Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:17 - ಪರಿಶುದ್ದ ಬೈಬಲ್‌

17 ನಿಮ್ಮ ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಬೇಕೆಂದು ಪ್ರಾರ್ಥಿಸುತ್ತೇನೆ. ನಿಮ್ಮ ಜೀವಿತವು ಪ್ರೀತಿಯಲ್ಲಿ ಬಲವಾಗಿ ಬೇರೂರಿರಬೇಕೆಂದು ಮತ್ತು ಪ್ರೀತಿಯ ಮೇಲೆ ಕಟ್ಟಲ್ಪಟ್ಟಿರಬೇಕೆಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವ ಹಾಗೆಯೂ ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅನಿ ವಿಶ್ವಾಸಾಚ್ಯಾ ವೈನಾ ಕ್ರಿಸ್ತ್ ತುಮ್ಚ್ಯಾ ಮನಾಕ್ನಿ ಅಪ್ನಾಚೆ ಘರ್ ಕರುನ್ಗೆಂವ್ದಿತ್ ಮನುನ್ ಮಾಗ್ತಾ ಅನಿ ತುಮ್ಚೆ ಮುಳಾ ಅನಿ ಪಾಯಾ ಪ್ರೆಮಾ ವೈರ್ ಭಾಂದಲಿ ಹೊವ್ನ್ ರ್‍ಹಾಂವ್ದಿತ್ ಮನುನ್ ಮಾಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:17
24 ತಿಳಿವುಗಳ ಹೋಲಿಕೆ  

ಕ್ರಿಸ್ತನನ್ನು ಮಾತ್ರ ನೀವು ಅವಲಂಬಿಸಬೇಕು. ಜೀವವೂ ಶಕ್ತಿಯೂ ಆತನಿಂದಲೇ ಬರುತ್ತವೆ. ನಿಮಗೆ ಸತ್ಯವನ್ನು ಉಪದೇಶಿಸಲಾಗಿದೆ. ನೀವು ಆ ಸತ್ಯ ಬೋಧನೆಯಲ್ಲಿ ದೃಢವಾಗಿ ನೆಲೆಗೊಂಡಿರಬೇಕು ಮತ್ತು ದೇವರಿಗೆ ಸಲ್ಲತಕ್ಕ ಕೃತಜ್ಞತಾಸ್ತುತಿಯಿಂದ ತುಂಬಿದವರಾಗಿರಬೇಕು.


ಹೀಗಿರಲಾಗಿ ನಮ್ಮ ಮೇಲೆ ದೇವರಿಗಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ನಾವು ಆ ಪ್ರೀತಿಯಲ್ಲಿ ಭರವಸವಿಟ್ಟಿದ್ದೇವೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿದ್ದಾನೆ.


ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು.


ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.


ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.


ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.


ದೇವರ ಆಲಯವು ವಿಗ್ರಹಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವೇ? ನಾವು ಜೀವಸ್ವರೂಪನಾದ ದೇವರ ಆಲಯವಾಗಿದ್ದೇವೆ. ದೇವರು ಹೇಳಿದಂತೆ: “ನಾನು ಅವರೊಂದಿಗೆ ವಾಸಿಸುವೆನು; ಅವರೊಂದಿಗೆ ನಡೆಯುವೆನು; ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.”


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ನನ್ನ ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರು. ಆದ್ದರಿಂದ ನೀವು ಅವರನ್ನು (ಸುಳ್ಳುಬೋಧಕರು) ಸೋಲಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವಾತನು (ದೇವರು) ಈ ಲೋಕದ ಜನರಲ್ಲಿರುವವನಿಗಿಂತ (ಸೈತಾನ) ದೊಡ್ಡವನಾಗಿದ್ದಾನೆ.


ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.


ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.


ನಾನು ಅವರಲ್ಲಿ ಇರುವೆನು ಮತ್ತು ನೀನು ನನ್ನಲ್ಲಿರುವೆ. ಆದ್ದರಿಂದ ಅವರು ಸಂಪೂರ್ಣವಾಗಿ ಒಂದಾಗಿರುವರು. ನೀನೇ ನನ್ನನ್ನು ಕಳುಹಿಸಿರುವುದಾಗಿ ಮತ್ತು ನೀನು ನನ್ನನ್ನು ಪ್ರೀತಿಸಿದಂತೆಯೇ ಈ ಜನರನ್ನೂ ಪ್ರೀತಿಸಿರುವುದಾಗಿ ಈ ಲೋಕವು ಆಗ ತಿಳಿದುಕೊಳ್ಳುವುದು.


ಸತ್ಯದ ಆತ್ಮನೇ ಈ ಸಹಾಯಕನು. ಈ ಲೋಕವು ಆತನನ್ನು ಸ್ವೀಕರಿಸಿಕೊಳ್ಳಲಾರದು. ಏಕೆಂದರೆ ಲೋಕವು ಆತನನ್ನು ಕಾಣುವುದೂ ಇಲ್ಲ, ತಿಳಿದುಕೊಳ್ಳುವುದೂ ಇಲ್ಲ. ಆದರೆ ನೀವು ಆತನನ್ನು ಬಲ್ಲಿರಿ. ಆತನು ನಿಮ್ಮೊಂದಿಗೆ ಮತ್ತು ನಿಮ್ಮೊಳಗೆ ವಾಸಿಸುವವನಾಗಿದ್ದಾನೆ.


ಅವನು ಆಳವಾದ ಅಸ್ತಿವಾರ ಹಾಕಿ, ಬಲವಾದ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟುತ್ತಾನೆ. ಪ್ರವಾಹವು ಏರಿಬಂದು ಆ ಮನೆಗೆ ಅಪ್ಪಳಿಸಿದರೂ ಆ ಮನೆಯನ್ನು ಕದಲಿಸಲಾರದು; ಏಕೆಂದರೆ ಆ ಮನೆಯು ಬಲವಾಗಿ ಕಟ್ಟಲ್ಪಟ್ಟಿದೆ.


ಆದರೆ ಬಿಸಿಲೇರಿದಾಗ ಆ ಮೊಳಕೆಗಳು ಒಣಗಿಹೋದವು. ಏಕೆಂದರೆ ಅವುಗಳಿಗೆ ಆಳವಾದ ಬೇರಿರಲಿಲ್ಲ.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ವಾಸಿಸುತ್ತಾನೆ. ನಾನು ಅವನಲ್ಲಿ ವಾಸಿಸುತ್ತೇನೆ.


ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.


ನಾನು ಬೀಜವನ್ನು ಬಿತ್ತಿದೆನು; ಅಪೊಲ್ಲೋಸನು ನೀರನ್ನು ಹಾಕಿದನು. ಆದರೆ ಬೀಜವನ್ನು ಬೆಳೆಯಿಸಿದವನು ದೇವರೇ.


ನೀವು ನಂಬಿಕೆಯಲ್ಲಿ ಜೀವಿಸುತ್ತಿದ್ದೀರೋ ಎಂಬುದನ್ನು ತಿಳಿದುಕೊಳ್ಳಲು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ಕ್ರಿಸ್ತಯೇಸುವು ನಿಮ್ಮೊಳಗೆ ಇದ್ದಾನೆಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು