Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:36 - ಪರಿಶುದ್ದ ಬೈಬಲ್‌

36 ಅರಸನಾದ ಅರ್ತಷಸ್ತನು ಕೊಟ್ಟಿದ್ದ ರಾಜಾಜ್ಞೆಯ ಪತ್ರವನ್ನು ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರಿಗೂ ಸಂಸ್ಥಾನಾಧಿಕಾರಿಗಳಿಗೂ ಕೊಟ್ಟಾಗ ಅವರು ಇಸ್ರೇಲ್ ಜನರಿಗೂ ಅವರ ದೇವಾಲಯಕ್ಕೂ ಸಂಪೂರ್ಣ ಸಹಕಾರವನ್ನೂ ಬೆಂಬಲವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ ನದಿಯಾಚೆಯ ರಾಜ್ಯಪಾಲರಿಗೂ ಒಪ್ಪಿಸಿದರು. ಅಂದಿನಿಂದ ಆ ಅಧಿಕಾರಿಗಳು ಜನರಿಗೂ ದೇವಾಲಯಕ್ಕೂ ಸಹಾಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ದೇವಾಲಯಕ್ಕೂ ಸಹಾಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅವರು ಅರಸನ ಆಜ್ಞೆಗಳನ್ನು ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ, ಯಜಮಾನರಿಗೂ ಒಪ್ಪಿಸಿದರು. ಆಗ ಅವರು ಜನರಿಗೂ, ದೇವರ ಆಲಯಕ್ಕೂ ಸಹಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:36
11 ತಿಳಿವುಗಳ ಹೋಲಿಕೆ  

ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಲು ತನ್ನ ಬಾಯನ್ನು ತೆರೆದು, ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು.


ಅಪೊಲ್ಲೋಸನು ಅಖಾಯ ಪ್ರಾಂತ್ಯಕ್ಕೆ ಹೋಗಲು ಅಪೇಕ್ಷಿಸಿದಾಗ ಎಫೆಸದ ಸಹೋದರರು ಅವನನ್ನು ಪ್ರೋತ್ಸಾಹಿಸಿದರು. ಅಲ್ಲದೆ ಅಖಾಯದಲ್ಲಿದ್ದ ಯೇಸುವಿನ ಶಿಷ್ಯರಿಗೆ ಅವರು ಪತ್ರವನ್ನು ಬರೆದು, ಅಪೊಲ್ಲೋಸನನ್ನು ಸ್ವೀಕರಿಸಿಕೊಳ್ಳಬೇಕೆಂದು ಅವರನ್ನು ಕೇಳಿಕೊಂಡರು. ಅಖಾಯದಲ್ಲಿ ಈ ಶಿಷ್ಯರು ದೇವರ ಕೃಪೆಯಿಂದಾಗಿ ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. ಅಪೊಲ್ಲೋಸನು ಅಲ್ಲಿಗೆ ಹೋಗಿ ಅವರಿಗೆ ಬಹಳ ನೆರವು ನೀಡಿದನು.


ಅಲ್ಲದೆ ಸಂಸ್ಥಾನಗಳಲ್ಲಿದ್ದ ಅಧಿಕಾರಿಗಳು, ರಾಜ್ಯಪಾಲರು, ಆಡಳಿತಾಧಿಕಾರಿಗಳು ಯೆಹೂದ್ಯರಿಗೆ ನೆರವಾದರು. ಯಾಕೆಂದರೆ ಅವರು ಮೊರ್ದೆಕೈಗೆ ಹೆದರುತ್ತಿದ್ದರು.


ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾದ ತತ್ತೆನೈ, ಶೆತರ್ಬೋಜೆನೈ ಮತ್ತು ಅವರ ಸಂಗಡವಿರುವ ಜನರು ರಾಜನಾದ ದಾರ್ಯಾವೆಷನ ಆಜ್ಞೆಗೆ ಅತ್ಯಂತ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ವಿಧೇಯರಾದರು.


ಆಮೇಲೆ “ರಾಜನೇ, ನನಗೆ ಸಹಾಯವನ್ನು ಮಾಡಲು ನೀನು ಇಚ್ಫಿಸುವುದಾದರೆ ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲರಿಗೆ ಪತ್ರಗಳನ್ನು ಬರೆದುಕೊಟ್ಟರೆ ನಾನು ಯೆಹೂದಕ್ಕೆ ಅವರ ಪ್ರಾಂತ್ಯಗಳ ಮೂಲಕವಾಗಿ ಸುರಕ್ಷಿತವಾಗಿ ಹೋಗಲು ಸಾಧ್ಯವಾಗುವುದು.


ಮೊದಲನೆ ತಿಂಗಳಿನ ಹದಿಮೂರನೇ ದಿವಸದಂದು ರಾಜಲೇಖಕರನ್ನು ಕರೆಯಿಸಿ ಹಾಮಾನನ ಆಜ್ಞೆಯನ್ನು ಆಯಾಭಾಷೆಗಳಲ್ಲಿ ಬರೆಯಿಸಿದನು. ರಾಜನ ಸಂಸ್ಥಾನಾಧಿಕಾರಿಗಳಿಗೆ, ರಾಜ್ಯಪಾಲರಿಗೆ ಮತ್ತು ವಿವಿಧ ಜನಾಂಗದ ಅಧಿಕಾರಿಗಳಿಗೆ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅದಕ್ಕೆ ರಾಜನ ಮುದ್ರೆಯನ್ನೊತ್ತಲಾಯಿತು.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು