Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:8 - ಪರಿಶುದ್ದ ಬೈಬಲ್‌

8 “ಈಗಲಾದರೋ ನೀನು ನಮ್ಮ ಮೇಲೆ ದಯೆ ತೋರಿಸಿರುವೆ. ಸೆರೆಯಲ್ಲಿದ್ದ ನಿನ್ನ ಜನರಲ್ಲಿ ಕೆಲವರು ಅಲ್ಲಿಂದ ತಪ್ಪಿಸಿಕೊಂಡು ನಿನ್ನ ಪರಿಶುದ್ಧ ದೇಶದಲ್ಲಿ ವಾಸಿಸುವಂತೆ ಮಾಡಿರುವೆ; ಗುಲಾಮತನದಿಂದ ನಮ್ಮನ್ನು ಬಿಡುಗಡೆ ಮಾಡಿ ಹೊಸಜೀವ ಕೊಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವನವನ್ನು ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೂ ನಮ್ಮ ದೇವರಾದ ಸರ್ವೇಶ್ವರಾ, ಒಂದು ಕ್ಷಣ ನಮಗೆ ನೀವು ಪ್ರಸನ್ನರಾಗಿ ನಮ್ಮಲ್ಲಿ ಸ್ವಲ್ಪ ಜನರನ್ನಾದರೂ ರಕ್ಷಣೆಗಾಗಿ ಉಳಿಸಿ, ತಮ್ಮ ಪರಿಶುದ್ಧಸ್ಥಳದಲ್ಲಿ ಮೊಳೆಯುವಂತೆ, ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಬೆಳಗಿಸಿ‌, ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ನವಜೀವವನ್ನು ಅನುಗ್ರಹಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವವನ್ನು ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಈಗ ನಮ್ಮ ಯೆಹೋವ ದೇವರೇ, ಸ್ವಲ್ಪ ಹೊತ್ತು ನಮಗೆ ದಯೆತೋರಿ ನಮ್ಮ ದಾಸತ್ವದಿಂದ ನಮಗೆ ಬಿಡುಗಡೆ ಕೊಟ್ಟಿದ್ದೀರಿ. ನಮ್ಮ ಕಣ್ಣುಗಳನ್ನು ಬೆಳಗಿಸಿ, ತಮ್ಮ ಪರಿಶುದ್ಧ ಸ್ಥಾನದಲ್ಲಿ ನೆಲೆಗೊಳಿಸುವಂತೆ ಮಾಡಿದ್ದೀರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:8
36 ತಿಳಿವುಗಳ ಹೋಲಿಕೆ  

ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು. ಇಲ್ಲವಾದರೆ, ನಾನು ಸಾಯಲೇಬೇಕಾಗುವುದು!


ಎರಡು ದಿವಸಗಳ ತರುವಾಯ ನಮ್ಮನ್ನು ತಿರುಗಿ ಜೀವಂತ ಮಾಡುವನು. ಮೂರನೇ ದಿವಸದಲ್ಲಿ ನಮ್ಮನ್ನು ಎಬ್ಬಿಸುವನು. ಆಗ ನಾವು ಆತನ ಸಮೀಪದಲ್ಲಿ ವಾಸಿಸಬಹುದು.


ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿವೆ. ನಮ್ಮ ಕಾಲದಲ್ಲಿಯೂ ಮಹತ್ಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ, ಆ ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ದಯವಿಟ್ಟು ನಮ್ಮನ್ನು ಮತ್ತೆ ಜೀವಿಸಮಾಡು! ನಿನ್ನ ಜನರನ್ನು ಸಂತೋಷಗೊಳಿಸು.


ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.


ಇದಲ್ಲದೆ ಯೆಶಾಯನು ಇಸ್ರೇಲಿನ ಬಗ್ಗೆ ಕೂಗಿ ಹೇಳಿದ್ದಾನೆ: “ಸಮುದ್ರ ತೀರದ ಮರಳಿನಂತೆ ಇಸ್ರೇಲರು ಅಸಂಖ್ಯಾತವಾಗಿರುವರು. ಆದರೆ ಆ ಜನರಲ್ಲಿ ಕೆಲವರು ಮಾತ್ರ ರಕ್ಷಣೆ ಹೊಂದುವರು.


“ಮೂಲೇ ಕಲ್ಲು, ಗುಡಾರದ ಗೂಟ, ಯುದ್ಧದ ಬಿಲ್ಲು ಮತ್ತು ಮುನ್ನುಗ್ಗುವ ಸೈನ್ಯ, ಇವೆಲ್ಲವು ಒಟ್ಟಾಗಿ ಯೆಹೂದಿಂದ ಬರುವದು.


“ಈ ಜನರು ನೆಮ್ಮದಿಯಿಂದ ಭೂಮಿಯ ಮೇಲೆ ನಡೆಯುವರು. ಅವರ ದ್ರಾಕ್ಷಾಲತೆಗಳು ದ್ರಾಕ್ಷಿಹಣ್ಣನ್ನು ಕೊಡುವವು. ದೇಶವು ಸಮೃದ್ಧಿಯಾದ ಬೆಳೆಯನ್ನು ಕೊಡುವದು. ಆಕಾಶವು ಮಳೆಯನ್ನು ಸುರಿಸುವದು. ಇವೆಲ್ಲವನ್ನು ನಾನು ನನ್ನ ಜನರಿಗೆ ಕೊಡುವೆನು.


ಅಳಿದುಳಿದುವರು “ಇದು ಆಶ್ಚರ್ಯಕರ” ಎಂದು ಹೇಳುವರು. ನಾನೂ ಇದು ಆಶ್ಚರ್ಯಕರವೆಂದು ತಿಳಿಯುತ್ತೇನೆ.


ಆದರೆ ಆಶ್ಚರ್ಯಕರವಾಗಿ, ಕೆಲವರು ಅದರಲ್ಲಿ ಉಳಿದುಕೊಳ್ಳುವರು, ಪುತ್ರಪುತ್ರಿಯರನ್ನು ನಿಮ್ಮ ಬಳಿಗೆ ಜೀವಂತವಾಗಿ ತರಲಾಗುವುದು. ಆ ಜನರು ಎಷ್ಟು ದುಷ್ಟರೆಂಬುದನ್ನು ಸ್ವತಃ ನೀವೇ ಅರ್ಥಮಾಡಿಕೊಳ್ಳುವಿರಿ. ನಾನು ಜೆರುಸಲೇಮಿನ ಮೇಲೆ ಬರಮಾಡಿದ ಇಡೀ ಆಪತ್ತಿನ ಬಗ್ಗೆ ನೀವು ಬಹಳವಾಗಿ ನೊಂದುಕೊಳ್ಳುವಿರಿ.


ಈಜಿಪ್ಟಿಗೆ ವಲಸೆ ಹೋದ ಕೆಲವೇ ಯೆಹೂದದ ಜನರು ಅಳಿದುಳಿದವರಾಗಿದ್ದಾರೆ. ಒಬ್ಬನೂ ಕೂಡ ನನ್ನ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾರನು. ಅವರಲ್ಲಿ ಒಬ್ಬನೂ ಜೀವಂತವಾಗಿ ಯೆಹೂದಕ್ಕೆ ಹಿಂತಿರುಗಿ ಬರಲಾರನು. ಆ ಜನರು ಯೆಹೂದಕ್ಕೆ ಹಿಂತಿರುಗಿ ಬಂದು ಅಲ್ಲಿ ವಾಸಮಾಡಬಯಸುವರು, ಆದರೆ ತಪ್ಪಿಸಿಕೊಂಡ ಸ್ವಲ್ಪ ಜನರನ್ನು ಬಿಟ್ಟು ಮಿಕ್ಕವರಾರೂ ಯೆಹೂದಕ್ಕೆ ಹಿಂತಿರುಗುವದಿಲ್ಲ.”


ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಬೇಡಿಕೆಯನ್ನು ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಬಹಳ ಜನ ಉಳಿದಿಲ್ಲವೆಂಬುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಬಹಳ ಜನರಿದ್ದೆವು.


ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.


ಜ್ಞಾನಿಯ ನುಡಿಗಳು ಪ್ರಾಣಿಗಳನ್ನು ಮುನ್ನಡೆಸುವ ಚಾವಟಿಗಳಂತಿವೆ. ಅವನ ಉಪದೇಶಗಳು ಮುರಿಯದ ಮೊಳೆಗಳಂತಿವೆ. ಅವುಗಳೆಲ್ಲ ಒಬ್ಬನೇ ಕುರುಬನಿಂದ (ದೇವರಿಂದ) ಬಂದಿವೆ.


ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.


ಆತನನ್ನೇ ದೃಷ್ಟಿಸುವವರು ಸಹಾಯವನ್ನು ಹೊಂದಿಕೊಳ್ಳುವರು. ಅವರಿಗೆ ಆಶಾಭಂಗವಾಗದು.


“ಆದರೂ ನೀನು ದಯಾವಂತನು, ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಅವರನ್ನು ತೊರೆಯಲಿಲ್ಲ. ನೀನು ಅಂಥಾ ದಯಾಪರನಾದ ದೇವರು.


ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”


ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ.


ಸೇನಾಧಿಪತಿಯ ಒಡೆಯನಾದ ಅಶ್ಶೂರದ ರಾಜನು, ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟದ್ದನ್ನು ನುಡಿಯಲು ಅವನನ್ನು ಕಳುಹಿಸಿದನು. ನಿಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲ ಕೇಳಿರುತ್ತಾನೆ. ಯೆಹೋವನು ಶತ್ರುಗಳನ್ನು ತಪ್ಪಿತಸ್ಥರೆಂದು ನಿರ್ಧರಿಸಬಹುದು! ಆದ್ದರಿಂದ ಇನ್ನೂ ಜೀವಸಹಿತ ಉಳಿದಿರುವ ಜನರಿಗಾಗಿ ಪ್ರಾರ್ಥಿಸಿ” ಎಂದು ಹೇಳಿದರು.


ಬಳಲಿಹೋಗಿದ್ದ ಜನರನ್ನು ಕಂಡ ಯೋನಾತಾನನು, “ನನ್ನ ತಂದೆಯು ದೇಶಕ್ಕೆ ತೊಂದರೆ ಮಾಡಿದನು. ನಾನು ಸ್ವಲ್ಪ ಜೇನನ್ನು ತಿಂದ ಮೇಲೆ ಎಷ್ಟೋ ಚೈತನ್ಯ ಬಂದಿತು.


ಆದರೆ ಯೋನಾತಾನನಿಗೆ ಈ ಶಾಪದ ಕುರಿತು ತಿಳಿದಿರಲಿಲ್ಲ; ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದೂ ಗೊತ್ತಿರಲಿಲ್ಲ. ಯೋನಾತಾನನ ಕೈಯಲ್ಲಿ ಒಂದು ಕೋಲಿತ್ತು. ಅವನು ಆ ಕೋಲನ್ನು ಜೇನುಗೂಡಿನಲ್ಲಿ ಚುಚ್ಚಿ ಸ್ವಲ್ಪ ಜೇನನ್ನು ತೆಗೆದುಕೊಂಡು ತಿಂದನು. ಆಗ ಅವನು ಸ್ವಲ್ಪ ಬಲಗೊಂಡನು.


ಒಂದು ರೀತಿಯಲ್ಲಿ ಬಡವನಿಗೂ ಅವನನ್ನು ಕುಗ್ಗಿಸುವವನಿಗೂ ವ್ಯತ್ಯಾಸವಿಲ್ಲ; ಅವರಿಬ್ಬರಿಗೂ ಜೀವಕೊಟ್ಟಾತನು ಯೆಹೋವನೇ; ಅವರಿಬ್ಬರನ್ನು ಸೃಷ್ಟಿಮಾಡಿದವನು ಯೆಹೋವನೇ.


ಯೆಹೋವನು ನಿಮ್ಮ ಪ್ರಯಾಸವನ್ನು ನಿವಾರಿಸಿ ನಿಮ್ಮನ್ನು ಆದರಿಸುವನು. ಹಿಂದಿನ ದಿವಸಗಳಲ್ಲಿ ನೀವು ಗುಲಾಮರಾಗಿರುವಾಗ ಜನರು ನಿಮ್ಮನ್ನು ಬಹಳವಾಗಿ ಹಿಂಸಿಸಿದರು; ಬಲವಂತದಿಂದ ಕಷ್ಟಕರವಾದ ಕೆಲಸವನ್ನು ನಿಮ್ಮಿಂದ ಮಾಡಿಸಿದರು. ಆದರೆ ಯೆಹೋವನು ಆ ಸಂಕಟಗಳಿಂದ ನಿಮ್ಮನ್ನು ಪಾರುಮಾಡುವನು.


ಆಗ ವೈರಿಯು, “ನಾನು ಅವನನ್ನು ಸೋಲಿಸಿದೆ!” ಎಂದು ಹೇಳುತ್ತಾ ನನ್ನ ಬೀಳುವಿಕೆಯನ್ನು ಕಂಡು ಸಂತೋಷಪಡುವನು.


ಆದರೆ ದೇಶದಲ್ಲಿ ಹತ್ತನೆ ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಆ ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವದು. ಈ ಕಾಂಡದ ಬುಡವು ಬಹು ವಿಶೇಷವಾದ ಬೀಜವಾಗಿರುವದು ಮತ್ತು ಅದು ಪುನಃ ಬೆಳೆಯುವುದು.


ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು