Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:9 - ಪರಿಶುದ್ದ ಬೈಬಲ್‌

9 ಇದು ದೇವರ ಚಿತ್ತವಾಗಿತ್ತು. ಕ್ರಿಸ್ತನ ಮೂಲಕ ಇದನ್ನು ನೆರವೇರಿಸಲು ಆತನು ಯೋಜನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9-10 ತಾನು ಕಾಲವು ಪರಿಪೂರ್ಣವಾದಾಗ ನಿರ್ವಹಿಸಬೇಕಾದ ಒಂದು ಕೃಪೆಯುಳ್ಳ ಸಂಕಲ್ಪವನ್ನು ಆತನು ಕ್ರಿಸ್ತನಲ್ಲಿ ಮೊದಲೇ ನಿಷ್ಕರ್ಷೆಮಾಡಿಕೊಂಡಿದ್ದನು. ಅದೇನಂದರೆ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದಾಗಿ ಕೂಡಿಸಬೇಕೆಂಬದೇ. ಕ್ರಿಸ್ತನಲ್ಲಿಯೇ ಸಮಸ್ತವು ಒಂದಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದೆವಾನ್ ಅಪ್ನಾಚ್ಯಾ ಉದ್ದೆಶಾ ಪರ್ಕಾರ್ ಕರ್ಲ್ಯಾನ್, ಅನಿ ತೆನಿ ಅದ್ದಿಚ್ ನಿರ್ದಾರ್ ಕರಲ್ಲಿ ಅಪ್ಲಿ ಗುಟ್ಟಾಚಿ ಯೆವ್ಜನ್ ಕ್ರಿಸ್ತಾಚ್ಯಾ ವೈನಾ ಅಮ್ಕಾ ಕಳ್ವುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:9
28 ತಿಳಿವುಗಳ ಹೋಲಿಕೆ  

ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು.


ನಾವು ದೇವರ ಮಕ್ಕಳಾಗಿರಬೇಕೆಂದು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಳ್ಳಲಾಯಿತು. ನಾವು ತನ್ನ ಮಕ್ಕಳಾಗಿರಬೇಕೆಂದು ದೇವರು ತನ್ನ ಚಿತ್ತಾನುಸಾರವಾಗಿ ಮೊದಲೇ ಯೋಜನೆ ಮಾಡಿದ್ದನು. ತನ್ನ ನಿರ್ಧಾರ ಮತ್ತು ಇಷ್ಟಗಳಿಗನುಸಾರವಾಗಿ ಪ್ರತಿಯೊಂದನ್ನು ನೆರವೇರಿಸುವಾತನು ದೇವರೇ.


ಅನಾದಿಕಾಲದಿಂದಲೂ ಇದೇ ದೇವರ ಯೋಜನೆಯಾಗಿತ್ತು. ದೇವರು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ತನ್ನ ಯೋಜನೆಗನುಸಾರವಾಗಿ ಮಾಡಿದನು.


ನನಗೆ ಸುವಾರ್ತೆ ದೊರೆತದ್ದು ಮನುಷ್ಯರಿಂದಲ್ಲ. ಯಾವನೂ ನನಗೆ ಸುವಾರ್ತೆಯನ್ನು ಉಪದೇಶಿಸಲಿಲ್ಲ. ನಾನು ಜನರಿಗೆ ಉಪದೇಶಿಸಬೇಕಾದ ಸುವಾರ್ತೆಯನ್ನು ಯೇಸು ಕ್ರಿಸ್ತನೇ ನನಗೆ ಪ್ರಕಟಿಸಿದನು.


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.


ಆತನ ಮಗನ ವಿಷಯವಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂಬುದು ದೇವರ ಚಿತ್ತವಾಗಿತ್ತು. ಆದ್ದರಿಂದ ದೇವರು ತನ್ನ ಮಗನನ್ನು ನನಗೆ ತೋರಿಸಿದನು. ಆತನು ನನ್ನನ್ನು ಕರೆದಾಗ ನಾನು ಯಾರಿಂದಲೂ ಸಲಹೆಯನ್ನಾಗಲಿ ಸಹಾಯವನ್ನಾಗಲಿ ತೆಗೆದುಕೊಳ್ಳಲಿಲ್ಲ.


ಪೌಲನ ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲದ ಜನರು ಬಹು ಸಂತೋಷಪಟ್ಟು ಪ್ರಭುವಿನ ಸಂದೇಶಕ್ಕಾಗಿ ಸ್ತುತಿಸಿದರು. ನಿತ್ಯಜೀವವನ್ನು ಹೊಂದಿಕೊಳ್ಳಲು ಆಯ್ಕೆಯಾಗಿದ್ದವರೆಲ್ಲರೂ ನಂಬಿಕೊಂಡರು.


ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು.


ಯೇಸುವಿನ ವಿರುದ್ಧ ಒಟ್ಟಾಗಿ ಬಂದ ಈ ಜನರು ನಿನ್ನ ಯೋಜನೆ ನೆರವೇರುವಂತೆ ಮಾಡಿದರು. ನಿನ್ನ ಶಕ್ತಿಯಿಂದಲೂ ನಿನ್ನ ಚಿತ್ತದಿಂದಲೂ ಇದು ನೆರವೇರಿತು.


ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.


“ನೀವು ನನ್ನೊಂದಿಗೆ ಏಕೆ ಚರ್ಚೆಮಾಡುವಿರಿ, ನೀವೆಲ್ಲರೂ ನನ್ನ ವಿರುದ್ಧ ದಂಗೆ ಎದ್ದಿದ್ದೀರಿ” ಎನ್ನುತ್ತಾನೆ ಯೆಹೋವನು.


ಆದರೆ ಯೆಹೋವನ ಯೋಜನೆಗಳು ಶಾಶ್ವತವಾಗಿವೆ. ಆತನ ಆಲೋಚನೆಗಳು ಸದಾಕಾಲಕ್ಕೂ ಒಳ್ಳೆಯದಾಗಿವೆ.


“ಮೇಲಿನಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.


“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು.


ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.


ಆದರೆ ನಾನು ಹುಟ್ಟುವುದಕ್ಕಿಂತ ಮೊದಲೇ ನನ್ನ ವಿಷಯದಲ್ಲಿ ದೇವರಿಗೆ ವಿಶೇಷವಾದ ಯೋಜನೆಯಿತ್ತು. ಆದ್ದರಿಂದ ದೇವರು ತನ್ನ ಕೃಪೆಯಿಂದ ನನ್ನನ್ನು ಕರೆದನು.


ದೇವರು ನಮಗೆ ಆ ಕೃಪೆಯನ್ನು ಸಂಪೂರ್ಣವಾಗಿಯೂ ಉಚಿತವಾಗಿಯೂ ತೋರಿದನು. ದೇವರು ತನ್ನ ರಹಸ್ಯವಾದ ಯೋಜನೆಯನ್ನು ನಮಗೆ ತಿಳಿಸುವುದರ ಮೂಲಕ ನಮಗೆ ಸಂಪೂರ್ಣವಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು