ಎಜ್ರ 4:1 - ಪರಿಶುದ್ದ ಬೈಬಲ್1-2 ಆ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದ ಬೇರೆ ಜನರು ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರಿಗೆ ವಿರುದ್ಧವಾಗಿದ್ದರು. ಸೆರೆಯಿಂದ ಬಂದ ಜನರು ಇಸ್ರೇಲರ ದೇವರಾದ ಯೆಹೋವನ ದೇವಾಲಯವನ್ನು ಕಟ್ಟುತ್ತಿದ್ದಾರೆಂಬ ವರ್ತಮಾನವನ್ನು ವೈರಿಗಳು ಕೇಳಿ ಜೆರುಬ್ಬಾಬೆಲನ ಬಳಿಗೂ ಮತ್ತು ಕುಲಪ್ರಧಾನರ ಬಳಿಗೂ ಬಂದು, “ಕಟ್ಟುವ ಕಾರ್ಯದಲ್ಲಿ ನಿಮಗೆ ಸಹಾಯ ಮಾಡಲು ಬಂದಿದ್ದೇವೆ. ನಾವು ಸಹ ನಿಮ್ಮಂತೆಯೇ ದೇವರನ್ನು ಪ್ರಾರ್ಥಿಸುತ್ತೇವೆ. ಅಶ್ಶೂರದ ರಾಜನಾದ ಏಸರ್ಹದ್ದೋನನು ನಮ್ಮನ್ನು ಇಲ್ಲಿಗೆ ತಂದು ಬಿಟ್ಟಂದಿನಿಂದ ನಾವು ನಿಮ್ಮ ದೇವರನ್ನೇ ಆರಾಧಿಸುತ್ತೇವೆ” ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸೆರೆಯಿಂದ ಮರಳಿ ಬಂದವರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಮಂದಿರವನ್ನು ಕಟ್ಟುತ್ತಿದ್ದಾರೆಂಬ ಸಮಾಚಾರ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸೆರೆಯಿಂದ ತಿರಿಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿರುತ್ತಾರೆಂಬದನ್ನು ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳು ಕೇಳಿದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸೆರೆಯಿಂದ ಬಂದವರು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗಾಗಿ ಆಲಯವನ್ನು ಕಟ್ಟುತ್ತಾರೆಂಬುದಾಗಿ ಯೆಹೂದದ ಮತ್ತು ಬೆನ್ಯಾಮೀನನ ಶತ್ರುಗಳು ಕೇಳಿದಾಗ ಅಧ್ಯಾಯವನ್ನು ನೋಡಿ |
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.