Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:12 - ಪರಿಶುದ್ದ ಬೈಬಲ್‌

12 ಆದರೆ ಮೊದಲಿನ ದೇವಾಲಯವನ್ನೂ ಅದರ ವೈಭವವನ್ನೂ ನೋಡಿದ್ದ ಕುಲಪ್ರಧಾನರು, ಯಾಜಕರು ಮತ್ತು ಲೇವಿಯರು ಗಟ್ಟಿಯಾಗಿ ಅತ್ತರು. ಇತರರು ಗಟ್ಟಿಯಾಗಿ ಹರ್ಷಧ್ವನಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಯಾಜಕರಲ್ಲಿಯೂ, ಲೇವಿಯರಲ್ಲಿಯೂ, ಗೋತ್ರಪ್ರಧಾನರಲ್ಲಿಯೂ ಅನೇಕರು ಅಂದರೆ ಮೊದಲಿನ ದೇವಾಲಯವನ್ನು ನೋಡಿದ್ದ ಹಿರಿಯರು ತಮ್ಮ ಕಣ್ಣ ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಟ್ಟಿದ್ದನ್ನು ನೋಡಿದಾಗ ಬಹಳವಾಗಿ ಅತ್ತರು. ಬೇರೆ ಹಲವರು ಹರ್ಷಧ್ವನಿಯಿಂದ ಜಯಘೋಷ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯಾಜಕರಲ್ಲೂ ಲೇವಿಯರಲ್ಲೂ ಗೋತ್ರಪ್ರಧಾನರಲ್ಲೂ ಅನೇಕರು ಅಂದರೆ, ಹಿಂದಿನ ದೇವಾಲಯವನ್ನು ನೋಡಿದ್ದ ಮುದುಕರು, ತಮ್ಮ ಕಣ್ಣು ಮುಂದೆ ದೇವಾಲಯದ ಅಸ್ತಿವಾರ ಹಾಕಲಾದುದನ್ನು ನೋಡಿದಾಗ, ಬಹಳವಾಗಿ ಅತ್ತರು; ಬೇರೆ ಹಲವರು ಹರ್ಷಧ್ವನಿಯಿಂದ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಗೋತ್ರ ಪ್ರಧಾನರಲ್ಲಿಯೂ ಅನೇಕರು ಅಂದರೆ ಮುಂಚಿನ ದೇವಾಲಯವನ್ನು ನೋಡಿದ್ದ ಮುದುಕರು ತಮ್ಮ ಕಣ್ಣು ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಡುವದನ್ನು ನೋಡುವಾಗ ಬಹಳವಾಗಿ ಅತ್ತರು; ಬೇರೆ ಹಲವರು ಹರ್ಷಧ್ವನಿಯಿಂದ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮೊದಲಿನ ಮಂದಿರವನ್ನು ಕಂಡಿದ್ದ ವೃದ್ಧರಾದ ಯಾಜಕರೂ ಲೇವಿಯ ಅನೇಕ ಕುಟುಂಬಗಳ ಪ್ರಮುಖರೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ಮುಂದೆ ಹಾಕುತ್ತಿರುವಾಗ ದೊಡ್ಡ ಶಬ್ದದಿಂದ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:12
12 ತಿಳಿವುಗಳ ಹೋಲಿಕೆ  

‘ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಈ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ?


ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.”


ಅತ್ಯಂತ ಚಿಕ್ಕ ಕುಟುಂಬವು ದೊಡ್ಡ ಕುಲವಾಗುವದು. ಅತ್ಯಂತ ಎಳೆಯ ಕುಟುಂಬವು ಬಲಾಢ್ಯವಾದ ಜನಾಂಗವಾಗುವದು. ತಕ್ಕ ಕಾಲದಲ್ಲಿ ಯೆಹೋವನಾದ ನಾನು ಬೇಗನೆ ಬರುವೆನು. ಇವುಗಳೆಲ್ಲಾ ನೆರವೇರುವಂತೆ ಮಾಡುವೆನು.”


ನನಗೆ ಅಮೂಲ್ಯವಾದ ಯಾಕೋಬೇ, ಭಯಪಡಬೇಡ. ನನ್ನ ಪ್ರಿಯ ಇಸ್ರೇಲೇ, ಹೆದರಬೇಡ. ನಾನು ನಿಜವಾಗಿಯೂ ನಿನಗೆ ಸಹಾಯ ಮಾಡುತ್ತೇನೆ.” ಇದು ಯೆಹೋವನ ನುಡಿ. “ಇಸ್ರೇಲರ ಪರಿಶುದ್ಧನೂ ನಿನ್ನನ್ನು ರಕ್ಷಿಸುವಾತನೂ ಈ ಮಾತುಗಳನ್ನು ಹೇಳಿದ್ದಾನೆ:


ಅಳುತ್ತಾ ಹೊಲಕ್ಕೆ ಬೀಜವನ್ನು ಹೊತ್ತುಕೊಂಡು ಹೋಗುವವನು ಹರ್ಷದಿಂದ ಸಿವುಡುಗಳನ್ನು ಹೊತ್ತುಕೊಂಡು ಬರುವನು!


ಆಗ, ನೀನು ಮೊದಲು ಹೊಂದಿದ್ದೆಲ್ಲ ಅಲ್ಪವಾಗಿ ತೋರುವುದು; ನಿನ್ನ ಭವಿಷ್ಯವು ಬಹು ಯಶಸ್ವಿಯಾಗುವುದು.


ಅವರ ಉತ್ಸಾಹಧ್ವನಿಯಲ್ಲಿ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ತಿಳಿಯುತ್ತಿರಲಿಲ್ಲ. ಆದರೆ ಆ ಧ್ವನಿಯು ಬಹುದೂರದವರೆಗೂ ಕೇಳಿಸಿತು.


ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಇಸ್ರೇಲಿನ ಮತ್ತು ಯೆಹೂದದ ಜನರು ಒಟ್ಟಿಗೆ ಸೇರುವರು. ಅವರು ಒಟ್ಟುಗೂಡಿ ಬಹಳವಾಗಿ ಗೋಳಾಡುವರು; ತಮ್ಮ ದೇವರಾದ ಯೆಹೋವನನ್ನು ಹುಡುಕಲು ಹೋಗುವರು.


ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು. ನಮ್ಮ ದೇವರನ್ನು ಸಂಕೀರ್ತಿಸಿರಿ. ಆತನನ್ನು ಸ್ತುತಿಸುವುದು ಒಳ್ಳೆಯದೂ ಸಂತೋಷಕರವೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು