Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:4 - ಪರಿಶುದ್ದ ಬೈಬಲ್‌

4 ಅದರ ಗೋಡೆಯಲ್ಲಿ ಮೂರುಸಾಲು ದೊಡ್ಡ ಗಾತ್ರದ ಕಲ್ಲುಗಳಿರಬೇಕು; ಒಂದು ಸಾಲಿನಲ್ಲಿ ಮರದ ತೊಲೆಗಳಿರಬೇಕು. ದೇವಾಲಯ ಕಟ್ಟಲು ತಗಲುವ ಖರ್ಚುವೆಚ್ಚವೆಲ್ಲವನ್ನು ರಾಜನ ಖಜಾನೆಯಿಂದ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೊಡ್ಡ ಕಲ್ಲುಗಳ ಮೂರು ಸಾಲುಗಳಾದ ಮೇಲೆ ಹೊಸ ಮರದ ಒಂದು ಸಾಲನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೊಡ್ಡ ಕಲ್ಲುಗಳ ಮೂರು ವರಸೆಗಳಾದ ಮೇಲೆ, ಹೊಸ ಮರದ ಒಂದು ವರಸೆಯನ್ನು ಹಾಕಿ ಕಟ್ಟಬೇಕು. ಇದರ ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೊಡ್ಡ ಕಲ್ಲುಗಳ ಮೂರು ವರಸೆಗಳಾದ ಮೇಲೆ ಹೊಸ ಮರದ ಒಂದು ವರಸೆಯನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೊಡ್ಡ ಕಲ್ಲುಗಳ ಮೂರು ಸಾಲುಗಳೂ, ಹೊಸ ತೊಲೆಗಳ ಒಂದು ಸಾಲೂ ಇರಲಿ. ಅದರ ಖರ್ಚು ಅರಮನೆಯ ಬೊಕ್ಕಸದಿಂದ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:4
10 ತಿಳಿವುಗಳ ಹೋಲಿಕೆ  

ನಂತರ ಅವರು ಒಳಾಂಗಣವನ್ನು ನಿರ್ಮಿಸಿದರು. ಅವರು ಒಳಾಂಗಣದ ಸುತ್ತಲೂ ಗೋಡೆಗಳನ್ನು ನಿರ್ಮಿಸಿದರು. ಪ್ರತಿಯೊಂದು ಗೋಡೆಯು ಕತ್ತರಿಸಿದ ಕಲ್ಲುಗಳ ಮೂರು ಸಾಲುಗಳನ್ನೂ ದೇವದಾರುಮರದ ತೊಲೆಗಳ ಒಂದು ಸಾಲನ್ನೂ ಹೊಂದಿತ್ತು.


ರಾಜರುಗಳು ತಮ್ಮ ಕಾಣಿಕೆಗಳನ್ನು ತೆಗೆದುಕೊಂಡು ಜೆರುಸಲೇಮಿನ ನಿನ್ನ ಆಲಯಕ್ಕೆ ಬರುವರು.


ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಲು ತನ್ನ ಬಾಯನ್ನು ತೆರೆದು, ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು.


ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. ಆ ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತು ಕೊಡುವರು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”


ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ.


ಈಗ ನಾನು ನಿಮಗೆ ಕೊಡುವ ಆಜ್ಞೆ ಏನೆಂದರೆ, ದೇವಾಲಯ ಕಟ್ಟುವ ಯೆಹೂದ್ಯ ನಾಯಕರಿಗೆ ನೀವು ಸಂಪೂರ್ಣ ಖರ್ಚನ್ನು ಸರಕಾರದ ಖಜಾನೆಯಿಂದ ಕೊಡಬೇಕು. ಇದಕ್ಕೆ ಬೇಕಾದ ಹಣವನ್ನು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ಜನರಿಂದ ತೆರಿಗೆವಸೂಲಿ ಮಾಡಿದ ಹಣದಿಂದ ಕೊಡಬೇಕು. ಈ ಕೆಲಸವನ್ನು ನೀವು ಬೇಗನೆ ಮಾಡಬೇಕು. ದೇವಾಲಯದ ಕೆಲಸ ನಿಂತುಹೋಗಬಾರದು.


ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.


ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು