Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:5 - ಪರಿಶುದ್ದ ಬೈಬಲ್‌

5 ಬುಕ್ಕೀಯು ಅಬೀಷೂವನ ಮಗನು; ಅಬೀಷೂವನು ಫೀನೆಹಾಸನ ಮಗನು; ಫೀನೆಹಾಸನು ಎಲ್ಲಾಜಾರನ ಮಗನು. ಎಲ್ಲಾಜಾರನು ಪ್ರಧಾನಯಾಜಕನಾದ ಆರೋನನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬುಕ್ಕೀಯನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋನನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇವನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನ ಯಾಜಕನಾದ ಆರೋನನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲ್ಲಾಜಾರನ ಮಗನು; ಇವನು ಪ್ರಧಾನ ಯಾಜಕನಾದ ಆರೋನನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲಿಯಾಜರನ ಮಗನು; ಇವನು ಮುಖ್ಯಯಾಜಕನಾದ ಆರೋನನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:5
25 ತಿಳಿವುಗಳ ಹೋಲಿಕೆ  

ಪ್ರಧಾನಯಾಜಕನಾಗಿ ನೇಮಿಸಲ್ಪಡುವುದು ಒಂದು ಗೌರವ. ಆದರೆ ಯಾರೂ ತಮ್ಮನ್ನು ತಾವೇ ಈ ಕಾರ್ಯಕ್ಕೆ ಆರಿಸಿಕೊಳ್ಳುವುದಿಲ್ಲ. ದೇವರು ಆರೋನನನ್ನು ಕರೆದಂತೆ, ಆ ವ್ಯಕ್ತಿಯನ್ನು ಕರೆಯಬೇಕು.


ಮಹಾಯಾಜಕನಾದ ಅಜರ್ಯನೂ ಇತರ ಯಾಜಕರೂ ಉಜ್ಜೀಯನನ್ನು ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಾಣಿಸಿದ್ದರಿಂದ ಅವನನ್ನು ಕೂಡಲೇ ದೇವಾಲಯದಿಂದ ಹೊರಕ್ಕೆ ಹಾಕಿದರು. ಯೆಹೋವನು ಅವನನ್ನು ಶಿಕ್ಷಿಸಿದುದರಿಂದ ಉಜ್ಜೀಯನು ತಾನಾಗಿಯೇ ದೇವಾಲಯದೊಳಗಿಂದ ಅವಸರದಿಂದ ಹೊರಬಂದನು.


“ಅಮರ್ಯನು ನಿಮ್ಮ ಪ್ರಧಾನಯಾಜಕನು. ಯೆಹೋವನ ಕಾರ್ಯಗಳಿಗೆಲ್ಲಾ ಅವನೇ ನಿಮಗೆ ಪ್ರಮುಖನು. ಯೆಹೋವನ ಕುರಿತಾದ ಸಂಗತಿಗಳ ಬಗ್ಗೆ ಜೆಬದ್ಯನು ಪ್ರಮುಖನಾಗಿರುವನು. ಅವನು ಯೆಹೂದ ಕುಲದ ಇಷ್ಮಾಯೇಲನ ಮಗ. ಲೇವಿಯರು ನಿಮಗಾಗಿ ಬರವಣಿಗೆಯ ಕೆಲಸವನ್ನು ಮಾಡುವರು. ನೀವು ಮಾಡುವ ಕಾರ್ಯಗಳಲ್ಲಿ ಧೈರ್ಯಶಾಲಿಗಳಾಗಿರಿ. ಯೆಹೋವನು ನೀತಿವಂತರೊಂದಿಗಿರುವನು” ಎಂದು ಹೇಳಿದನು.


ಎಲ್ಲಾಜಾರನ ಮಗನು ಫೀನೆಹಾಸ. ಫೀನೆಹಾಸನ ಮಗನು ಅಬೀಷೂವ.


ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.


ಆರೋನನ ಮಗನಾದ ಎಲ್ಲಾಜಾರನು ಮರಣಹೊಂದಿದನು. ಗಿಬೇತ್‌ನಲ್ಲಿ ಎಲ್ಲಾಜಾರನನ್ನು ಸಮಾಧಿ ಮಾಡಲಾಯಿತು. ಗಿಬೇತ್ ಊರು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿತ್ತು. ಆ ಊರನ್ನು ಎಲ್ಲಾಜಾರನ ಮಗನಾದ ಫೀನೆಹಾಸನಿಗೆ ಕೊಡಲಾಗಿತ್ತು.


ಆಗ ಯಾಜಕನಾದ ಫೀನೆಹಾಸನು ಈ ಕುಲಗಳವರಿಗೆ, “ಯೆಹೋವನು ನಮ್ಮೊಂದಿಗಿದ್ದಾನೆಂಬುದು ಮತ್ತು ನೀವು ಆತನಿಗೆ ವಿರೋಧಿಗಳಾಗಿಲ್ಲವೆಂಬುದು ಈಗ ನಮಗೆ ತಿಳಿಯಿತು. ಯೆಹೋವನು ಇಸ್ರೇಲರನ್ನು ಶಿಕ್ಷಿಸುವುದಿಲ್ಲವೆಂದು ನಮಗೆ ಸಂತೋಷವಾಗಿದೆ” ಎಂದು ಹೇಳಿದನು.


ಆದರೆ ಮೊದಲು ಇಸ್ರೇಲರು ರೂಬೇನ್ಯರ, ಗಾದ್ಯರ, ಮನಸ್ಸೆಕುಲದ ಅರ್ಧಜನರ ಸಂಗಡ ಮಾತನಾಡಲು ಕೆಲವು ಜನರನ್ನು ಕಳುಹಿಸಿದರು. ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನ ನೇತೃತ್ವದಲ್ಲಿ ಪ್ರತಿಯೊಂದು ಕುಲದಿಂದ ಒಬ್ಬೊಬ್ಬ ವ್ಯಕ್ತಿಯಂತೆ ಹತ್ತು ಜನರನ್ನು ಕಳುಹಿಸಿದರು. ಈ ಹತ್ತು ಜನರು ತಮ್ಮ ಕುಲಗಳ ಮುಖ್ಯ ನಾಯಕರಾಗಿದ್ದರು.


ಯಾಜಕನಾದ ಎಲ್ಲಾಜಾರನು, ನೂನನ ಮಗನಾದ ಯೆಹೋಶುವನು ಮತ್ತು ಇಸ್ರೇಲಿನ ಕುಲಗಳ ನಾಯಕರು, ಇಸ್ರೇಲರಿಗೆ ಕಾನಾನ್ ನಾಡಿನ ಯಾವಯಾವ ಭಾಗವನ್ನು ಕೊಡಬೇಕೆಂಬುದನ್ನು ತೀರ್ಮಾನಿಸಿದರು.


ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ತೆಗೆದುಕೊಂಡು ದೇವದರ್ಶನಗುಡಾರದಲ್ಲಿ ಇಟ್ಟರು. ಇಸ್ರೇಲರ ವಿಷಯದಲ್ಲಿ ಜ್ಞಾಪಕಾರ್ಥವಾಗಿ ಇದು ಯೆಹೋವನ ಸನ್ನಿಧಿಯಲ್ಲಿ ಇಡಲ್ಪಟ್ಟಿತು.


ಯೆಹೋವನು ಆಜ್ಞಾಪಿಸಿದ್ದಂತೆಯೇ ಮೋಶೆ ಮತ್ತು ಎಲ್ಲಾಜಾರನು ಮಾಡಿದರು.


ಮೋಶೆಯು ಅವರನ್ನು ಯುದ್ಧಕ್ಕೆ ಕಳುಹಿಸಿದನು. ಅವರ ಸಂಗಡ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ ಕಳುಹಿಸಿದನು. ಫೀನೆಹಾಸನು ಪವಿತ್ರವಸ್ತುಗಳನ್ನು ತೆಗೆದುಕೊಂಡನು ಮತ್ತು ಸೂಚನೆ ಕೊಡುವುದಕ್ಕಾಗಿ ತುತ್ತೂರಿಗಳನ್ನು ತೆಗೆದುಕೊಂಡನು.


ಈ ಐದುಮಂದಿ ಸ್ತ್ರೀಯರು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಹೋಗಿ ಮೋಶೆಯ, ಮಹಾಯಾಜಕನಾದ ಎಲ್ಲಾಜಾರನ, ನಾಯಕರ ಮತ್ತು ಎಲ್ಲಾ ಇಸ್ರೇಲರ ಮುಂದೆ ನಿಂತರು.


ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರಿಗೆ ನಾಯಕನಾಗಿದ್ದನು. ಪವಿತ್ರವಸ್ತುಗಳನ್ನು ನೋಡಿಕೊಳ್ಳುವ ಜನರಿಗೆಲ್ಲಾ ಎಲ್ಲಾಜಾರನು ಮೇಲ್ವಿಚಾರಕನಾಗಿದ್ದನು.


ಮೋಶೆಯು ಪಾಪಪರಿಹಾರಕ್ಕಾಗಿ ಸಮರ್ಪಿತವಾದ ಹೋತದ ಕುರಿತು ವಿಚಾರಿಸಿದಾಗ, ಅದನ್ನು ಸುಟ್ಟುಬಿಟ್ಟರೆಂದು ಕೇಳಿ ಆರೋನನ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್‌ರವರ ಮೇಲೆ ಬಹುಕೋಪಗೊಂಡನು.


ಆರೋನನಿಗೆ ಇನ್ನೂ ಜೀವಂತವಾಗಿದ್ದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಇಬ್ಬರು ಪುತ್ರರು ಇದ್ದರು. ಮೋಶೆಯು ಆರೋನನಿಗೆ ಮತ್ತು ಅವನ ಇಬ್ಬರು ಗಂಡುಮಕ್ಕಳಿಗೆ, “ಯಜ್ಞವೇದಿಕೆಯ ಮೇಲೆ ಅರ್ಪಿಸಿದ ಯಜ್ಞಗಳಲ್ಲಿಯೂ ಧಾನ್ಯನೈವೇದ್ಯದಲ್ಲಿಯೂ ಉಳಿದ ಭಾಗವನ್ನು ತೆಗೆದುಕೊಂಡು ನೀವು ತಿನ್ನಬೇಕು. ಆದರೆ ನೀವು ಅದಕ್ಕೆ ಹುಳಿಯನ್ನು ಸೇರಿಸದೆ ಯಜ್ಞವೇದಿಕೆಯ ಸಮೀಪದಲ್ಲಿಯೇ ತಿನ್ನಬೇಕು. ಯಾಕೆಂದರೆ ಆ ಸಮರ್ಪಣೆಯು ಬಹಳ ಪವಿತ್ರವಾಗಿದೆ.


ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.


ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಗಳನ್ನು ಮದುವೆಯಾದನು; ಆಕೆ ಫೀನೆಹಾಸನಿಗೆ ಜನ್ಮವಿತ್ತಳು. ಇವರೆಲ್ಲರೂ ಇಸ್ರೇಲನ ಮಗನಾದ ಲೇವಿಯ ಗೋತ್ರದವರು.


ಮೆರಾಯೋತನು ಜೆರಹ್ಯನ ಮಗನು; ಜೆರಹ್ಯನು ಉಜ್ಜೀಯನ ಮಗನು; ಉಜ್ಜೀಯನು ಬುಕ್ಕೀಯ ಮಗನು.


ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು