Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:1 - ಪರಿಶುದ್ದ ಬೈಬಲ್‌

1 ತಮ್ಮತಮ್ಮ ಸ್ವಂತ ಊರುಗಳಲ್ಲಿ ಹೋಗಿ ನೆಲೆಸಿದ್ದ ಇಸ್ರೇಲರು ಏಳನೆಯ ತಿಂಗಳಲ್ಲಿ ಜೆರುಸಲೇಮಿನಲ್ಲಿ ಒಂದೇ ಮನಸ್ಸಿನಿಂದ ಬಂದು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೆರೆವಾಸದಿಂದ ಹಿಂದಿರುಗಿ ಬಂದು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಯೇಲರು, ಏಳನೆಯ ತಿಂಗಳಿನಲ್ಲಿ ಏಕ ಮನಸ್ಸಿನಿಂದ ಜೆರುಸಲೇಮಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ಯರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇವಿುಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು, ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:1
16 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.


ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು.


“ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಮೊದಲಿನ ದಿನವು ನಿಮಗೆ ವಿಶ್ರಾಂತಿಯ ವಿಶೇಷ ದಿನವಾಗಿರಬೇಕು. ಆಗ ನೀವು ಪವಿತ್ರಸಭೆಯಾಗಿ ಸೇರಬೇಕು. ಜ್ಞಾಪಕಮಾಡುವ ವಿಶೇಷ ಸಮಯಕ್ಕಾಗಿ ನೀವು ತುತ್ತೂರಿಯನ್ನು ಊದಿಸಬೇಕು.


ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.


ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರೆಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸುವರು.


ಅವರು ಅಭ್ಯಾಸಿಸಿದಾಗ ಧರ್ಮಶಾಸ್ತ್ರದಲ್ಲಿ ಈ ಆಜ್ಞೆಗಳನ್ನು ಕಂಡುಕೊಂಡರು: ಏಳನೆಯ ತಿಂಗಳಲ್ಲಿ ಯೆಹೋವನ ಆಜ್ಞೆಗನುಸಾರವಾಗಿ ವಿಶೇಷ ಹಬ್ಬವನ್ನು ಆಚರಿಸಲು ಜೆರುಸಲೇಮಿನಲ್ಲಿ ಸೇರಿಬಂದು ತಾತ್ಕಾಲಿಕವಾದ ಬಿಡಾರಗಳಲ್ಲಿ ವಾಸಿಸಬೇಕು. ಅವರು ತಮ್ಮ ಊರುಗಳ ಮತ್ತು ಜೆರುಸಲೇಮಿನ, “ಬೆಟ್ಟಪ್ರದೇಶಗಳಿಗೆ ಹೋಗಿ ಆಲೀವ್, ಖರ್ಜೂರ, ಕಾಡು ಆಲೀವ್, ಸುಗಂಧ ಮುಂತಾದ ಮರಗಳ ರೆಂಬೆಗಳನ್ನು ತೆಗೆದುಕೊಂಡು ಬಂದು ಅವುಗಳಿಂದ ಆ ಬಿಡಾರಗಳನ್ನು ಮಾಡಬೇಕು” ಎಂಬುದಾಗಿ ಯೆಹೋವನು ಮೋಶೆಗೆ ಕೊಟ್ಟಿದ್ದ ಆಜ್ಞೆಗಳೇ ಅವು.


ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು ಮತ್ತು ದೇವಾಲಯದ ಸೇವಕರು ತಮ್ಮ ತಮ್ಮ ಊರುಗಳಿಗೆ ಹೋಗಿ ನೆಲೆಸಿದರು. ಇತರ ಎಲ್ಲಾ ಇಸ್ರೇಲರು ತಮ್ಮ ಪಟ್ಟಣಗಳಲ್ಲಿ ನೆಲೆಸಿದರು. ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ತಮ್ಮತಮ್ಮ ಪಟ್ಟಣಗಳಲ್ಲಿ ನೆಲೆಸಿದರು.


ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.


“ಇದು ನಿಮಗೆ ಶಾಶ್ವತವಾದ ಕಟ್ಟಳೆ: ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಆಹಾರವನ್ನು ತೆಗೆದುಕೊಳ್ಳದೆ ಉಪವಾಸ ಮಾಡಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ದೇಶದಲ್ಲಿ ವಾಸಿಸುವ ಪ್ರವಾಸಿಗರಾಗಲಿ ಪರದೇಶಸ್ಥರಾಗಲಿ ಯಾವ ಕೆಲಸವನ್ನು ಮಾಡಬಾರದು.


ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ಒಂದೇ ಮನಸ್ಸುಳ್ಳವರಾಗಿ ಕೂಡಿಬಂದರು. ಅವರು ಬುಗ್ಗೆ ಬಾಗಿಲಿನ ಮುಂದಿದ್ದ ಜಾಗದಲ್ಲಿ ಸೇರಿಬಂದರು. ಇಸ್ರೇಲರಿಗೆ ಮೋಶೆಯ ಮೂಲಕವಾಗಿ ಯೆಹೋವನು ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಓದಲು ಜನರು ಎಜ್ರನನ್ನು ಕೇಳಿಕೊಂಡರು.


“ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.


ಒಟ್ಟು ಇತರರು ಮುನ್ನೂರ ಎಪ್ಪತ್ತೈದು ಪೌಂಡು ಬಂಗಾರ, ಹದಿಮೂರುವರೆ ಕ್ವಿಂಟಾಲ್ ಬೆಳ್ಳಿ ಮತ್ತು ಅರವತ್ತೇಳು ಯಾಜಕರ ಬಟ್ಟೆಯನ್ನು ದಾನವಾಗಿ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು