Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:10 - ಪರಿಶುದ್ದ ಬೈಬಲ್‌

10 ಧರ್ಮಶಾಸ್ತ್ರವನ್ನು ಓದಲೂ, ಅಭ್ಯಾಸಿಸಲೂ ಮತ್ತು ಅದಕ್ಕೆ ವಿಧೇಯನಾಗಲು ಎಜ್ರನು ತನ್ನ ಸಮಯವನ್ನೆಲ್ಲಾ ವಿನಿಯೋಗಿಸಿದನು. ಯೆಹೋವನ ಆಜ್ಞೆಗಳನ್ನು, ವಿಧಿನಿಯಮಗಳನ್ನು ಇಸ್ರೇಲ್ ಜನರಿಗೆ ಕಲಿಸಬೇಕೆಂಬ ಇಚ್ಫೆ ಅವನಲ್ಲಿತ್ತು. ಯೆಹೋವನ ಕಟ್ಟಳೆಗಳಿಗೆ ವಿಧೇಯರಾಗುವಂತೆ ಇಸ್ರೇಲರೆಲ್ಲರಿಗೆ ಸಹಾಯ ಮಾಡಬೇಕೆಂಬ ಅಭಿಲಾಷೆಯು ಅವನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನ ಧರ್ಮಶಾಸ್ತ್ರವನ್ನು ಅಭ್ಯಸಿಸಿ ಅನುಸರಿಸಲೂ ಇಸ್ರಯೇಲರಿಗೆ ಅದರ ವಿಧಿನಿಯಮಗಳನ್ನು ಕಲಿಸಲೂ ಅವನು ದೃಢಮನಸ್ಸು ಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಯೆಹೋವ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ ಇಸ್ರಾಯೇಲ್ಯರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಲಿಕ್ಕೂ ದೃಢಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ಎಜ್ರನು ಯೆಹೋವ ದೇವರ ನಿಯಮವನ್ನು ಅಭ್ಯಾಸ ಮಾಡುವುದಕ್ಕೂ ಅದನ್ನು ಕೈಗೊಂಡು ನಡೆಯುವುದಕ್ಕೂ ಇಸ್ರಾಯೇಲರಿಗೆ ಅದರ ತೀರ್ಪುಗಳನ್ನು ಹಾಗೂ ನಿಯಮಗಳನ್ನು ಬೋಧಿಸುವುದಕ್ಕೂ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:10
30 ತಿಳಿವುಗಳ ಹೋಲಿಕೆ  

ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


“ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.


ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.


ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ.


ನೀತಿವಂತನಾದ ಅವನು ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದಿಸುತ್ತಾ ಅದನ್ನೇ ಹಗಲಿರುಳು ಧ್ಯಾನಿಸುವನು.


ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.


ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ. ಅವು ದೇವಜನರಿಗೆ ಬಲವನ್ನು ಕೊಡುತ್ತವೆ. ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ. ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.


ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.


ಯೆಹೋವನೇ, ನಮ್ಮ ಪೂರ್ವಿಕರಾದ ಅಬ್ರಹಾಮ, ಇಸಾಕ ಮತ್ತು ಯಾಕೋಬರ ದೇವರು ನೀನೇ. ನಿನ್ನ ಜನರು ಸರಿಯಾಗಿ ಯೋಜನೆ ಹಾಕುವಂತೆ ಸಹಾಯಿಸು. ನಿನ್ನನ್ನು ನಿಷ್ಠೆಯಿಂದಲೂ ಸತ್ಯದಿಂದಲೂ ಸೇವೆಮಾಡುವಂತೆ ಸಹಾಯಿಸು.


ಯೆಹೋವನೇ, ಕುಗ್ಗಿಹೋದವರ ಕೋರಿಕೆಯನ್ನು ನೀನು ಕೇಳುವೆ. ಅವರ ಮೊರೆಗೆ ಕಿವಿಗೊಟ್ಟು ಅವರನ್ನು ಪ್ರೋತ್ಸಾಹಿಸುವೆ.


ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.


ಸತ್ಯಬೋಧನೆಯನ್ನು ಅನುಸರಿಸಲು ಜನರು ಮಾಡಬೇಕಾದ ಕಾರ್ಯಗಳನ್ನು ಅವರಿಗೆ ನೀನು ತಿಳಿಸು.


ಯಾಕೆಂದರೆ, ನಿನ್ನ ನಿಯಮಗಳಿಗೆ ವಿಧೇಯನಾಗಲು ನಾನು ಬಹಳವಾಗಿ ಪ್ರಯತ್ನಿಸುತ್ತಿರುವುದರಿಂದ ಯಾರ ಹಂಗಿಲ್ಲದೆ ನಡೆಯುವೆನು.


ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ದೃಢವಾಗಿದೆ. ನಾನು ವಾದ್ಯ ಬಾರಿಸುತ್ತಾ ಹಾಡುವೆನು.


ದೇವರ ಸೇವೆ ಮಾಡುವದನ್ನು ತಿಳಿದಿದ್ದ ಲೇವಿಯರನ್ನು ಹಿಜ್ಕೀಯನು ಪ್ರೋತ್ಸಾಹಿಸಿದನು. ಜನರು ಏಳು ದಿವಸ ಹಬ್ಬವನ್ನು ಆಚರಿಸಿ ಸಮಾಧಾನಯಜ್ಞವನ್ನು ಸಮರ್ಪಿಸಿದರು; ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿದರು.


ಆದರೆ ನಿನ್ನಲ್ಲಿ ಕೆಲವಾರು ಒಳ್ಳೆಯ ವಿಷಯಗಳಿವೆ. ನೀನು ಈ ದೇಶದೊಳಗಿದ್ದ ಅಶೇರಕಂಬಗಳನ್ನು ತೆಗೆದುಹಾಕಿಸಿದೆ; ಯೆಹೋವನನ್ನು ಹಿಂಬಾಲಿಸಲು ನಿನ್ನ ಹೃದಯದಲ್ಲಿ ತೀರ್ಮಾನಿಸಿದೆ” ಅಂದನು.


ರೆಹಬ್ಬಾಮನು ಯೆಹೋವನನ್ನು ಅನುಸರಿಸದೆ ಅವಿಧೇಯನಾಗಿ ಕೆಟ್ಟಕಾರ್ಯಗಳನ್ನು ಮಾಡಿದನು.


ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


ಈ ಸಂಗತಿಗಳನ್ನು ಜನರಿಗೆ ತಿಳಿಸಲು ನಿನಗೆ ಸಂಪೂರ್ಣ ಅಧಿಕಾರವಿದೆ. ಜನರನ್ನು ಬಲಗೊಳಿಸಲು ಈ ಅಧಿಕಾರವನ್ನು ಬಳಸಿಕೊಂಡು, ಅವರು ಮಾಡಬೇಕಾದುದನ್ನು ತಿಳಿಸು. ನೀನು ಮುಖ್ಯನಾದವನಲ್ಲವೆಂದು ಯಾರೂ ನಿನ್ನನ್ನು ಪರಿಗಣಿಸದಂತೆ ನೋಡಿಕೊ.


ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;


ಪ್ರಿಯ ಥೆಯೊಫಿಲನೇ, ಯೇಸು ಮಾಡಿದ ಕಾರ್ಯಗಳ ಬಗ್ಗೆ ಮತ್ತು ನೀಡಿದ ಬೋಧನೆಗಳ ಬಗ್ಗೆ ಪ್ರತಿಯೊಂದನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.


ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ ಎಂದು ನೆನಪುಮಾಡಿಕೊಂಡು ಯೆಹೋವನ ವಿಧಿಗಳನ್ನು ತಪ್ಪದೇ ಅನುಸರಿಸಿರಿ.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.


“ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.


ಯೋಬನೇ, ನಿನ್ನ ಕೈಗಳನ್ನು ಮೇಲೆತ್ತಿ ದೇವರೊಬ್ಬನನ್ನೇ ಆರಾಧಿಸುವುದಕ್ಕಾಗಿ ನಿನ್ನ ಹೃದಯವನ್ನು ಸಿದ್ಧಪಡಿಸಿಕೊ.


ಎಜ್ರನು ಯಾಜಕನೂ ಬೋಧಕನೂ ಆಗಿದ್ದನು. ಯೆಹೋವನು ಇಸ್ರೇಲರಿಗೆ ಕೊಟ್ಟಿರುವ ಕಟ್ಟಳೆಗಳನ್ನು, ವಿಧಿಗಳನ್ನು ಅವನು ಚೆನ್ನಾಗಿ ಅಭ್ಯಾಸ ಮಾಡಿಕೊಂಡಿದ್ದನು. ರಾಜನಾದ ಅರ್ತಷಸ್ತನು ಅವನಿಗೆ ಕೊಟ್ಟಿದ್ದ ಪತ್ರದಲ್ಲಿ ಹೀಗೆ ಬರೆದಿತ್ತು:


ನಿನ್ನ ಕಟ್ಟಳೆಗಳಿಗೆಲ್ಲಾ ಯಾವಾಗಲೂ ವಿಧೇಯನಾಗಿರಲು ಮನಸ್ಸುಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು