Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:10 - ಪರಿಶುದ್ದ ಬೈಬಲ್‌

10 ತನ್ನ ನಾನಾ ವಿಧವಾದ ಜ್ಞಾನವು ಆಕಾಶಮಂಡಲದಲ್ಲಿರುವ ಎಲ್ಲಾ ಅಧಿಪತಿಗಳಿಗೂ ಅಧಿಕಾರಿಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10-11 ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10-11 ದೇವರು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ಅನಾದಿಕಾಲದಿಂದ ಮಾಡಿದ ಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಕ್ರೈಸ್ತ ಸಭೆಯ ಮೂಲಕ ಗೊತ್ತಾಗಬೇಕೆಂಬದನ್ನು ಉದ್ದೇಶಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಹು ಪ್ರಕಾರದ ದೇವರ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಸೆ ಅತ್ತಾಚ್ಯಾ ಯೆಳಾರ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ವೈನಾ, ಸರ್ಗಾಚ್ಯಾ ರಾಜಾತ್ಲ್ಯಾ ಮುಖಂಡಾನಿ ಅನಿ ಅಧಿಕಾರ್ಯ್ಯಾನಿ ಎಕ್ ದುಸ್ರ್ಯಾಚ್ ರಿತಿನ್ ತೆಜೆ ಶಾನ್ಪಾನ್ ಶಿಕುಚೆ ಮನುನ್ ತೆಜೊ ಉದ್ದೆಶ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:10
23 ತಿಳಿವುಗಳ ಹೋಲಿಕೆ  

ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.


ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.


ನಾವಾದರೋ ದೇವರ ರಹಸ್ಯವಾದ ಜ್ಞಾನವನ್ನೇ ಹೇಳುತ್ತೇವೆ. ಈ ಜ್ಞಾನವನ್ನು ಜನರಿಗೆ ಮರೆಮಾಡಲಾಗಿದೆ. ದೇವರು ನಮ್ಮ ಮಹಿಮೆಗಾಗಿ ಈ ಜ್ಞಾನವನ್ನು ಲೋಕವು ಆರಂಭವಾಗುವುದಕ್ಕಿಂತ ಮೊದಲೇ ಯೋಜಿಸಿದ್ದನು.


ಹೌದು, ದೇವರ ಐಶ್ವರ್ಯವು ಎಷ್ಟೋ ಅಪಾರವಾಗಿದೆ! ದೇವರ ವಿವೇಕಕ್ಕೂ ಜ್ಞಾನಕ್ಕೂ ಕೊನೆಯೇ ಇಲ್ಲ! ದೇವರು ನಿರ್ಧರಿಸುವ ಸಂಗತಿಗಳನ್ನು ಯಾವನೂ ವಿವರಿಸಲಾರನು. ದೇವರ ಮಾರ್ಗಗಳನ್ನು ಯಾವನೂ ಅರ್ಥಮಾಡಿಕೊಳ್ಳಲಾರನು.


ದೇವರು ಕ್ರಿಸ್ತನನ್ನು ಎಲ್ಲಾ ಅಧಿಪತಿಗಳಿಗಿಂತಲೂ ಅಧಿಕಾರಿಗಳಿಗಿಂತಲೂ ಶಕ್ತಿಗಳಿಗಿಂತಲೂ ರಾಜರುಗಳಿಗಿಂತಲೂ ಪ್ರಮುಖನನ್ನಾಗಿ ಮಾಡಿದನು. ಈ ಲೋಕದಲ್ಲಾಗಲಿ ಮುಂದಿನ ಲೋಕದಲ್ಲಾಗಲಿ ಕೊಡಲ್ಪಟ್ಟಿರುವ ಯಾವುದೇ ಹೆಸರುಳ್ಳವರಿಗಿಂತಲೂ ಕ್ರಿಸ್ತನು ಪ್ರಮುಖನಾಗಿದ್ದಾನೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.


ದೇವರಿಂದ ಕರೆಯಲ್ಪಟ್ಟಿರುವ ಜನರು ಯೆಹೂದ್ಯರಾಗಿದ್ದರೂ ಯೆಹೂದ್ಯರಲ್ಲದವರಾಗಿದ್ದರೂ ಅವರಿಗೆ ಕ್ರಿಸ್ತನು ದೇವರ ಶಕ್ತಿಯಾಗಿದ್ದಾನೆ; ಮತ್ತು ದೇವರ ಜ್ಞಾನವಾಗಿದ್ದಾನೆ.


ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.


ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು, ದೃಶ್ಯ ಮತ್ತು ಅದೃಶ್ಯವಾದವುಗಳು, ಆತ್ಮಿಕ ಶಕ್ತಿಗಳು, ಪ್ರಭುತ್ವಗಳು ಆತನ ಶಕ್ತಿಯಿಂದ ನಿರ್ಮಿತವಾಗಿವೆ. ಅಧಿಪತಿಗಳು ಮತ್ತು ಅಧಿಕಾರಿಗಳು ಆತನ ಶಕ್ತಿಯಿಂದ ನಿರ್ಮಿತರಾದರು. ಸಮಸ್ತವೂ ಕ್ರಿಸ್ತನ ಮೂಲಕವಾಗಿ ಆತನಿಗೋಸ್ಕರ ಸೃಷ್ಟಿಸಲ್ಪಟ್ಟವು.


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ದೇವರು ನಮಗೆ ಆ ಕೃಪೆಯನ್ನು ಸಂಪೂರ್ಣವಾಗಿಯೂ ಉಚಿತವಾಗಿಯೂ ತೋರಿದನು. ದೇವರು ತನ್ನ ರಹಸ್ಯವಾದ ಯೋಜನೆಯನ್ನು ನಮಗೆ ತಿಳಿಸುವುದರ ಮೂಲಕ ನಮಗೆ ಸಂಪೂರ್ಣವಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಟ್ಟನು.


ಹೌದು, ದೇವರ ಪ್ರೀತಿಯಿಂದ ನಮ್ಮನ್ನು ಯಾವುದೂ ಬೇರ್ಪಡಿಸಲಾರದೆಂದು ನನಗೆ ನಿಶ್ಚಯವಾಗಿ ತಿಳಿದಿದೆ. ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಿನ ಸಂಗತಿಗಳಾಗಲಿ ಯಾವ ಶಕ್ತಿಗಳೇ ಆಗಲಿ ಮೇಲಿನ ಸಂಗತಿಗಳಾಗಲಿ ಕೆಳಗಿನ ಸಂಗತಿಗಳಾಗಲಿ ಅಥವಾ ಇಡೀ ಜಗತ್ತಿನಲ್ಲಿರುವ ಯಾವುದೇ ಸಂಗತಿಗಳಾಗಲಿ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ.


ಯೆಹೋವನೇ, ನೀನು ಅನೇಕ ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ನೀನು ಸೃಷ್ಟಿಸಿದ ವಸ್ತುಗಳಿಂದ ಭೂಮಿಯು ತುಂಬಿಹೋಗಿದೆ. ನಿನ್ನ ಪ್ರತಿಯೊಂದು ಕಾರ್ಯದಲ್ಲೂ ನಿನ್ನ ಜ್ಞಾನವನ್ನು ಕಾಣಬಲ್ಲವು.


ಆಗ ದೇವರಾತ್ಮವು ನನ್ನನ್ನು ಮೇಲಕ್ಕೆ ಎತ್ತಿತು. ಯೆಹೋವನ ಮಹಿಮೆಯು ತನ್ನ ಸ್ಥಳದಿಂದ ಮೇಲೇರಿದಾಗ ನನ್ನ ಹಿಂಭಾಗದಲ್ಲಿ ಮಹಾ ಗುಡುಗುವ ಶಬ್ದವನ್ನು ಕೇಳಿದೆನು. ಅದು ಯೆಹೋವನಿಗೆ ಆತನ ನಿವಾಸದಲ್ಲಿ ಸ್ತೋತ್ರವಾಗಲಿ ಎಂಬ ವಾಣಿಯೊಂದಿಗೆ ಕೇಳಿಸುತ್ತಿತ್ತು.


ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ.


ಸಭೆಯು ಕ್ರಿಸ್ತನ ದೇಹವಾಗಿದೆ. ಸಭೆಯು ಕ್ರಿಸ್ತನಿಂದ ಆವರಿಸಲ್ಪಟ್ಟಿದೆ. ಆತನು ಸಮಸ್ತವನ್ನು ಪ್ರತಿಯೊಂದು ವಿಷಯದಲ್ಲಿಯೂ ಸಂಪೂರ್ಣಗೊಳಿಸುತ್ತಾನೆ.


ನೀವೆಲ್ಲರೂ ಕ್ರಿಸ್ತನಲ್ಲಿ ಸಂಪೂರ್ಣರಾಗಿದ್ದೀರಿ. ನಿಮಗೆ ಬೇರೇನೂ ಬೇಕಿಲ್ಲ. ಕ್ರಿಸ್ತನು ಎಲ್ಲ ದೊರೆತನಗಳನ್ನು ಮತ್ತು ಅಧಿಕಾರಗಳನ್ನು ಆಳುತ್ತಾನೆ.


ದೇವರು ತನಗೆ ವಿರೋಧವಾಗಿದ್ದ ದೊರೆತನಗಳನ್ನೂ ಅಧಿಕಾರಗಳನ್ನೂ ಸೋಲಿಸಿ, ಅವುಗಳನ್ನು ನಿರಾಯುಧರನ್ನಾಗಿ ಮಾಡಿ ಶಿಲುಬೆಯ ವಿಜಯೋತ್ಸವದಲ್ಲಿ ಅವುಗಳನ್ನು ಇಡೀ ಲೋಕದ ಎದುರಿನಲ್ಲಿ ಸೆರೆಯಾಳುಗಳನ್ನಾಗಿ ಮೆರವಣಿಗೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು