Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:17 - ಪರಿಶುದ್ದ ಬೈಬಲ್‌

17 ಕಾಸಿಫ್ಯದ ಇದ್ದೋ ಎಂಬವರಲ್ಲಿಗೆ ಕಳುಹಿಸಿದೆನು. ಇವನು ಕಾಸಿಫ್ಯದ ನಿವಾಸಿಗಳ ನಾಯಕನಾಗಿದ್ದನು. ಇವನ ಸಂಬಂಧಿಕರು ಕಾಸಿಫ್ಯದ ದೇವಾಲಯದ ಸೇವಕರಾಗಿದ್ದಾರೆ. ನಾವು ಕಟ್ಟುವ ದೇವಾಲಯದಲ್ಲಿ ಸೇವೆ ಮಾಡುವವರನ್ನು ಇದ್ದೋ ಕಳುಹಿಸಬೇಕೆಂಬ ಉದ್ದೇಶದಿಂದಲೇ ನಾನು ಅವರನ್ನು ಅವರ ಬಳಿಗೆ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರ ತರುವಾಯ ನಾನು ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ, ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ, ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದ ಪರಿಚಾರಕರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪಂಡಿತರಾದ ಯೋಯಾರೀಬ್, ಎಲ್ನಾತಾನ್ ಇವರನ್ನೂ ಕರೆಯಿಸಿದೆ; ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿದೆ; ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನ ಪರಿಚಾರಕ ವರ್ಗದವರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆ. ಆ ಊರಿನವರು ಪರಿಚಾರಕ ವರ್ಗದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಎಲ್ನಾತಾನ್ ಇವರನ್ನೂ ಕರಿಸಿ ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದಾಸ ವರ್ಗದವರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕಾಸಿಫ್ಯದಲ್ಲಿರುವ ಅಧಿಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ, ಅವರು ನಮ್ಮ ದೇವರ ಆಲಯಕ್ಕೋಸ್ಕರ ಸೇವಕರನ್ನು ತರುವ ಹಾಗೆ ಅವರು ಕಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ, ಅವನ ಸಹೋದರರಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:17
16 ತಿಳಿವುಗಳ ಹೋಲಿಕೆ  

ದೇವಾಲಯದ ವಿಶೇಷ ಸೇವಕರು ಯಾರೆಂದರೆ: ಜೀಹ, ಹಸೂಫ, ಟಬ್ಬಾವೋತ್,


ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು.


ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಯೆರೆಮೀಯನೇ, ಇಗೋ, ನಾನು ನನ್ನ ಮಾತುಗಳನ್ನು ನಿನ್ನ ಬಾಯಲ್ಲಿ ಇಡುತ್ತಿದ್ದೇನೆ.


ಎಜ್ರನೊಂದಿಗೆ ಇಸ್ರೇಲರ ಬಹುಮಂದಿ ಜೆರುಸಲೇಮಿಗೆ ಬಂದರು. ಅವರಲ್ಲಿ ಯಾಜಕರೂ ಲೇವಿಯರೂ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅವರು ಜೆರುಸಲೇಮಿಗೆ ಬಂದು ತಲುಪಿದರು.


ದೇವಾಲಯದ ಎಲ್ಲಾ ಸೇವಕರೂ ಸೊಲೊಮೋನನ ಸೇವಕರೂ ಒಟ್ಟು ಸೇರಿ 392


ರಾಜನು, “ಈ ವಿಚಾರಗಳನ್ನೆಲ್ಲ ಹೇಳಲು ಯೋವಾಬನು ನಿನಗೆ ತಿಳಿಸಿದನಲ್ಲವೇ?” ಎಂದನು. ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ನಿಮ್ಮ ಆಣೆಯಾಗಿಯೂ, ನೀವು ಹೇಳಿದ್ದು ಸರಿ! ನಿಮ್ಮ ಸೇವಕನಾದ ಯೋವಾಬನು ಈ ವಿಷಯಗಳನ್ನು ಹೇಳಲು ನನಗೆ ತಿಳಿಸಿದನು.


ರಾಜನ ಬಳಿಗೆ ಹೋಗಿ, ನಾನು ಹೇಳಿಕೊಟ್ಟ ಮಾತುಗಳನ್ನು ಅವನಿಗೆ ಹೇಳು” ಎಂದು ಹೇಳಿದನು. ಯೋವಾಬನು ಬುದ್ಧಿವಂತಳಾದ ಆ ಸ್ತ್ರೀಗೆ ಮಾತಾಡಬೇಕಾದದ್ದನ್ನು ಹೇಳಿಕೊಟ್ಟನು.


ನಾನು ಅವರಿಗಾಗಿ ನಿನ್ನ ತರಹದ ಒಬ್ಬ ಪ್ರವಾದಿಯನ್ನು ಕಳುಹಿಸುವೆನು. ಅವನು ಅವರ ಜನರಲ್ಲಿ ಒಬ್ಬನಾಗಿರುವನು. ಅವನು ಜನರಿಗೆ ತಿಳಿಸಬೇಕಾದ ವಿಷಯವನ್ನು ನಾನೇ ಅವನಿಗೆ ತಿಳಿಸುವೆನು. ನಾನು ಆಜ್ಞಾಪಿಸುವುದೆಲ್ಲವನ್ನು ಅವನು ಜನರಿಗೆ ತಿಳಿಸುವನು.


ಎಲ್ಲಾ ಇಸ್ರೇಲರಿಂದ ನಾನೇ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ನಿನಗೆ ಕೊಡಲ್ಪಟ್ಟ ಬಹುಮಾನವಾಗಿದ್ದಾರೆ. ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸವನ್ನು ಮಾಡಲು ಅವರು ಯೆಹೋವನಿಗೆ ಪ್ರತಿಷ್ಠಿತರಾಗಿದ್ದಾರೆ.


ಅವನು ನಿನ್ನೊಡನೆ ಫರೋಹನ ಬಳಿಗೆ ಬರುವನು. ನೀನು ಹೇಳಬೇಕಾದದ್ದನ್ನು ನಾನೇ ನಿನಗೆ ತಿಳಿಸುವೆನು. ಅದನ್ನು ನೀನು ಆರೋನನಿಗೆ ತಿಳಿಸು. ಆರೋನನು ಫರೋಹನೊಡನೆ ಸರಿಯಾಗಿ ಮಾತಾಡುವನು.


ಅಲ್ಲಿಂದ ಹಿಂತಿರುಗಿಬಂದು ತಮ್ಮ ಸ್ವನಾಡಿನಲ್ಲಿ ನೆಲೆಸಿದವರಲ್ಲಿ ಮೊದಲನೆಯವರು ಯಾರೆಂದರೆ: ಕೆಲವು ಇಸ್ರೇಲರು, ಯಾಜಕರು, ಲೇವಿಯರು ಮತ್ತು ದೇವಾಲಯದ ಸೇವಕರು.


ಆಗ ನಾನು ಎಲಿಯೆಜರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ ಮತ್ತು ಮೆಷುಲ್ಲಾಮ್ ಎಂಬ ನಾಯಕರನ್ನು ಕರೆದೆನು. ಅಲ್ಲದೆ (ಬೋಧಕರುಗಳಾದ) ಯೋಯಾರೀಬ್ ಮತ್ತು ಎಲ್ನಾತಾನ್ ಎಂಬವರನ್ನು ಕರೆದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು