬೇಕೆಂತಲೂ ನೀವು ಎಲ್ಲಾ ವಿಧವಾದ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ದೇವಜ್ಞಾನದಲ್ಲಿ ಬೆಳಯಬೇಕೆಂತಲೂ


“ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನುತ್ತಾನೆ ಪ್ರಭುವು. ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.”


‘ನೀವು ನಿಮ್ಮ ಪಾಪವನ್ನು ಅರಿತುಕೊಂಡರೆ ಸಾಕು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧ ತಿರುಗಿದಿರಿ, ಅದೇ ನಿಮ್ಮ ಪಾಪ. ನೀವು ಬೇರೆ ರಾಷ್ಟ್ರದವರ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ಪ್ರತಿಯೊಂದು ಹಸಿರು ಮರದ ಕೆಳಗೆ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ನನ್ನ ಆಜ್ಞೆಯನ್ನು ಪರಿಪಾಲಿಸಲಿಲ್ಲ’” ಇದು ಯೆಹೋವನ ನುಡಿಯಾಗಿತ್ತು.


ಯಾಕೆಂದರೆ ಯೆಹೋವನು ಹೇಳುವುದೇನೆಂದರೆ: “ಈ ಕಂಚುಕಿಯರಲ್ಲಿ ಕೆಲವರು ಸಬ್ಬತ್ ನಿಯಮವನ್ನು ಅನುಸರಿಸುತ್ತಾರೆ. ಅವರು ನನ್ನ ಇಷ್ಟಪ್ರಕಾರ ನಡೆದುಕೊಳ್ಳುತ್ತಾರೆ; ಅವರು ನನ್ನ ಒಡಂಬಡಿಕೆಗೆ ಸರಿಯಾಗಿ ನಡೆಯುತ್ತಾರೆ. ಆದ್ದರಿಂದ ನಾನು ಅವರಿಗೋಸ್ಕರ ನನ್ನ ಮಂದಿರದಲ್ಲಿ ಸ್ಮಾರಕಸ್ತಂಭ ನೆಡುವೆನು. ನನ್ನ ಪಟ್ಟಣದಲ್ಲಿ ಅವರ ಹೆಸರುಗಳು ಜ್ಞಾಪಕ ಮಾಡಲ್ಪಡುವವು. ಹೌದು, ಆ ಕಂಚುಕಿಗಳಿಗೆ ನಾನು ಮಕ್ಕಳಿಗಿಂತ ಉತ್ತಮವಾದದ್ದನ್ನು ಕೊಡುವೆನು. ಅವರಿಗೆ ನಿತ್ಯಕಾಲಕ್ಕೂ ಇರುವ ಹೆಸರನ್ನು ಕೊಡುವೆನು. ನನ್ನ ಜನರಿಂದ ಅವರನ್ನು ಬೇರ್ಪಡಿಸುವುದಿಲ್ಲ.”


ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.


ಇಸ್ರೇಲರು ದೇವರ ಕಟ್ಟಳೆಯನ್ನು ಕೇಳಿ ಅದಕ್ಕೆ ವಿಧೇಯರಾದರು. ಅನ್ಯರ ಸಂತತಿಯವರಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡರು.


ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.


ಯೆಹೂದ್ಯನಾಯಕರು ಕುರುಡನಾಗಿದ್ದ ಆ ಮನುಷ್ಯನನ್ನು ಒಳಗೆ ಕರೆದು, “ನೀನು ದೇವರನ್ನು ಮಹಿಮೆಪಡಿಸಬೇಕು. ಈ ಮನುಷ್ಯನು (ಯೇಸು) ಪಾಪಿಯೆಂದು ನಮಗೆ ಗೊತ್ತಿದೆ” ಎಂದರು.


ದೇವರ ಸೇವೆ ಮಾಡುವದನ್ನು ತಿಳಿದಿದ್ದ ಲೇವಿಯರನ್ನು ಹಿಜ್ಕೀಯನು ಪ್ರೋತ್ಸಾಹಿಸಿದನು. ಜನರು ಏಳು ದಿವಸ ಹಬ್ಬವನ್ನು ಆಚರಿಸಿ ಸಮಾಧಾನಯಜ್ಞವನ್ನು ಸಮರ್ಪಿಸಿದರು; ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿದರು.


ಆಗ ಎಜ್ರನು ಎದ್ದುನಿಂತು ಜನರನ್ನುದ್ದೇಶಿಸಿ ಹೇಳಿದ್ದೇನೆಂದರೆ: “ನೀವು ದೇವರಿಗೆ ವಿಧೇಯರಾಗಿರಲಿಲ್ಲ. ಅನ್ಯಮತದ ಹೆಂಗಸರನ್ನು ನೀವು ಮದುವೆಯಾಗಿರುತ್ತೀರಿ. ಹೀಗೆ ಇಸ್ರೇಲಿನ ಪಾಪವು ಹೆಚ್ಚುವಂತೆ ನೀವು ಮಾಡಿದಿರಿ.


ಆಗ ಅಲ್ಲಿ ನೆರೆದುಬಂದವರೆಲ್ಲರೂ ಗಟ್ಟಿಯಾಗಿ ಎಜ್ರನಿಗೆ ಉತ್ತರಿಸುತ್ತಾ, “ಎಜ್ರನೇ, ನೀನು ಸರಿಯಾಗಿ ಹೇಳಿರುವೆ! ನೀನು ಹೇಳಿದಂತೆಯೇ ನಾವು ಮಾಡಬೇಕು.


ಅನ್ಯರ ಮಧ್ಯದಿಂದ ಇಸ್ರೇಲರು ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ದೇವಾಲಯದೊಳಗೆ ನಿಂತು ತಮ್ಮ ಮತ್ತು ತಮ್ಮ ಪೂರ್ವಿಕರ ಪಾಪಗಳನ್ನು ಅರಿಕೆ ಮಾಡಿದರು.


ಯೆಹೋವನು ಇಸ್ರೇಲರ ದೇವರು. ಸರ್ವಶಕ್ತನಾದ ದೇವರು ಹೀಗೆ ಹೇಳುತ್ತಾನೆ: ನಿಮ್ಮ ನಡತೆಯನ್ನು ಬದಲಾಯಿಸಿರಿ; ಒಳ್ಳೆಯದನ್ನು ಮಾಡಿರಿ. ಆಗ ನೀವು ಇಲ್ಲಿರಲು ಆಸ್ಪದ ಕೊಡುತ್ತೇನೆ.


ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು