Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:1 - ಪರಿಶುದ್ದ ಬೈಬಲ್‌

1 ಬಾಬಿಲೋನಿನಿಂದ ಜೆರುಸಲೇಮಿಗೆ ನನ್ನೊಂದಿಗೆ (ಎಜ್ರ) ಹೊರಟ ಇಸ್ರೇಲರ ಕುಲಪ್ರಧಾನರ ಮತ್ತು ಇತರ ಜನರ ವಿವರಗಳು ಹೀಗಿದೆ. ಅರಸನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ನಾವು ಜೆರುಸಲೇಮಿಗೆ ಬಂದು ಸೇರಿದೆವು. ಬಂದವರ ಹೆಸರುಗಳು ಹೀಗಿವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರ್ತಷಸ್ತ ರಾಜನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರ್ತಷಸ್ತನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರ ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರ್ತಷಸ್ತನ ಆಳಿಕೆಯಲ್ಲಿ ನನ್ನೊಂದಿಗೆ ಬಾಬೆಲಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಬಾಬಿಲೋನಿನಿಂದ ನನ್ನ ಸಂಗಡ ಹೊರಟು ಬಂದವರ ಕುಟುಂಬಗಳಲ್ಲಿ ಮುಖ್ಯಸ್ಥರು ಯಾರೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:1
16 ತಿಳಿವುಗಳ ಹೋಲಿಕೆ  

ಎಜ್ರನೊಂದಿಗೆ ಇಸ್ರೇಲರ ಬಹುಮಂದಿ ಜೆರುಸಲೇಮಿಗೆ ಬಂದರು. ಅವರಲ್ಲಿ ಯಾಜಕರೂ ಲೇವಿಯರೂ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅವರು ಜೆರುಸಲೇಮಿಗೆ ಬಂದು ತಲುಪಿದರು.


ಈ ಆಜ್ಞೆಯನ್ನು ಕೊಡುವ ನಾನು ತಿಳಿಸುವುದೇನೆಂದರೆ, ನನ್ನ ಸಾಮ್ರಾಜ್ಯದಲ್ಲಿರುವ ಇಸ್ರೇಲರ ಯಾಜಕರು, ಲೇವಿಯರು, ಜನರೆಲ್ಲರೂ ಎಜ್ರನೊಂದಿಗೆ ಜೆರುಸಲೇಮಿಗೆ ಹೋಗಲು ಇಚ್ಛಿಸುವುದಾದರೆ ಅವರು ಹೋಗಬಹುದು.


ಇವರು ಹುಡುಕಿದರೂ ತಮ್ಮ ವಂಶಾವಳಿ ಪತ್ರವನ್ನು ಕಂಡುಕೊಳ್ಳಲಾಗಲಿಲ್ಲ. ಆದ್ದರಿಂದ ಇವರು ಅಶುದ್ಧರೆಂದು ಪರಿಗಣಿಸಲ್ಪಟ್ಟು ಯಾಜಕತ್ವದಿಂದ ತಳ್ಳಲ್ಪಟ್ಟರು.


ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೆರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೆರುಸಲೇಮಿಗೆ ಹೊರಟರು.


ಸೈನ್ಯಕ್ಕೆ ಒಟ್ಟು ಎರಡು ಸಾವಿರದ ಆರುನೂರು ಮಂದಿ ಸೇನಾಪತಿಗಳಿದ್ದರು.


ಯೆರೀಯನಿಗೆ ಎರಡು ಸಾವಿರದ ಏಳುನೂರು ಮಂದಿ ಸಂಬಂಧಿಕರಿದ್ದರು. ಇವರೆಲ್ಲಾ ಬಲಾಢ್ಯರೂ ಕುಟುಂಬಕ್ಕೆ ನಾಯಕರುಗಳೂ ಆಗಿದ್ದರು. ದಾವೀದನು ಇವರೆಲ್ಲರಿಗೂ ರೂಬೇನ್, ಗಾದ್, ಅರ್ಧಮನಸ್ಸೆಯವರ ಪ್ರಾಂತ್ಯಗಳಲ್ಲಿ ಯೆಹೋವನಿಗೆ ಸಂಬಂಧಿಸಿದ ಕಾರ್ಯಗಳನ್ನು, ರಾಜನಿಗೆ ಸಂಬಂಧಿಸಿದ ಕಾರ್ಯಗಳನ್ನು ಮಾಡಲು ನೇಮಕ ಮಾಡಿದನು.


ಇವರನ್ನು ವಿಶಿಷ್ಟಕಾರ್ಯಗಳಿಗಾಗಿ ಚೀಟುಹಾಕಿ ಆರಿಸಲಾಯಿತು. ಆರೋನನ ಸಂತತಿಯವರೂ ಯಾಜಕರೂ ಆಗಿದ್ದ ತಮ್ಮ ಸಂಬಂಧಿಕರು ಮಾಡಿದಂತೆಯೇ ಚೀಟುಹಾಕಿ ವಿಶಿಷ್ಟ ಕಾರ್ಯಗಳಿಗಾಗಿ ಇವರನ್ನು ಆರಿಸಿಕೊಳ್ಳಲಾಯಿತು. ರಾಜನಾದ ದಾವೀದನ, ಚಾದೋಕನ, ಅಹೀಮೆಲೆಕನ ಮತ್ತು ಲೇವಿಕುಲದ ನಾಯಕರ ಎದುರಿಗೆ ಚೀಟುಹಾಕಿದರು. ಹಿರಿಯ ಅಥವಾ ಕಿರಿಯ ಕುಟುಂಬಗಳೆನ್ನದೆ ಎಲ್ಲರಿಗೂ ಸಮಾನವಾಗಿ ಕೆಲಸಗಳನ್ನು ಹಂಚಿದರು.


ಈ ಲೇವಿಯರೆಲ್ಲಾ ತಮ್ಮತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ಇವರ ಹೆಸರುಗಳು ಅವರ ಕುಟುಂಬ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಅವರು ಜೆರುಸಲೇಮಿನಲ್ಲಿ ವಾಸಿಸಿದರು.


ಇಸ್ರೇಲ್ ಜನರ ಎಲ್ಲಾ ಹೆಸರುಗಳು ಅವರವರ ವಂಶಾವಳಿ ಪಟ್ಟಿಯಲ್ಲಿ ಬರೆಯಲ್ಪಟ್ಟಿದೆ. ಈ ವಂಶಾವಳಿಗಳು ಇಸ್ರೇಲ್ ರಾಜರ ಇತಿಹಾಸದಲ್ಲಿ ಸೇರಿಸಲ್ಪಟ್ಟಿದೆ. ಯೆಹೂದ ಪ್ರಾಂತ್ಯದ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ಯಲಾಯಿತು. ಅವರು ದೇವರಿಗೆ ಅವಿಧೇಯರಾದ್ದರಿಂದ ಅವರಿಗೆ ಇಂಥ ಸ್ಥಿತಿ ಬಂದೊದಗಿತು.


ಬೇರೆ ಹಳ್ಳಿಗಳು ಬಾಲ್ ತನಕವೂ ಇದ್ದವು. ಅವರು ವಾಸವಾಗಿದ್ದದ್ದು ಅಲ್ಲಿಯೇ. ಇದಲ್ಲದೆ ಅವರು ತಮ್ಮ ವಂಶದ ಚರಿತ್ರೆಯನ್ನೂ ಬರೆದಿಟ್ಟರು.


ರಾಜನ, ಅವನ ಮುಖ್ಯಾಧಿಕಾರಿಗಳ ಮತ್ತು ಅವನ ಸಲಹೆಗಾರರ ಸಮ್ಮುಖದಲ್ಲಿ ಯೆಹೋವನು ನನ್ನ ಮೇಲಿಟ್ಟಿರುವ ಅಗಾಧ ಪ್ರೀತಿಯನ್ನು ಪ್ರಕಟಪಡಿಸಿದನು. ದೇವರಾದ ಯೆಹೋವನು ನನ್ನ ಸಂಗಡವಿದ್ದುದರಿಂದ ನಾನು ಧೈರ್ಯಗೊಂಡೆನು. ನನ್ನೊಂದಿಗೆ ಜೆರುಸಲೇಮಿಗೆ ಹೋಗಲು ಮನಸ್ಸುಳ್ಳ ಇಸ್ರೇಲ್ ನಾಯಕರನ್ನು ನಾನು ಒಟ್ಟುಗೂಡಿಸಿದೆನು.


ಫೀನೆಹಾಸನ ಸಂತತಿಯವರಲ್ಲಿ ಗೇರ್ಷೋಮ್; ಈತಾಮಾರನ ಸಂತತಿಯವರಲ್ಲಿ ದಾನಿಯೇಲನು; ದಾವೀದನ ಸಂತತಿಯವರಲ್ಲಿ ಹಟ್ಟೂಷ್;


ಜೆರುಬ್ಬಾಬೆಲನೊಂದಿಗೆ ಹಿಂತಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ:


ಪರೋಷಿನ ಸಂತತಿಯವರು 2,172


ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು