Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:6 - ಪರಿಶುದ್ದ ಬೈಬಲ್‌

6 ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಎಜ್ರನು, ಇಸ್ರಯೇಲ್ ದೇವರಾದ ಸರ್ವೇಶ್ವರನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾಂಡಿತ್ಯ ಪಡೆದ ಒಬ್ಬ ಧರ್ಮಶಾಸ್ತ್ರಿ ಆಗಿದ್ದನು. ಅವನ ದೇವರಾದ ಸರ್ವೇಶ್ವರನ ಕೃಪಾಹಸ್ತ ಅವನ ಮೇಲಿತ್ತು. ಆದುದರಿಂದ ಅರಸನು ಅವನಿಗೆ ಇಷ್ಟವಾದುದನ್ನೆಲ್ಲ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಎಜ್ರನು ಇಸ್ರಾಯೇಲ್‍ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:6
40 ತಿಳಿವುಗಳ ಹೋಲಿಕೆ  

ನಾವು ಪ್ರಯಾಣ ಮಾಡುವಾಗ ದಾರಿಯಲ್ಲಿ ಶತ್ರುಗಳಿದ್ದುದರಿಂದ ನಮ್ಮ ಸಂರಕ್ಷಣೆಗಾಗಿ ಸಿಪಾಯಿಗಳನ್ನು ಮತ್ತು ರಾಹುತರನ್ನು ಅರಸನಿಂದ ಕೇಳಲು ನನಗೆ ಸಂಕೋಚವಾಯಿತು. ಯಾಕೆಂದರೆ, “ನಮ್ಮ ದೇವರು ತನ್ನನ್ನು ನಂಬಿದವರೊಂದಿಗಿದ್ದಾನೆ; ಆತನಿಂದ ದೂರಹೋಗುವವರ ಮೇಲೆ ಆತನು ಕೋಪವುಳ್ಳವನಾಗಿದ್ದಾನೆ” ಎಂದು ರಾಜನಾದ ಅರ್ತಷಸ್ತನಿಗೆ ನಾವು ಹೇಳಿದ್ದೆವು.


ರಾಜನ, ಅವನ ಮುಖ್ಯಾಧಿಕಾರಿಗಳ ಮತ್ತು ಅವನ ಸಲಹೆಗಾರರ ಸಮ್ಮುಖದಲ್ಲಿ ಯೆಹೋವನು ನನ್ನ ಮೇಲಿಟ್ಟಿರುವ ಅಗಾಧ ಪ್ರೀತಿಯನ್ನು ಪ್ರಕಟಪಡಿಸಿದನು. ದೇವರಾದ ಯೆಹೋವನು ನನ್ನ ಸಂಗಡವಿದ್ದುದರಿಂದ ನಾನು ಧೈರ್ಯಗೊಂಡೆನು. ನನ್ನೊಂದಿಗೆ ಜೆರುಸಲೇಮಿಗೆ ಹೋಗಲು ಮನಸ್ಸುಳ್ಳ ಇಸ್ರೇಲ್ ನಾಯಕರನ್ನು ನಾನು ಒಟ್ಟುಗೂಡಿಸಿದೆನು.


ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನ ನಾವು ಅಹವಾ ನದಿಯ ದಡವನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ದೇವರು ನಮ್ಮೊಂದಿಗಿದ್ದು ಶತ್ರುಗಳಿಂದಲೂ ಕಳ್ಳರಿಂದಲೂ ನಮ್ಮನ್ನು ಸಂರಕ್ಷಿಸಿ ಕಾಪಾಡಿದನು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ನಾನು ಅವರಿಗೆ ದೇವರು ನನಗೆ ಕರುಣೆಯನ್ನು ತೋರಿಸಿದ್ದನ್ನು ಮತ್ತು ರಾಜನು ಹೇಳಿದ ವಿಷಯಗಳನ್ನು ತಿಳಿಸಿದೆನು. ಆಗ ಅವರು, “ನಾವು ಈಗಲೇ ಕೆಲಸ ಪ್ರಾರಂಭಿಸೋಣ” ಎಂದು ಹೇಳಿದರು. ಹೀಗೆ ನಾವು ಈ ಒಳ್ಳೆಯ ಕಾರ್ಯವನ್ನು ಪ್ರಾರಂಭಿಸಿದೆವು.


ಅಲ್ಲದೆ ಬಾಗಿಲುಗಳಿಗೆ, ಗೋಡೆಗಳಿಗೆ, ದೇವಾಲಯದ ಆವರಣದ ಗೋಡೆಗಳಿಗೆ ಮತ್ತು ನನ್ನ ಮನೆಗೆ ಮರದ ತೊಲೆಗಳು ಬೇಕಾಗಿವೆ. ಆದ್ದರಿಂದ ನಿಮ್ಮ ಅರಣ್ಯಗಳ ಮುಖ್ಯಾಧಿಕಾರಿಯಾದ ಆಸಾಫನಿಗೂ ಪತ್ರವನ್ನು ಕೊಡಬೇಕು” ಎಂದು ವಿನಂತಿಸಿದೆನು. ಅರಸನು ಪತ್ರಗಳನ್ನು ಮತ್ತು ನಾನು ಕೇಳಿದ್ದೆಲ್ಲವನ್ನು ನನಗೆ ಕೊಟ್ಟನು. ದೇವರು ನನ್ನನ್ನು ಕರುಣಿಸಿರುವುದರಿಂದ ರಾಜನು ನನಗೆ ಹಾಗೆ ಮಾಡಿದನು.


ದೇವರು ನಮ್ಮ ಸಂಗಡವಿದ್ದ ಕಾರಣ, ಇದ್ದೋವಿನ ಸಂಬಂಧಿಕರು ಇವರನ್ನು ಕಳುಹಿಸಿಕೊಟ್ಟರು: ಮಹ್ಲೀಯ ಸಂತತಿಯವರಲ್ಲಿ ಜಾಣನಾದ ಶೇರೇಬ್ಯ, ಮಹ್ಲೀಯು ಲೇವಿಯ ವಂಶದವನಾಗಿದ್ದನು. ಲೇವಿಯು ಇಸ್ರೇಲನ ಒಬ್ಬ ಮಗನಾಗಿದ್ದನು. ಅವರು ಸಹ ತಮ್ಮ ಗಂಡುಮಕ್ಕಳನ್ನು ಮತ್ತು ಸಹೋದರರನ್ನು ಕಳುಹಿಸಿದರು. ಒಟ್ಟಿನಲ್ಲಿ ಆ ಕುಟುಂಬದಿಂದ 18 ಮಂದಿ ಗಂಡಸರಿದ್ದರು.


ಅರಸನಾದ ಅರ್ತಷಸ್ತನೆಂಬ ನಾನು ಈ ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಈ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು.


ಅವರು ಬಾಬಿಲೋನನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಬಿಟ್ಟು ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಜೆರುಸಲೇಮನ್ನು ಸೇರಿದರು. ದೇವರಾದ ಯೆಹೋವನು ಎಜ್ರನ ಸಂಗಡವಿದ್ದನು.


ನಿನ್ನ ಎಲ್ಲಾ ಕಾರ್ಯಗಳಲ್ಲಿ ಆತನನ್ನು ಜ್ಞಾಪಿಸಿಕೊ. ಆಗ ಆತನು ನಿನಗೆ ಸಹಾಯ ಮಾಡುವನು.


“ನಾನು ಹೇಳಿದಂಥ ಎಲ್ಲಾ ಧರ್ಮಶಾಸ್ತ್ರವನ್ನು ಅನುಸರಿಸಿ ಅದಕ್ಕೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ಪ್ರಪಂಚದ ಎಲ್ಲಾ ದೇಶಗಳಿಗಿಂತ ನಿಮ್ಮ ದೇಶವನ್ನು ಅತೀ ಉನ್ನತಸ್ಥಾನದಲ್ಲಿರುವ ದೇಶವನ್ನಾಗಿ ಮಾಡುವನು.


“ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.


ಸಹೋದರ ಸಹೋದರಿಯರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನೀವು ಜ್ಞಾಪಿಸಿಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿಕೊಂಡಿರಿ ಮತ್ತು ಅದರಲ್ಲಿ ದೃಢವಾಗಿದ್ದೀರಿ.


ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ.


ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.


ಇಗೋ, ನಿಮ್ಮನ್ನು ರಕ್ಷಿಸಲು ಯೆಹೋವನು ಶಕ್ತನಾಗಿದ್ದಾನೆ. ನೀವು ಸಹಾಯಕ್ಕಾಗಿ ಪ್ರಾರ್ಥಿಸುವಾಗ ಆತನು ನಿಮ್ಮನ್ನು ಆಲೈಸುವನು.


ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.


ಒಂದು ದಿವ್ಯ ವಿಷಯವನ್ನು ಹೇಳಲು ನನ್ನ ಹೃದಯವು ತವಕಪಡುತ್ತದೆ; ನನ್ನ ರಾಜನನ್ನು ಕುರಿತು ಸುಂದರವಾದ ಗೀತೆಯೊಂದನ್ನು ರಚಿಸುವೆ. ನನ್ನ ನಾಲಿಗೆಯು ಕವಿಯ ಲೇಖನಿಯಂತೆ ಸಿದ್ಧವಾಗಿದೆ.


ಅಲ್ಲಿ ಆಸಾಫನ ಸಹೋದರರಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ ಮತ್ತು ಹನಾನೀ ಇದ್ದರು. ದೇವಮನುಷ್ಯನಾದ ದಾವೀದನು ತಯಾರಿಸಿದ್ದ ವಾದ್ಯಗಳು ಅವರ ಬಳಿಯಲ್ಲಿದ್ದವು. ಎಜ್ರನು ಗೋಡೆಯನ್ನು ಪ್ರತಿಷ್ಠೆ ಮಾಡಲು ಒಂದು ತಂಡದ ಜನರನ್ನು ತನ್ನೊಂದಿಗೆ ಕರೆದುಕೊಂಡು ಹೋದನು.


ಆ ತಿಂಗಳ ಎರಡನೆಯ ದಿನದಲ್ಲಿ ಗೋತ್ರಪ್ರಧಾನರೂ ಯಾಜಕರೂ ಲೇವಿಯರೂ ಧರ್ಮಶಾಸ್ತ್ರವನ್ನು ಅಭ್ಯಾಸಿಸಲು ಉಪದೇಶಕನಾದ ಎಜ್ರನ ಸುತ್ತಲೂ ಸೇರಿಬಂದರು.


ಅವರ ಕುತಂತ್ರವು ನಮಗೆ ಗೊತ್ತಾಯಿತೆಂದು ವೈರಿಗಳಿಗೆ ತಿಳಿದಾಗ ದೇವರೇ ಅವರ ಯೋಜನೆಯನ್ನು ನಿಷ್ಫಲಮಾಡಿದನೆಂದು ಅವರು ತಿಳಿದರು. ಮತ್ತೆ ನಾವೆಲ್ಲಾ ಕಟ್ಟುವ ಕೆಲಸಕ್ಕೆ ಕೈಹಾಕಿದೆವು. ಅವರವರ ಭಾಗಕ್ಕೆ ಜನರು ತೆರಳಿ ತಮ್ಮ ಕೆಲಸವನ್ನು ಪ್ರಾರಂಭಿಸಿದರು.


ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶ್ಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶ್ಶೂರದ ಅರಸನು ಸಹಾಯ ಮಾಡಿದನು.


ಆದರೆ ಯೆಹೂದ್ಯರ ನಾಯಕರ ಮೇಲೆ ದೇವರ ಕೃಪಾಕಟಾಕ್ಷವಿತ್ತು. ರಾಜನಾದ ದಾರ್ಯಾವೆಷನಿಗೆ ವರದಿ ತಲುಪಿ ಉತ್ತರವನ್ನು ಕಳುಹಿಸುವ ತನಕ ನಾಯಕರು ಕಟ್ಟಡದ ಕೆಲಸವನ್ನು ಮುಂದುವರಿಸುತ್ತಲೇ ಇದ್ದರು.


“‘“ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿ ಇದೆ. ಆದ್ದರಿಂದ ನಾವು ಜ್ಞಾನಿಗಳು” ಎಂದು ನೀವು ಹೇಳುವಿರಿ. ಆದರೆ ಅದು ನಿಜವಲ್ಲ. ಏಕೆಂದರೆ ಲಿಪಿಗಾರರು ತಮ್ಮ ಲೇಖನಿಯಿಂದ ಸುಳ್ಳು ಬರೆದಿದ್ದಾರೆ.


ಈ ದ್ವಾರಪಾಲಕರು ಯೋಯಾಕೀಮನ ಕಾಲದಲ್ಲಿ ಸೇವೆ ಮಾಡಿದರು. ಯೋಯಾಕೀಮನು ಯೇಷೂವನ ಮಗ. ಯೇಷೂವನು ಯೋಚಾದಾಕನ ಮಗ. ನೆಹೆಮೀಯನು ರಾಜ್ಯಪಾಲನಾಗಿದ್ದ ದಿನಗಳಲ್ಲಿ ಮತ್ತು ಎಜ್ರನು ಯಾಜಕನೂ ಉಪದೇಶಕನೂ ಆಗಿದ್ದ ದಿನಗಳಲ್ಲಿ ಸಹ ಈ ದ್ವಾರಪಾಲಕರು ಸೇವೆ ಸಲ್ಲಿಸಿದರು.


ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದ್ದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.


ಆ ಸಮಯಕ್ಕೋಸ್ಕರವೇ ಕಟ್ಟಿದ ಮರದ ವೇದಿಕೆಯ ಮೇಲೆ ಎಜ್ರನು ನಿಂತಿದ್ದನು. ಅವನ ಬಲಬದಿಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ ಮತ್ತು ಮಾಸೇಯ; ಎಡಬದಿಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ ಮತ್ತು ಮೆಷುಲ್ಲಾಮ್ ನಿಂತಿದ್ದರು.


ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.


“ಮೋಶೆಯ ಧರ್ಮಶಾಸ್ತ್ರ ಹೇಳುವುದನ್ನು ನಿಮಗೆ ತಿಳಿಸಲು ಧರ್ಮೋಪದೇಶಕರಿಗೂ ಫರಿಸಾಯರಿಗೂ ಅಧಿಕಾರವಿದೆ.


ಬುಕ್ಕೀಯು ಅಬೀಷೂವನ ಮಗನು; ಅಬೀಷೂವನು ಫೀನೆಹಾಸನ ಮಗನು; ಫೀನೆಹಾಸನು ಎಲ್ಲಾಜಾರನ ಮಗನು. ಎಲ್ಲಾಜಾರನು ಪ್ರಧಾನಯಾಜಕನಾದ ಆರೋನನ ಮಗನು.


ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ಒಂದೇ ಮನಸ್ಸುಳ್ಳವರಾಗಿ ಕೂಡಿಬಂದರು. ಅವರು ಬುಗ್ಗೆ ಬಾಗಿಲಿನ ಮುಂದಿದ್ದ ಜಾಗದಲ್ಲಿ ಸೇರಿಬಂದರು. ಇಸ್ರೇಲರಿಗೆ ಮೋಶೆಯ ಮೂಲಕವಾಗಿ ಯೆಹೋವನು ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಓದಲು ಜನರು ಎಜ್ರನನ್ನು ಕೇಳಿಕೊಂಡರು.


ಬಾಬಿಲೋನಿನಿಂದ ಜೆರುಸಲೇಮಿಗೆ ನನ್ನೊಂದಿಗೆ (ಎಜ್ರ) ಹೊರಟ ಇಸ್ರೇಲರ ಕುಲಪ್ರಧಾನರ ಮತ್ತು ಇತರ ಜನರ ವಿವರಗಳು ಹೀಗಿದೆ. ಅರಸನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ನಾವು ಜೆರುಸಲೇಮಿಗೆ ಬಂದು ಸೇರಿದೆವು. ಬಂದವರ ಹೆಸರುಗಳು ಹೀಗಿವೆ:


ಆಮೇಲೆ ಸೀನಾಯ ಬೆಟ್ಟಕ್ಕೆ ಇಳಿದುಬಂದೆ. ಪರಲೋಕದಿಂದ ಅವರೊಂದಿಗೆ ಮಾತನಾಡಿದೆ. ಅವರಿಗೆ ಒಳ್ಳೆಯ ಕಟ್ಟಳೆಗಳನ್ನು ದಯಪಾಲಿಸಿದೆ; ಸತ್ಯಬೋಧನೆಯನ್ನು ನೀಡಿದೆ, ವಿಧಿನಿಯಮಗಳನ್ನು ಕಲಿಸಿದೆ. ಅವುಗಳೆಲ್ಲಾ ಉತ್ತಮವಾದವುಗಳೇ.


ಆಗ ನಾವು ನಿನ್ನನ್ನು ಎಂದಿಗೂ ತ್ಯಜಿಸುವುದಿಲ್ಲ. ನಮ್ಮನ್ನು ಬದುಕಿಸು. ನಾವು ಬದುಕುವಂತೆ ಮಾಡು, ಆಗ ನಾವು ನಿನ್ನನ್ನು ಆರಾಧಿಸುವೆವು.


ಯೆಹೋವನೇ, ಆಗ ಅವರು ಅದು ನಿನ್ನ ಕೈಕೆಲಸವೆಂದೂ ಅದನ್ನು ಮಾಡಿದ್ದು ನೀನೇ ಎಂದೂ ತಿಳಿದುಕೊಳ್ಳುವರು.


ಆತನು ಯಾಕೋಬಿಗೆ ತನ್ನ ಆಜ್ಞೆಗಳನ್ನು ಕೊಟ್ಟನು. ಇಸ್ರೇಲಿಗೆ ತನ್ನ ಕಟ್ಟಳೆಗಳನ್ನೂ ನಿಯಮಗಳನ್ನೂ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು