Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:13 - ಪರಿಶುದ್ದ ಬೈಬಲ್‌

13 ಅವರ ಉತ್ಸಾಹಧ್ವನಿಯಲ್ಲಿ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ತಿಳಿಯುತ್ತಿರಲಿಲ್ಲ. ಆದರೆ ಆ ಧ್ವನಿಯು ಬಹುದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಜನರು ಮಹಾಧ್ವನಿಯಿಂದ ಅರ್ಭಟಿಸುತ್ತಿದ್ದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಗೊತ್ತಾಗಲಿಲ್ಲ. ಗದ್ದಲವು ಬಹುದೂರದ ವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ಹೇಳಲಾಗಲಿಲ್ಲ. ಗದ್ದಲವು ಬಹುದೂರದವರೆಗೂ ಕೇಳಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಜನರು ಮಹಾಧ್ವನಿಯಿಂದ ಆರ್ಭಟಿಸುತ್ತಿದ್ದದರಿಂದ ಹರ್ಷಧ್ವನಿ ಯಾವದೋ ಅಳುವವರ ಧ್ವನಿ ಯಾವದೋ ಗೊತ್ತಾಗಲಿಲ್ಲ. ಗದ್ದಲವು ಬಹುದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ, ಹರ್ಷಧ್ವನಿ ಯಾವುದು, ಅಳುವವರ ಧ್ವನಿ ಯಾವುದು ಎಂದು ಗುರುತಿಸಲಾಗಲಿಲ್ಲ. ಗದ್ದಲವು ಬಹು ದೂರದವರೆಗೂ ಕೇಳಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:13
14 ತಿಳಿವುಗಳ ಹೋಲಿಕೆ  

ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಪಾಳೆಯಕ್ಕೆ ಬಂದಾಗ ಇಸ್ರೇಲರೆಲ್ಲರು ಆರ್ಭಟಿಸಿದರು. ಅವರ ಆರ್ಭಟವು ನೆಲವನ್ನು ನಡುಗಿಸಿತು.


ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ, ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.”


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ದೇವರಲ್ಲಿ ಭರವಸವಿಟ್ಟಿರುವ ಜನರೆಲ್ಲರೂ ಸದಾಕಾಲ ಸಂತೋಷವಾಗಿರಲಿ. ನಿನ್ನ ಹೆಸರನ್ನು ಪ್ರೀತಿಸುವ ಜನರನ್ನು ಕಾಪಾಡಿ ಅವರಿಗೆ ಶಕ್ತಿಯನ್ನು ದಯಪಾಲಿಸು.


ಆ ವಿಶೇಷ ದಿನದಲ್ಲಿ ಯಾಜಕರು ಹೆಚ್ಚಿನ ಸಂಖ್ಯೆಯಲ್ಲಿ ಯಜ್ಞವನ್ನರ್ಪಿಸಿದರು. ಜನರೆಲ್ಲಾ ಸಂತೋಷಪಟ್ಟರು. ದೇವರು ಅವರಿಗೆಲ್ಲಾ ಅತ್ಯಾನಂದವನ್ನು ಉಂಟುಮಾಡಿದನು; ಹೆಂಗಸರೂ ಮಕ್ಕಳೂ ಉತ್ಸಾಹದಿಂದ ಆನಂದಿಸಿದರು; ಜೆರುಸಲೇಮಿನಿಂದ ಹೊರಟ ಅವರ ಹರ್ಷಧ್ವನಿಯು ಬಹುದೂರದವರೆಗೆ ಕೇಳಿಸಿತು.


ನಂತರ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಗೀಹೋನ್ ಬುಗ್ಗೆಯ ಹತ್ತಿರ ಸೊಲೊಮೋನನನ್ನು ಅಭಿಷೇಕಿಸಿದರು. ಅನಂತರ ಅವರು ನಗರಕ್ಕೆ ಹೋದರು. ಅವರನ್ನು ಜನರು ಹಿಂಬಾಲಿಸಿದರು. ಈಗ ನಗರದ ಜನರು ತುಂಬಾ ಸಂತೋಷದಿಂದ ಇದ್ದಾರೆ. ಆ ಶಬ್ದವನ್ನೇ ನೀವು ಕೇಳುತ್ತಿರುವುದು.


ಜನರೆಲ್ಲರೂ ಸೊಲೊಮೋನನನ್ನು ಹಿಂಬಾಲಿಸುತ್ತಾ ನಗರಕ್ಕೆ ಬಂದರು. ಅವರು ಕೊಳಲುಗಳನ್ನು ಊದುತ್ತಾ ಸಂತಸದಿಂದ ಕೂಗಾಡುತ್ತಾ ಬಂದರು. ಅವರು ಮಾಡಿದ ಶಬ್ದವು ಭೂಮಿಯನ್ನೇ ನಡುಗಿಸುವಂತಿತ್ತು.


ಆದ್ದರಿಂದ ಇಸ್ರೇಲರು ತಾವು ಗೋಳಾಡಿದ ಸ್ಥಳಕ್ಕೆ ಬೋಕೀಮ್ ಎಂದು ಕರೆದರು. ಬೋಕೀಮಿನಲ್ಲಿ ಇಸ್ರೇಲರು ಯೆಹೋವನಿಗೋಸ್ಕರ ಯಜ್ಞ ಮಾಡಿದರು.


ಆದರೆ ಮೊದಲಿನ ದೇವಾಲಯವನ್ನೂ ಅದರ ವೈಭವವನ್ನೂ ನೋಡಿದ್ದ ಕುಲಪ್ರಧಾನರು, ಯಾಜಕರು ಮತ್ತು ಲೇವಿಯರು ಗಟ್ಟಿಯಾಗಿ ಅತ್ತರು. ಇತರರು ಗಟ್ಟಿಯಾಗಿ ಹರ್ಷಧ್ವನಿ ಮಾಡಿದರು.


ಆ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದ ಬೇರೆ ಜನರು ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರಿಗೆ ವಿರುದ್ಧವಾಗಿದ್ದರು. ಸೆರೆಯಿಂದ ಬಂದ ಜನರು ಇಸ್ರೇಲರ ದೇವರಾದ ಯೆಹೋವನ ದೇವಾಲಯವನ್ನು ಕಟ್ಟುತ್ತಿದ್ದಾರೆಂಬ ವರ್ತಮಾನವನ್ನು ವೈರಿಗಳು ಕೇಳಿ ಜೆರುಬ್ಬಾಬೆಲನ ಬಳಿಗೂ ಮತ್ತು ಕುಲಪ್ರಧಾನರ ಬಳಿಗೂ ಬಂದು, “ಕಟ್ಟುವ ಕಾರ್ಯದಲ್ಲಿ ನಿಮಗೆ ಸಹಾಯ ಮಾಡಲು ಬಂದಿದ್ದೇವೆ. ನಾವು ಸಹ ನಿಮ್ಮಂತೆಯೇ ದೇವರನ್ನು ಪ್ರಾರ್ಥಿಸುತ್ತೇವೆ. ಅಶ್ಶೂರದ ರಾಜನಾದ ಏಸರ್ಹದ್ದೋನನು ನಮ್ಮನ್ನು ಇಲ್ಲಿಗೆ ತಂದು ಬಿಟ್ಟಂದಿನಿಂದ ನಾವು ನಿಮ್ಮ ದೇವರನ್ನೇ ಆರಾಧಿಸುತ್ತೇವೆ” ಅಂದರು.


ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಇಸ್ರೇಲಿನ ಮತ್ತು ಯೆಹೂದದ ಜನರು ಒಟ್ಟಿಗೆ ಸೇರುವರು. ಅವರು ಒಟ್ಟುಗೂಡಿ ಬಹಳವಾಗಿ ಗೋಳಾಡುವರು; ತಮ್ಮ ದೇವರಾದ ಯೆಹೋವನನ್ನು ಹುಡುಕಲು ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು