Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:16 - ಪರಿಶುದ್ದ ಬೈಬಲ್‌

16 ನೀವು ನಿಮ್ಮ ಆತ್ಮಗಳಲ್ಲಿ ಬಲವಾಗಿರಲು ಅಗತ್ಯವಾದ ಶಕ್ತಿಯನ್ನು ತನ್ನ ಮಹಿಮಾತಿಶಯದ ಪ್ರಕಾರ ಕೊಡಬೇಕೆಂದು ತಂದೆಯನ್ನು ಕೇಳಿಕೊಳ್ಳುತ್ತೇನೆ. ಆತನು ತನ್ನ ಆತ್ಮನ ಮೂಲಕವಾಗಿ ನಿಮಗೆ ಆ ಶಕ್ತಿಯನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲ ಹೊಂದಿದವರಾಗುವ ಹಾಗೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ದೆವ್ ಅಪ್ನಾಚ್ಯಾ ಮಹಿಮೆಚ್ಯಾ ಬದಿಕಾತ್ನಾ ತುಮ್ಚ್ಯಾ ಭುತ್ತುರ್ಲಿ ಮನಾ ಘಟ್ ರ್‍ಹಾವ್ಕ್ ಅಪ್ನಾಚ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಬಳ್ ದಿಂವ್ದಿ ಮನುನ್ ಮಿಯಾ ದೆವಾಕ್ಡೆ ಮಾಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:16
28 ತಿಳಿವುಗಳ ಹೋಲಿಕೆ  

ಆತನ ಮಹಿಮಾಶಕ್ತಿಯಿಂದ ಪರಿಪೂರ್ಣ ಬಲ ಹೊಂದಿ ಆನಂದಪೂರ್ವಕವಾದ ತಾಳ್ಮೆಯನ್ನು, ದೀರ್ಘಶಾಂತಿಯನ್ನು ಯಾವಾಗಲೂ ತೋರಿಸುವವರಾಗಿರಬೇಕೆಂತಲೂ ನಾವು ಪ್ರಾರ್ಥಿಸುತ್ತಿದ್ದೇವೆ.


ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ಯೆಹೋವನು ತನ್ನ ಜನರನ್ನು ಶಕ್ತಿಶಾಲಿಗಳನ್ನಾಗಿ ಮಾಡುವನು. ಅವರು ಆತನ ನಾಮದ ಘನತೆಗೋಸ್ಕರ ಜೀವಿಸುವರು. ಇದು ಯೆಹೋವನ ನುಡಿ.


ಆದರೆ ಪ್ರಭುವು ನನ್ನ ಬಳಿಯೇ ಇದ್ದನು. ನಾನು ಸುವಾರ್ತೆಯನ್ನು ಯೆಹೂದ್ಯರಲ್ಲದವರಿಗೆ ಸಂಪೂರ್ಣವಾಗಿ ಬೋಧಿಸಲು ಪ್ರಭುವು ನನಗೆ ಶಕ್ತಿಯನ್ನು ದಯಪಾಲಿಸಿದನು. ಆ ಸುವಾರ್ತೆಯನ್ನು ಯೆಹೂದ್ಯರಲ್ಲದ ಜನರೆಲ್ಲರೂ ಕೇಳುವುದು ಪ್ರಭುವಿನ ಇಷ್ಟವಾಗಿತ್ತು. ಆತನು ನನ್ನನ್ನು ಸಿಂಹದ (ಶತ್ರು) ಬಾಯಿಂದ ರಕ್ಷಿಸಿದನು.


ಆದಕಾರಣವೇ, ನಾವೆಂದಿಗೂ ಬಲಹೀನರಾಗುವುದಿಲ್ಲ. ನಮ್ಮ ಭೌತಿಕ ದೇಹಕ್ಕೆ ವಯಸ್ಸಾಗುತ್ತಿದೆ ಮತ್ತು ಅದು ಬಲಹೀನವಾಗುತ್ತಿದೆ. ಆದರೆ ನಮ್ಮ ಆಂತರ್ಯವು ಪ್ರತಿದಿನ ಹೊಸದಾಗುತ್ತಿದೆ.


ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ.


ಆದರೆ ಪ್ರಭುವು ನನಗೆ, “ನನ್ನ ಕೃಪೆಯೇ ನಿನಗೆ ಸಾಕು, ನೀನು ಬಲಹೀನನಾಗಿರುವಾಗ ನನ್ನ ಶಕ್ತಿಯು ನಿನ್ನಲ್ಲಿ ಪರಿಪೂರ್ಣವಾಗಿರುತ್ತದೆ” ಎಂದು ಹೇಳಿದನು.


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ಅನುಗುಣವಾಗಿ ನಿಮ್ಮ ಪ್ರತಿಯೊಂದು ಕೊರತೆಯನ್ನು ನೀಗಿಸುವನು.


ಯೆಹೋವನು ತನ್ನ ಜನರಿಗೆ ಬಲವೂ ತಾನು ಆರಿಸಿಕೊಂಡ ಅರಸನಿಗೆ ಆಶ್ರಯದುರ್ಗವೂ ಆಗಿದ್ದಾನೆ.


ನನ್ನ ಅಂತರಂಗದಲ್ಲಿ ದೇವರ ನಿಯಮದ ವಿಷಯದಲ್ಲಿ ನಾನು ಸಂತೋಷಪಡುತ್ತೇನೆ.


ಜಾಗರೂಕರಾಗಿರಿ, ನಂಬಿಕೆಯಲ್ಲಿ ದೃಢವಾಗಿರಿ. ಧೈರ್ಯದಿಂದಿರಿ ಮತ್ತು ಬಲಿಷ್ಠರಾಗಿರಿ.


ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ.


ದೇವರು ತನ್ನ ಅತಿಶಯವಾದ ಮಹಿಮೆಯನ್ನು ತೋರ್ಪಡಿಸಬೇಕೆಂದು ತಾಳ್ಮೆಯಿಂದ ಕಾದುಕೊಂಡಿದ್ದನು. ತನ್ನ ಕರುಣೆಯನ್ನು ಹೊಂದಿಕೊಳ್ಳುವ ಜನರಿಗೆ ದೇವರು ಆ ಮಹಿಮೆಯನ್ನು ಕೊಡಬೇಕೆಂದಿದ್ದನು. ತನ್ನ ಮಹಿಮೆಯನ್ನು ಹೊಂದಿಕೊಳ್ಳಲೆಂದು ದೇವರು ಆ ಜನರನ್ನು ಸಿದ್ಧಪಡಿಸಿದನು.


ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.


ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.


ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.


ಸಾತ್ವಿಕವೂ ಶಾಂತವೂ ಆದ ಆಂತರ್ಯವೇ ನಿಮ್ಮ ಸೌಂದರ್ಯವಾಗಿರಬೇಕು. ಆ ಸೌಂದರ್ಯ ನಶಿಸಿಹೋಗುವುದಿಲ್ಲ. ಅದು ದೇವರಿಗೆ ಬಹು ಅಮೂಲ್ಯವಾದದ್ದು.


ದೇವರು ತನ್ನ ಮಹಾತಿಶಯವಾದ ಕೃಪೆಯನ್ನು ಮುಂದಿನ ಕಾಲದಲ್ಲೆಲ್ಲಾ ತೋರಿಸಬೇಕೆಂದು ಹೀಗೆ ಮಾಡಿದ್ದಾನೆ. ದೇವರು ಈ ಕೃಪೆಯನ್ನು ತನ್ನ ಕರುಣೆಯ ಮೂಲಕ ನಮಗೆ ಕ್ರಿಸ್ತ ಯೇಸುವಿನಲ್ಲಿ ತೋರಿಸುತ್ತಾನೆ.


ಅಂತರಂಗದಲ್ಲಿ ಯೆಹೂದ್ಯನಾಗಿರುವವನು ಮಾತ್ರ ನಿಜವಾದ ಯೆಹೂದ್ಯನು. ಹೃದಯದಲ್ಲಿ ಆದ ಸುನ್ನತಿಯೇ ನಿಜವಾದ ಸುನ್ನತಿ. ಈ ಸುನ್ನತಿಯಾದದ್ದು ಪವಿತ್ರಾತ್ಮನಿಂದಲೇ ಹೊರತು ಲಿಖಿತ ಧರ್ಮಶಾಸ್ತ್ರದಿಂದಲ್ಲ. ಪವಿತ್ರಾತ್ಮನಿಂದ ಹೃದಯದಲ್ಲಿ ಸುನ್ನತಿ ಹೊಂದಿರುವ ವ್ಯಕ್ತಿಯು ಹೊಗಳಿಕೆಯನ್ನು ಪಡೆಯುವುದು ದೇವರಿಂದಲೇ ಹೊರತು ಮನುಷ್ಯರಿಂದಲ್ಲ.


ದೇವರು ತನ್ನ ಮಹಾಶಕ್ತಿಯನ್ನು ನನಗೆ ವಿರೋಧವಾಗಿ ಬಳಸುವನೇ? ಇಲ್ಲ, ಆತನು ನನಗೆ ಕಿವಿಗೊಡುವನು!


ಭೂಪರಲೋಕಗಳಲ್ಲಿರುವ ಪ್ರತಿಯೊಂದು ಕುಟುಂಬವು ಆತನಿಂದ ತನ್ನ ನಿಜ ಹೆಸರನ್ನು ಪಡೆದುಕೊಳ್ಳುತ್ತದೆ.


ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು