Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:8 - ಪರಿಶುದ್ದ ಬೈಬಲ್‌

8 ಮೂರು ದಿನಗಳೊಳಗೆ ಯಾರಾದರೂ ಬಾರದೆ ಹೋದಲ್ಲಿ ಅವರು ತಮ್ಮ ಆಸ್ತಿಯನ್ನು ಕಳೆದುಕೊಳ್ಳುವರು. ಈ ತೀರ್ಮಾನವನ್ನು ಪ್ರಮುಖರೂ ಅಧಿಕಾರಿಗಳೂ ಮಾಡಿದ್ದಾರೆ; ಆ ಮನುಷ್ಯನು ತಾನು ವಾಸಮಾಡುವ ಜನರ ಅನ್ಯೋನ್ಯತೆಯಿಂದ ತೆಗೆಯಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಲ್ಲಾ ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿನಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು” ಎಂದು ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸಗಳೊಳಗೆ ಬರಬೇಕು; ಬಾರದವನು ತನ್ನ ಎಲ್ಲ ಆಸ್ತಿಪಾಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು,” ಎಂದು ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪ್ರಭುಗಳ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು ಎಂದು ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ, ಅವನ ಆಸ್ತಿಯೆಲ್ಲಾ ದಂಡವಾಗಿ ತೆಗೆದುಕೊಳ್ಳಲಾಗುವುದೆಂದೂ, ಅವನು ಸೆರೆಯಿಂದ ಬಂದವರ ಕೂಟದಿಂದ ಬಹಿಷ್ಕೃತನಾಗುವನು ಎಂದೂ ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:8
14 ತಿಳಿವುಗಳ ಹೋಲಿಕೆ  

ದೇವರ ಕಟ್ಟಳೆಗಳಿಗಾಗಲಿ ಅರಸನ ಆಜ್ಞೆಗಳಿಗಾಗಲಿ ಅವಿಧೇಯನಾಗುವವನಿಗೆ ದಂಡನೆಯಾಗಬೇಕು. ಅವರವರ ಅಪರಾಧಗಳ ಪ್ರಕಾರ ಮರಣಶಿಕ್ಷೆಯಿಂದಾಗಲಿ ಗಡಿಪಾರಿನಿಂದಾಗಲಿ ಅವರ ಆಸ್ತಿಪಾಸ್ತಿಗಳ ಜಪ್ತಿಯಿಂದಾಗಲಿ ಸೆರೆಮನೆವಾಸದಿಂದಾಗಲಿ ಅವರಿಗೆ ದಂಡನೆಯಾಗಬೇಕು.


ಜನರು ನಿಮ್ಮನ್ನು ತಮ್ಮ ಸಭಾಮಂದಿರಗಳಿಂದ ಬಹಿಷ್ಕರಿಸುವರು. ಹೌದು, ನಿಮ್ಮನ್ನು ಕೊಂದರೆ ದೇವರ ಸೇವೆ ಮಾಡಿದಂತಾಗುವುದು ಎಂದು ಜನರು ಯೋಚಿಸುವ ಕಾಲ ಬರಲಿದೆ.


ಯೆಹೂದ್ಯನಾಯಕರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು! ನಮಗೇ ಉಪದೇಶಮಾಡುವಿಯಾ?” ಎಂದು ಉತ್ತರಕೊಟ್ಟರು. ಅಲ್ಲದೆ ಅವರು ಅವನನ್ನು ಬಲವಂತವಾಗಿ ಹೊರಗಟ್ಟಿದರು.


ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಹೆದರಿಕೊಂಡಿದ್ದರಿಂದ ಹಾಗೆ ಹೇಳಿದರು. ಯೇಸುವನ್ನು ಕ್ರಿಸ್ತನೆಂದು ಹೇಳುವ ಯಾರನ್ನೇ ಆಗಲಿ ಸಭಾಮಂದಿರದಿಂದ ಬಹಿಷ್ಕರಿಸುವುದಾಗಿ ಯೆಹೂದ್ಯನಾಯಕರುಗಳು ಪ್ರಕಟಿಸಿದ್ದರು.


ಅವನು ಅವರ ಮಾತನ್ನೂ ಕೇಳದಿದ್ದರೆ, ಸಭೆಗೆ ತಿಳಿಸು. ಅವನು ಸಭೆಯ ಮಾತನ್ನೂ ಕೇಳದಿದ್ದರೆ ಅವನನ್ನು ದೇವರಲ್ಲಿ ನಂಬಿಕೆ ಇಡದ ಮನುಷ್ಯನಂತಾಗಲಿ ಸುಂಕವಸೂಲಿಗಾರನಂತಾಗಲಿ ಪರಿಗಣಿಸಿರಿ.


ಇಸ್ರೇಲರು ದೇವರ ಕಟ್ಟಳೆಯನ್ನು ಕೇಳಿ ಅದಕ್ಕೆ ವಿಧೇಯರಾದರು. ಅನ್ಯರ ಸಂತತಿಯವರಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡರು.


ಸೌಲನು ಒಂದು ಜೊತೆ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ ಆ ತುಂಡುಗಳನ್ನು ಸಂದೇಶಕರಿಗೆ ಕೊಟ್ಟನು. “ಇಸ್ರೇಲಿನ ನಾಡಿನಲ್ಲೆಲ್ಲಾ ಈ ತುಂಡುಗಳನ್ನು ತೆಗೆದುಕೊಂಡು ಹೋಗಿ ಅವರಿಗೆ, ‘ಸೌಲನನ್ನೂ ಮತ್ತು ಸಮುವೇಲನನ್ನೂ ಹಿಂಬಾಲಿಸಿರಿ, ಸೌಲನನ್ನು ಮತ್ತು ಸಮುವೇಲನನ್ನು ಯಾರು ಹಿಂಬಾಲಿಸುವುದಿಲ್ಲವೋ, ಯಾರು ಅವರಿಗೆ ಸಹಾಯ ಮಾಡುವುದಿಲ್ಲವೋ ಅಂತಹವರ ಹಸುಗಳಿಗೂ ಇದೇ ಗತಿಯಾಗುತ್ತದೆ’ ಎಂದು ತಿಳಿಸಿರಿ” ಎಂದನು. ಯೆಹೋವನ ಮೇಲೆ ಜನರಲ್ಲಿ ಹೆಚ್ಚು ಭಯವುಂಟಾಯಿತು. ಅವರೆಲ್ಲಾ ಒಂದೇ ಮನಸ್ಸಿನಿಂದ ಒಟ್ಟಾಗಿ ಸೇರಿ ಬಂದರು.


ಆಮೇಲೆ ಇಸ್ರೇಲರು, “ಯೆಹೋವನ ಮುಂದೆ ಸಭೆ ಸೇರಿದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರೇಲರು ಯಾರಾದರೂ ಇದ್ದಾರೆಯೇ” ಎಂದು ವಿಚಾರಮಾಡಿದರು. ಮಿಚ್ಛೆ ನಗರದಲ್ಲಿ ಬೇರೆ ಕುಲಗಳ ಜೊತೆಗೆ ಯಾರು ಸೇರುವುದಿಲ್ಲವೋ ಅವರನ್ನು ಕೊಲೆ ಮಾಡುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು. ಅದಕ್ಕಾಗಿ ಅವರು ಅದರ ಬಗ್ಗೆ ವಿಚಾರಮಾಡಿದರು.


ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ಎಲ್ಲಾ ವಸ್ತುಗಳು ಯೆಹೋವನ ಸ್ವತ್ತಾಗಿವೆ. ಆದ್ದರಿಂದ ಅವುಗಳನ್ನು ಆತನ ಭಂಡಾರಕ್ಕೆ ಸೇರಿಸಬೇಕು” ಎಂದು ಆಜ್ಞಾಪಿಸಿದನು.


“ಜನರು ಯೆಹೋವನಿಗೆ ಸಲ್ಲಿಸುವ ವಿಶೇಷ ಬಗೆಯ ಕಾಣಿಕೆಯು ಯೆಹೋವನಿಗೆ ಮಾತ್ರ ಸೇರಿದ್ದಾಗಿರುತ್ತದೆ. ಅದನ್ನು ಬಿಡಿಸಿಕೊಳ್ಳುವುದಕ್ಕಾಗಲಿ ಮಾರುವುದಕ್ಕಾಗಲಿ ಆಗುವುದಿಲ್ಲ. ಅದು ಯೆಹೋವನದ್ದಾಗಿರುತ್ತದೆ. ಈ ಕಾಣಿಕೆಗಳು ಜನರನ್ನು, ಪಶುಗಳನ್ನು ಮತ್ತು ಪಿತ್ರಾರ್ಜಿತ ಸ್ವತ್ತುಗಳನ್ನು ಒಳಗೊಂಡಿವೆ.


ಆಮೇಲೆ ಅವನು ಯೆಹೂದಪ್ರಾಂತ್ಯ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರಿಗೆ ಸಂದೇಶ ಕಳುಹಿಸಿದನು. ಅದರಲ್ಲಿ, ಸೆರೆಯಿಂದ ಹಿಂದಿರುಗಿದ್ದ ಯೆಹೂದ್ಯರೆಲ್ಲರೂ ಜೆರುಸಲೇಮಿನಲ್ಲಿ ಬಂದು ಸೇರಬೇಕು.


ಮೂರು ದಿನಗಳೊಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಿಂದ ಎಲ್ಲಾ ಗಂಡಸರು ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಜೆರುಸಲೇಮಿನ ದೇವಾಲಯದ ಅಂಗಳಕ್ಕೆ ಬಂದು ಸೇರಿದರು. ನಡೆಯಲಿಕ್ಕಿರುವ ಕೂಟದ ಉದ್ದೇಶದಿಂದಲೂ ಆ ದಿವಸ ಬಂದಿದ್ದ ಮಳೆಯ ದೆಸೆಯಿಂದಲೂ ನೆರೆದಿದ್ದ ಜನರು ನಡುಗುತ್ತಿದ್ದರು.


ಪ್ರಧಾನ ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನಿನ ಸನ್ಬಲ್ಲಟನಿಗೆ ಅಳಿಯನಾದನು. ನಾನು ಅವನನ್ನು ಆ ಸ್ಥಳದಿಂದ ಹೊರಗೆ ಓಡಿಸಿಬಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು