Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:6 - ಪರಿಶುದ್ದ ಬೈಬಲ್‌

6 ಆ ಶತ್ರುಗಳು ಪರ್ಶಿಯ ರಾಜನಿಗೆ ಪತ್ರವನ್ನು ಬರೆದು ದೇವಾಲಯವನ್ನು ಕಟ್ಟುವ ಕಾರ್ಯವನ್ನು ನಿಲ್ಲಿಸಬೇಕೆಂದು ಬೇಡಿಕೊಂಡರು. ಅಹಷ್ವೇರೋಷನು ಪರ್ಶಿಯ ದೇಶದ ಅರಸನಾದಾಗ ಅವನಿಗೆ ಪತ್ರ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ, ಅಹಷ್ಟೇರೋಷನ ಆಳ್ವಿಕೆಯ ಆರಂಭದಲ್ಲಿ ಅವರು ಜುದೇಯ ಹಾಗು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದವರಿಗೆ ವಿರುದ್ಧ ಆಪಾದನ ಪತ್ರವನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಹಷ್ವೇರೋಷನ ಆಳಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ವಾಸಿಸುವವರಿಗೆ ವಿರೋಧವಾಗಿ ಆಪಾದನ ಪತ್ರವನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಅಹಷ್ವೇರೋಷನು ಆಳುವಾಗ, ಅವನ ಆಳ್ವಿಕೆಯ ಪ್ರಾರಂಭದಲ್ಲಿ, ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:6
13 ತಿಳಿವುಗಳ ಹೋಲಿಕೆ  

ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಂದು ನಡೆದ ಸಂಗತಿಗಳಿವು: ದಾರ್ಯಾವೆಷನು ಅಹಷ್ವೇರೋಷನೆಂಬವನ ಮಗನು. ದಾರ್ಯವೆಷನು ಮೇದ್ಯಯ ವಂಶದವನು. ಅವನು ಕಸ್ದೀಯ ರಾಜ್ಯದ ದೊರೆಯಾದನು.


ಅಹಷ್ವೇರೋಷನು ರಾಜನಾಗಿದ್ದಾಗ ನಡೆದ ಘಟನೆ. ಹಿಂದೂಸ್ಥಾನದಿಂದ ಇಥಿಯೋಪ್ಯದ ತನಕ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅವನು ಆಳುತ್ತಿದ್ದನು.


ಆಗ ಪರಲೋಕದಲ್ಲಾದ ಒಂದು ಮಹಾಶಬ್ದವನ್ನು ನಾನು ಕೇಳಿದೆನು: “ನಮ್ಮ ದೇವರ ಜಯವು, ಶಕ್ತಿಯು ಮತ್ತು ರಾಜ್ಯವು ಹಾಗೂ ಆತನವನಾಗಿರುವ ಕ್ರಿಸ್ತನ ಅಧಿಕಾರವು ಈಗ ಬಂದಿವೆ. ನಮ್ಮ ಸಹೋದರರ ಮೇಲೆ ದೂಷಣೆ ಮಾಡುವವನನ್ನು ಹೊರಕ್ಕೆ ಎಸೆದಿರುವುದರಿಂದ ಇವುಗಳೆಲ್ಲಾ ಬಂದಿವೆ. ನಮ್ಮ ದೇವರ ಮುಂದೆ ಹಗಲಿರುಳು ನಮ್ಮ ಸಹೋದರರ ಬಗ್ಗೆ ಅವನು ದೂರು ಹೇಳಿದನು.


ಪೌಲನು ನ್ಯಾಯಾಲಯದೊಳಗೆ ಬಂದನು. ಜೆರುಸಲೇಮಿನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತುಕೊಂಡು ಅವನ ಮೇಲೆ ಅನೇಕ ದೋಷಾರೋಪಗಳನ್ನು ಮಾಡಿದರು. ಆದರೆ ಅವುಗಳಲ್ಲಿ ಯಾವುದಕ್ಕೂ ಆಧಾರವಿರಲಿಲ್ಲ.


ಈಗ ನನಗೆ ವಿರೋಧವಾಗಿ ಹೇಳುತ್ತಿರುವ ಸಂಗತಿಗಳನ್ನು ಈ ಯೆಹೂದ್ಯರು ನಿರೂಪಿಸಲಾರರು.


ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು. “ಈತನು ಯೇಸು, ಯೆಹೂದ್ಯರ ರಾಜ” ಎಂಬುದೇ ಆ ಅಪರಾಧ.


ಯೆಹೂದ ಜನರ ವಿರುದ್ಧವಾಗಿರಲು ಸರಕಾರದ ಅಧಿಕಾರಿಗಳಿಗೆ ಲಂಚಕೊಟ್ಟು ಪ್ರೋತ್ಸಾಹಿಸಿದರು. ಯೆಹೂದ್ಯರು ದೇವಾಲಯ ಕಟ್ಟುವ ಕಾರ್ಯವನ್ನು ನಿಲ್ಲಿಸಲು ಈ ಅಧಿಕಾರಿಗಳು ಪದೇಪದೇ ತೊಂದರೆಪಡಿಸಿದರು. ಪರ್ಶಿಯಾದ ಅರಸನಾದ ಸೈರಸನ ರಾಜ್ಯಭಾರದ ಆಳ್ವಿಕೆಯಲ್ಲಿಯೂ ಅವನ ನಂತರ ಪಟ್ಟಕ್ಕೆ ಬಂದ ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಇದೇ ರೀತಿ ಮುಂದುವರಿಯಿತು.


ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.


ಆಮೇಲೆ ಇಸಾಕನ ಸೇವಕರು ಮತ್ತೊಂದು ಬಾವಿಯನ್ನು ತೋಡಿದರು. ಅಲ್ಲಿಯ ಜನರೂ ಆ ಬಾವಿಗಾಗಿ ವಾದಮಾಡಿದರು. ಆದ್ದರಿಂದ ಇಸಾಕನು ಆ ಬಾವಿಗೆ “ಸಿಟ್ನಾ” ಎಂದು ಹೆಸರಿಟ್ಟನು.


ಹೀಗೆ ಹತ್ತನೇ ತಿಂಗಳಾದ ಟೆಬೇತ್ ಮಾಸದಲ್ಲಿ ರಾಜನ ಏಳನೇ ವರ್ಷದಲ್ಲಿ ಎಸ್ತೇರಳು ಅಹಷ್ವೇರೋಷನ ರಾಜನಿವಾಸಕ್ಕೆ ಕರೆದೊಯ್ಯಲ್ಪಟ್ಟಳು.


ಹಾಮಾನನು ಅರಸನಾದ ಅಹಷ್ವೇರೋಷನ ಬಳಿಗೆ ಬಂದು, “ಅರಸನೇ, ನಿನ್ನ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗದವರು ಹಬ್ಬಿರುತ್ತಾರೆ. ಇವರು ಇತರ ಎಲ್ಲಾ ಜನರಿಂದ ಪ್ರತ್ಯೇಕವಾಗಿ ಇರುತ್ತಾರೆ. ಅವರ ನೀತಿರೀತಿಗಳೆಲ್ಲಾ ಬೇರೆ ಜನರಿಗಿಂತ ವಿಭಿನ್ನವಾಗಿರುತ್ತದೆ. ಅವರು ರಾಜನ ಕಟ್ಟಳೆಗೆ ವಿಧೇಯರಾಗುವುದಿಲ್ಲ. ನಿನ್ನ ರಾಜ್ಯದಲ್ಲಿ ಅವರು ಹೀಗೆಯೇ ಇರುವದು ಒಳ್ಳೆಯದಲ್ಲ.


“ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ರಾಜರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ರಾಜರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು