Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:16 - ಪರಿಶುದ್ದ ಬೈಬಲ್‌

16 ಜೆರುಸಲೇಮಿಗೆ ಹಿಂತಿರುಗಿಬಂದ ಇಸ್ರೇಲರು ಈ ಯೋಜನೆಯನ್ನು ಒಪ್ಪಿದ ಬಳಿಕ ಎಜ್ರನು ಅವರವರ ವಂಶದ ನಾಯಕರನ್ನು ಆರಿಸಿದನು. ಒಂದೊಂದು ವಂಶಕ್ಕೆ ಒಬ್ಬೊಬ್ಬ ನಾಯಕನನ್ನು ಆರಿಸಿಕೊಂಡನು. ಪ್ರತಿಯೊಬ್ಬನು ಹೆಸರಿಗನುಸಾರವಾಗಿ ಆರಿಸಲ್ಪಟ್ಟನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆ ನಾಯಕರೆಲ್ಲಾ ಒಟ್ಟಾಗಿಸೇರಿ ಒಂದೊಂದೇ ಪ್ರಕರಣಗಳನ್ನು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೆ ಸೆರೆಯಿಂದ ಮರಳಿ ಬಂದ ಇತರರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕ ಎಜ್ರನೂ ಆಯಾ ಗೋತ್ರಗಳ ಮುಖಂಡರೂ ಹೆಸರು ಹೆಸರಾಗಿ ನೇಮಕಗೊಂಡರು. ಹತ್ತನೆಯ ತಿಂಗಳಿನ ಮೊದಲನೆಯ ದಿನ, ಇವರ ಮೊದಲನೆಯ ಕೂಟ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡಿಸುವದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರೂ ಹೆಸರುಹೆಸರಾಗಿ ನೇವಿುಸಲ್ಪಟ್ಟರು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಕೂಟ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸೆರೆಯಿಂದ ಬಂದವರು ಇದೇ ಪ್ರಕಾರ ಮಾಡಿದರು. ಆದ್ದರಿಂದ ಯಾಜಕ ಎಜ್ರನು, ಕುಟುಂಬಗಳ ಮುಖ್ಯಸ್ಥರನ್ನಾಗಿ ಕುಟುಂಬಕ್ಕೆ ಒಬ್ಬೊಬ್ಬರನ್ನು ಆಯ್ದುಕೊಂಡನು. ಅವರನ್ನು ಹೆಸರು ಹಿಡಿದು ನೇಮಿಸಿದನು. ಈ ಕಾರ್ಯವನ್ನು ಶೋಧಿಸಲು ಹತ್ತನೆಯ ತಿಂಗಳ, ಮೊದಲನೆಯ ದಿವಸದಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:16
6 ತಿಳಿವುಗಳ ಹೋಲಿಕೆ  

ನಿಕೊದೇಮನು, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ ತೀರ್ಪು ನೀಡಲು ನಮ್ಮ ಧರ್ಮಶಾಸ್ತ್ರವು ಸಮ್ಮತಿಸುವುದಿಲ್ಲ. ಆತನು ಮಾಡಿರುವುದನ್ನು ನಾವು ತಿಳಿದುಕೊಳ್ಳುವವರೆಗೆ ಆತನಿಗೆ ತೀರ್ಪು ಮಾಡಲಾಗದು” ಎಂದು ಹೇಳಿದನು.


ನಾನು ಬಡವರಿಗೆ ತಂದೆಯಂತಿದ್ದೆನು. ತೊಂದರೆಯಲ್ಲಿದ್ದ ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.


ನೀವು ಇಂಥ ಸುದ್ದಿಯನ್ನು ಕೇಳಿದರೆ, ಅದು ಸತ್ಯವೇ ಎಂಬುದನ್ನು ತಿಳಿದುಕೊಳ್ಳಲು ನಿಮ್ಮಿಂದಾದಷ್ಟು ಪ್ರಯತ್ನಿಸಬೇಕು. ಅದು ಸತ್ಯವೆಂಬುದು ನಿಮಗೆ ತಿಳಿದುಬಂದರೆ ಮತ್ತು ಅಂಥ ಭಯಂಕರ ಸಂಗತಿಯು ನಿಜವಾಗಿಯೂ ಸಂಭವಿಸಿತೆಂದು ನೀವು ರುಜುವಾತುಪಡಿಸಲು ಶಕ್ತರಾಗಿದ್ದರೆ,


ಕೆಲವೇ ಮಂದಿ ಈ ಯೋಜನೆಗೆ ಒಪ್ಪಲಿಲ್ಲ. ಅವರಲ್ಲಿ ಅಸಾಹೇಲನ ಮಗನಾದ ಯೋನಾತಾನನೂ, ತಿಕ್ವನ ಮಗನಾದ ಯೆಹ್ಜೆಯನೂ ಇದ್ದರು. ಮೆಷುಲ್ಲಾಮ್ ಮತ್ತು ಲೇವಿಯನಾದ ಶಬ್ಚೆತೈ ಸಹ ಈ ಯೋಜನೆಗೆ ವಿರುದ್ಧವಾಗಿದ್ದರು.


ಮೊದಲನೇ ತಿಂಗಳಿನ ಮೊದಲನೆಯ ದಿನದಲ್ಲಿ ಎಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರ ವಿಷಯವನ್ನು ಪರಿಶೀಲಿಸುವ ಕಾರ್ಯವನ್ನು ಮುಗಿಸಿದರು.


ನೀವು ಆ ಪಟ್ಟಣದ ಜನರನ್ನು ದಂಡಿಸಬೇಕು; ಅವರೆಲ್ಲರನ್ನೂ ಕೊಲ್ಲಬೇಕು; ಅವರ ಎಲ್ಲಾ ಪಶುಗಳನ್ನು ಸಹ ಕೊಲ್ಲಬೇಕು. ಆ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು