Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:11 - ಪರಿಶುದ್ದ ಬೈಬಲ್‌

11 ಮಾತ್ರವಲ್ಲದೆ, ನನ್ನ ಆಜ್ಞೆ ಏನೆಂದರೆ: ಯಾವನಾದರೂ ನನ್ನ ಆಜ್ಞೆಯನ್ನು ಬದಲಾಯಿಸಿದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ಎಳೆದು ಅದನ್ನು ಶೂಲವನ್ನಾಗಿ ಮಾಡಿ, ಅವನನ್ನು ಅದಕ್ಕೆ ನೇತು ಹಾಕಬೇಕು; ಅವನ ಮನೆಯನ್ನು ಕೆಡವಿ ಅದನ್ನು ಮಣ್ಣುದಿಬ್ಬವನ್ನಾಗಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು, ಅದನ್ನು ಶೂಲವನ್ನಾಗಿ ಮಾಡಿ, ಅದರ ಮೇಲೆ ಅವನನ್ನು ಏರಿಸಬೇಕು ಮತ್ತು ಅ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ, ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು ಅದನ್ನು ಶೂಲವನ್ನಾಗಿ ಮಾಡಿ, ಅದಕ್ಕೆ ಅವನನ್ನು ಏರಿಸಬೇಕು; ಹಾಗು ಆ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕು. ಇದು ನನ್ನ ತೀರ್ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು ಅದನ್ನು ಶೂಲವನ್ನಾಗಿ ಮಾಡಿ ಅದಕ್ಕೆ ಅವನನ್ನು ಎತ್ತಬೇಕೆಂದೂ ಆ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದೂ ತೀರ್ಮಾನಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ಕೊಡುವ ಅಪ್ಪಣೆ ಏನೆಂದರೆ, ಯಾವನಾದರೂ ಈ ನನ್ನ ಆಜ್ಞೆಯನ್ನು ಬದಲು ಮಾಡಿದರೆ, ಅವನ ಮನೆಯಿಂದ ಒಂದು ತೊಲೆಯನ್ನು ತೆಗೆದು ಅದರಿಂದಲೇ ಅವನನ್ನು ಗಲ್ಲಿಗೆ ಏರಿಸಬೇಕು. ಅವನ ಮನೆಯನ್ನು ಇದರ ನಿಮಿತ್ತ ತಿಪ್ಪೆಯನ್ನಾಗಿ ಮಾಡಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:11
7 ತಿಳಿವುಗಳ ಹೋಲಿಕೆ  

ನಾನು ಈಗ ಸಕಲ ಜನಾಂಗ, ಕುಲ, ಭಾಷೆಗಳ ಜನರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರ ದೇವರ ವಿರುದ್ಧವಾಗಿ ಮಾತನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ. ಬೇರೆ ಯಾವ ದೇವರೂ ತನ್ನ ಭಕ್ತರನ್ನು ಈ ರೀತಿ ರಕ್ಷಿಸಲಾರನು” ಎಂದು ಹೇಳಿದನು.


ಆಗ ಅರಸನಾದ ನೆಬೂಕದ್ನೆಚ್ಚರನು, “ಹಾಗಲ್ಲ, ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ತಿಳಿಸಬೇಕು. ಇಲ್ಲವಾದರೆ ನಾನು ನಿಮ್ಮ ದೇಹವನ್ನು ತುಂಡುತುಂಡಾಗಿ ಕತ್ತರಿಸಲು ಆಜ್ಞಾಪಿಸುತ್ತೇನೆ. ನಿಮ್ಮ ಮನೆಗಳನ್ನು ಬೀಳಿಸಿ ಮಣ್ಣುಗುಡ್ಡೆಯನ್ನಾಗಿಯೂ ಮತ್ತು ಬೂದಿರಾಶಿಯನ್ನಾಗಿಯೂ ಮಾಡುವಂತೆ ಆಜ್ಞಾಪಿಸುತ್ತೇನೆ.


ದೇವರ ಕಟ್ಟಳೆಗಳಿಗಾಗಲಿ ಅರಸನ ಆಜ್ಞೆಗಳಿಗಾಗಲಿ ಅವಿಧೇಯನಾಗುವವನಿಗೆ ದಂಡನೆಯಾಗಬೇಕು. ಅವರವರ ಅಪರಾಧಗಳ ಪ್ರಕಾರ ಮರಣಶಿಕ್ಷೆಯಿಂದಾಗಲಿ ಗಡಿಪಾರಿನಿಂದಾಗಲಿ ಅವರ ಆಸ್ತಿಪಾಸ್ತಿಗಳ ಜಪ್ತಿಯಿಂದಾಗಲಿ ಸೆರೆಮನೆವಾಸದಿಂದಾಗಲಿ ಅವರಿಗೆ ದಂಡನೆಯಾಗಬೇಕು.


ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.


ಅದಕ್ಕೆ ಎಸ್ತೇರಳು, “ನಾನು ಒಂದು ಔತಣವನ್ನು ಸಿದ್ಧಪಡಿಸಿರುತ್ತೇನೆ. ಅದಕ್ಕೆ ನೀವೂ, ಹಾಮಾನನೂ ಬರಬೇಕು ಎಂದು ವಿನಂತಿಸುತ್ತೇನೆ” ಎಂದಳು.


ಬಾಳನ ಆಲಯವನ್ನೂ ಅವರು ಹಾಳುಗೆಡವಿದರು. ಅವರು ಬಾಳನ ಆಲಯವನ್ನು ಶೌಚಗೃಹವನ್ನಾಗಿ ಮಾಡಿದರು. ಇಂದೂ ಸಹ ಅದನ್ನು ಶೌಚಗೃಹವಾಗಿ ಬಳಸುತ್ತಾರೆ.


ಇಜ್ರೇಲ್ ಪ್ರದೇಶದ ಹೊಲದಲ್ಲಿ ಈಜೆಬೆಲಳ ದೇಹವು ಸಗಣಿಯಂತಿರುತ್ತದೆ. ಈಜೆಬೆಲಳ ದೇಹವನ್ನು ಜನರು ಗುರುತಿಸಲಾಗುವುದಿಲ್ಲ!” ಎಂದು ಹೇಳಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು