Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:15 - ಪರಿಶುದ್ದ ಬೈಬಲ್‌

15 ನಾನೂ ನನ್ನ ಸಲಹೆಗಾರರೂ ಜೆರುಸಲೇಮಿನಲ್ಲಿರುವ ಇಸ್ರೇಲಿನ ದೇವರಿಗೆ ಬೆಳ್ಳಿಬಂಗಾರಗಳನ್ನು ಅರ್ಪಿಸುತ್ತೇವೆ. ನೀನು ಹೋಗುವಾಗ ಅವುಗಳನ್ನು ತೆಗೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೊಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅರಸನು ಮತ್ತು ಅವನ ಮಂತ್ರಿಗಳು ಜೆರುಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರವನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇವಿುನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೋಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿ ಬಂಗಾರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅರಸನು ಮತ್ತು ಅವನ ಮಂತ್ರಿಗಳು ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರವನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:15
20 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಚೀಯೋನಿನಿಂದಲೂ ಆತನ ವಾಸಸ್ಥಾನವಾದ ಜೆರುಸಲೇಮಿನಿಂದಲೂ ಸ್ತೋತ್ರವಾಗಲಿ! ಯೆಹೋವನಿಗೆ ಸ್ತೋತ್ರವಾಗಲಿ!


ನಾನು ನಿನಗೋಸ್ಕರ ಆಲಯವನ್ನು ಕಟ್ಟಿಸಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಲಿ” ಎಂದು ಪ್ರಾರ್ಥಿಸಿದನು.


ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದ್ದರಿಂದ ಯಾವ ಅರಸನಾಗಲಿ ಅಧಿಕಾರಿಯಾಗಲಿ ಈ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ಆ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಈ ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.


ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, ನಿಮ್ಮ ಹರಕೆಗಳನ್ನು ಸಲ್ಲಿಸಿರಿ. ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.


ಆತನ ಗುಡಾರವು ಸಾಲೇಮಿನಲ್ಲಿದೆ. ಆತನ ಆಲಯವು ಸಿಯೋನ್ ಬೆಟ್ಟದ ಮೇಲಿದೆ.


ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ.


ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ ನನಗೆ ಎಷ್ಟೋ ಪ್ರಿಯವಾಗಿವೆ.


ಚೀಯೋನಿನ ನಿವಾಸಿಗಳೇ, ಯೆಹೋವನನ್ನು ಸಂಕೀರ್ತಿಸಿರಿ. ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.


ಅದರ ಗೋಡೆಯಲ್ಲಿ ಮೂರುಸಾಲು ದೊಡ್ಡ ಗಾತ್ರದ ಕಲ್ಲುಗಳಿರಬೇಕು; ಒಂದು ಸಾಲಿನಲ್ಲಿ ಮರದ ತೊಲೆಗಳಿರಬೇಕು. ದೇವಾಲಯ ಕಟ್ಟಲು ತಗಲುವ ಖರ್ಚುವೆಚ್ಚವೆಲ್ಲವನ್ನು ರಾಜನ ಖಜಾನೆಯಿಂದ ಕೊಡಬೇಕು.


ಆದರೆ ಈಗ ನಾನು ನನ್ನ ಹೆಸರನ್ನು ಸ್ಥಾಪಿಸಲು ಜೆರುಸಲೇಮನ್ನು ಆರಿಸಿಕೊಂಡಿದ್ದೇನೆ; ದಾವೀದನನ್ನು ನನ್ನ ಜನರ ನಾಯಕನನ್ನಾಗಿ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.


ಯಾವನೂ ದೇವರಿಗೆ ಆಲಯವನ್ನು ಕಟ್ಟಲು ಸಾಧ್ಯವಿಲ್ಲ. ಯಾಕೆಂದರೆ, ಆಕಾಶವೂ ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲುವುದಿಲ್ಲ. ಆದ್ದರಿಂದ ನಾನು ಆತನಿಗೆ ಆಲಯವನ್ನು ಕಟ್ಟಲಾರೆ. ನಾನು ಆತನಿಗೆ ಆಲಯವನ್ನು ಕಟ್ಟುತ್ತಿರುವುದು ಧೂಪಹಾಕಿ ಆತನನ್ನು ಘನಪಡಿಸುವದಕ್ಕಾಗಿಯಷ್ಟೇ.


ಆಗ ಇಸ್ರೇಲರ ಕುಲಪ್ರಧಾನರು, ಕುಟುಂಬಗಳ ನಾಯಕರು, ಪ್ರಧಾನಸೇನಾಧಿಪತಿಗಳು, ಸೇನಾಧಿಪತಿಗಳು, ರಾಜನ ಕೆಲಸಕ್ಕಾಗಿ ನೇಮಕಗೊಂಡಿದ್ದ ಅಧಿಕಾರಿಗಳು, ತಮ್ಮಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕೊಟ್ಟರು.


ಎಜ್ರನೇ, ನಾನೂ ನನ್ನ ಏಳು ಮಂದಿ ಸಲಹೆಗಾರರೂ ನಿನ್ನನ್ನು ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಕಳುಹಿಸುತ್ತೇವೆ. ಅಲ್ಲಿ ನೀನೂ ನಿನ್ನ ಜನರೂ ದೇವರ ಕಟ್ಟಳೆಗಳಿಗೆ ವಿಧೇಯರಾಗಿರುವಂತೆ ನೋಡಿಕೊ. ಆ ಕಟ್ಟಳೆಗಳು ನಿನ್ನ ಬಳಿಯಲ್ಲಿ ಇವೆ.


ದೇವಾಲಯಕ್ಕೆ ಕೊಟ್ಟಿರುವ ಬೆಳ್ಳಿಬಂಗಾರಗಳನ್ನು ಮತ್ತು ಇತರ ವಸ್ತುಗಳನ್ನು ನಾನು ತೂಗಿ ಆರಿಸಲ್ಪಟ್ಟಿದ್ದ ಹನ್ನೆರಡು ಮಂದಿಗೆ ಕೊಟ್ಟೆನು. ಅವುಗಳನ್ನು ಅರ್ತಷಸ್ತ ರಾಜನೂ ಅವನ ಸಲಹೆಗಾರರೂ ಉನ್ನತಾಧಿಕಾರಿಗಳೂ ಅಲ್ಲದೆ ಬಾಬಿಲೋನಿನಲ್ಲಿದ್ದ ಎಲ್ಲಾ ಇಸ್ರೇಲರು ದೇವಾಲಯಕ್ಕಾಗಿ ಕೊಟ್ಟಿದ್ದರು.


ಎಷ್ಟೋ ಜನರು ಜೆರುಸಲೇಮಿನಲ್ಲಿನ ದೇವರಾದ ಯೆಹೋವನಿಗೆ ಕಾಣಿಕೆಗಳನ್ನು ತಂದರು. ಹಾಗೆಯೇ ಅರಸನಾದ ಹಿಜ್ಕೀಯನಿಗೂ ಬೆಲೆಬಾಳುವ ವಸ್ತುಗಳನ್ನು ತಂದರು. ಅಂದಿನಿಂದ ಬೇರೆ ದೇಶದವರು ಹಿಜ್ಕೀಯನನ್ನು ಗೌರವಿಸಿದರು.


ಅವರ ನೆರೆಹೊರೆಯವರು ಅವರಿಗೆ ತುಂಬಾ ಕಾಣಿಕೆಗಳನ್ನು ಕೊಟ್ಟರು. ಅವರಿಗೆ ಬೆಳ್ಳಿಬಂಗಾರಗಳನ್ನು, ಪಶುಗಳನ್ನು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಧಾರಾಳವಾಗಿ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು