Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:10 - ಪರಿಶುದ್ದ ಬೈಬಲ್‌

10 ಅವುಗಳನ್ನು ಜೆರುಸಲೇಮಿನ ಯಾಜಕರಿಗೆ ಕೊಡಿರಿ. ಅವುಗಳನ್ನು ಯಜ್ಞವಾಗಿ ಸಮರ್ಪಿಸಿದಾಗ ಪರಲೋಕದ ದೇವರು ಅದನ್ನು ಮೆಚ್ಚುವನು. ಯಾಜಕರು ನನಗಾಗಿಯೂ ನನ್ನ ಮಕ್ಕಳಿಗಾಗಿಯು ಪ್ರಾರ್ಥಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರಾದರೋ ಪರಲೋಕ ದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಅವರು ಪರಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ, ಅರಸನ ಪ್ರಾಣಕ್ಕೋಸ್ಕರವೂ, ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:10
11 ತಿಳಿವುಗಳ ಹೋಲಿಕೆ  

ಅಂತೆಯೇ, ನಾನು ನಿಮ್ಮನ್ನು ಕಳುಹಿಸಿದ ನಗರಕ್ಕೆ ಒಳ್ಳೆಯದನ್ನು ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ಆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.”


ಪರಲೋಕದ ದೇವರು ಯಾವಯಾವ ವಸ್ತುಗಳಿಗಾಗಿ ಎಜ್ರನಿಗೆ ಆಜ್ಞಾಪಿಸಿರುವನೊ ಅವುಗಳನ್ನೆಲ್ಲ ನೀವು ಎಜ್ರನಿಗೆ ಸಂಪೂರ್ಣವಾಗಿಯೂ ಶೀಘ್ರವಾಗಿಯೂ ಒದಗಿಸಬೇಕು. ಇವುಗಳನ್ನು ಪರಲೋಕದ ದೇವರ ಆಲಯಕ್ಕಾಗಿ ಮಾಡಿರಿ. ನನ್ನ ರಾಜ್ಯದ ಮೇಲಾಗಲಿ ನನ್ನ ಮಕ್ಕಳ ಮೇಲಾಗಲಿ ದೇವರು ಸಿಟ್ಟುಗೊಳ್ಳುವುದು ನಮಗೆ ಇಷ್ಟವಿಲ್ಲ.


ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.


ಯಾಜಕನು ಪಶುವಿನ ಕಾಲುಗಳನ್ನೂ ಒಳಗಿನ ಭಾಗಗಳನ್ನೂ ನೀರಿನಿಂದ ತೊಳೆಯಬೇಕು. ಬಳಿಕ ಯಾಜಕನು ಪಶುವಿನ ಈ ಎಲ್ಲಾ ಭಾಗಗಳನ್ನೂ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಸಮರ್ಪಿಸಲ್ಪಟ್ಟ ಸರ್ವಾಂಗಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.


ಆ ಜನರಿಗೆ ಏನು ಅವಶ್ಯಕತೆಯಿದೆಯೋ ಅದನ್ನು ಪೂರೈಸಬೇಕು. ಅವರಿಗೆ ಎಳೆಹೋರಿಗಳು, ಟಗರುಗಳು, ಗಂಡುಕುರಿಗಳು ಪರಲೋಕದ ದೇವರಿಗೆ ಯಜ್ಞವನ್ನರ್ಪಿಸಲು ಬೇಕಾಗಿದ್ದರೆ ಅವುಗಳನ್ನು ಕೊಡಿರಿ. ಜೆರುಸಲೇಮಿನ ಯಾಜಕರು ಗೋಧಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಬೇಕು ಎಂದು ಹೇಳಿದರೆ ಅದನ್ನು ಪ್ರತಿದಿನ ತಪ್ಪದೆ ಒದಗಿಸಿರಿ.


ಆಗ ಅರಸನಾದ ನೆಬೂಕದ್ನೆಚ್ಚರನು ದಾನಿಯೇಲನ ಮುಂದೆ ಅಡ್ಡಬಿದ್ದು ಅವನನ್ನು ಹೊಗಳಿದನು; ಅವನ ಗೌರವಾರ್ಥವಾಗಿ ಧೂಪಹಾಕಿ ನೈವೇದ್ಯಮಾಡಬೇಕೆಂದು ಆಜ್ಞಾಪಿಸಿದನು. ಆಮೇಲೆ ಅರಸನು ದಾನಿಯೇಲನಿಗೆ,


ನೀವು ಕೇಳಿಕೊಂಡಂತೆ ನಿಮ್ಮ ಕುರಿಗಳನ್ನೂ ದನಕರುಗಳನ್ನೂ ನಿಮ್ಮೊಂದಿಗೆ ತೆಗೆದುಕೊಂಡು ಹೋಗಿ! ನನ್ನನ್ನು ಆಶೀರ್ವದಿಸಿ!” ಎಂದು ಹೇಳಿದನು.


“ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: “ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್‌ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು