Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:2 - ಪರಿಶುದ್ದ ಬೈಬಲ್‌

2 ದೇವರು ತನ್ನ ಕೃಪೆಯ ಮೂಲಕ ನನಗೆ ಈ ಕೆಲಸವನ್ನು ಕೊಟ್ಟನೆಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ದೇವರು ಈ ಕೆಲಸವನ್ನು ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವರು ತಮ್ಮ ಕೃಪಾತಿಶಯದ ಬಗ್ಗೆ ಸಾರುವ ಹೊಣೆಯನ್ನು ನಿಮ್ಮ ಸಲುವಾಗಿ ನನಗೆ ಕೊಟ್ಟಿರುತ್ತಾರೆಂಬುದನ್ನು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ನಿಮಗೋಸ್ಕರ ನಿರ್ವಹಿಸುವದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕೆಲಸವನ್ನೂ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ದೈವಪ್ರಕಟನೆಯಿಂದ ನನಗೆ ತಿಳಿಸಲ್ಪಟ್ಟಿತೆಂಬದನ್ನೂ ನೀವು ಕೇಳಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮಗೋಸ್ಕರವಾಗಿ ನನಗೆ ಕೊಡಲಾದ ದೇವರ ಕೃಪೆಯ ಕಾರ್ಯಭಾರವನ್ನು ನೀವು ಕೇಳಿದ್ದೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮಿ ಖರೆಚ್ ಆಯ್ಕ್ಲ್ಯಾಸಿ ದೆವಾನ್ ಅಪ್ನಾಚ್ಯಾ ಕುರ್ಪೆನ್ ತುಮ್ಚ್ಯಾ ಬರ್‍ಯಾ ಸಾಟ್ನಿ ಹೆ ಕಾಮ್ ಮಾಕಾ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:2
27 ತಿಳಿವುಗಳ ಹೋಲಿಕೆ  

ಈ ಉಪದೇಶವು ಜನರಿಗೆ ತಿಳಿಸುವುದಕ್ಕಾಗಿ ದೇವರು ನನಗೆ ಕೊಟ್ಟ ಸುವಾರ್ತೆಯ ಒಂದು ಭಾಗವಾಗಿದೆ. ಭಾಗ್ಯವಂತನಾದ ದೇವರಿಂದಲೇ ಈ ಮಹಿಮೆಯ ಸುವಾರ್ತೆಯು ಬಂದಿತು.


ಆ ಸುವಾರ್ತೆಗೋಸ್ಕರ ನನ್ನನ್ನು ಪ್ರಚಾರಕನನ್ನಾಗಿಯೂ ಅಪೊಸ್ತಲನನ್ನಾಗಿಯೂ ಉಪದೇಶಕನನ್ನಾಗಿಯೂ ಆರಿಸಿಕೊಳ್ಳಲಾಯಿತು.


ದೇವರು ಕ್ರಿಸ್ತನ ಮೂಲಕವಾಗಿ ನನಗೆ ಅಪೊಸ್ತಲನೆಂಬ ವಿಶೇಷ ಕೆಲಸವನ್ನು ಕೊಟ್ಟನು. ದೇವರಲ್ಲಿ ನಂಬಿಕೆಯಿಡುವಂತೆಯೂ ದೇವರಿಗೆ ವಿಧೇಯರಾಗುವಂತೆಯೂ ಎಲ್ಲಾ ಜನಾಂಗಗಳ ಜನರನ್ನು ನಡೆಸಬೇಕೆಂದು ದೇವರು ನನಗೆ ಈ ಕೆಲಸವನ್ನು ಕೊಟ್ಟನು. ನಾನು ಈ ಕೆಲಸವನ್ನು ಕ್ರಿಸ್ತನಿಗಾಗಿ ಮಾಡುತ್ತೇನೆ.


ಕ್ರಿಸ್ತನು ನಮ್ಮಲ್ಲಿ ಪ್ರತಿಯೊಬ್ಬರಿಗೂ ವಿಶೇಷವಾದ ವರವನ್ನು ಕೊಟ್ಟಿದ್ದಾನೆ. ಪ್ರತಿಯೊಬ್ಬನು ಕ್ರಿಸ್ತನ ಇಷ್ಟಾನುಸಾರವಾಗಿ ವರವನ್ನು ಪಡೆದುಕೊಂಡಿದ್ದಾನೆ.


ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರು ತನ್ನ ರಹಸ್ಯವಾದ ಸತ್ಯಗಳನ್ನು ನಮಗೆ ವಹಿಸಿಕೊಟ್ಟಿದ್ದಾನೆಂತಲೂ ಎಣಿಸಬೇಕು.


ಕಾಲವು ಪರಿಪೂರ್ಣವಾದಾಗ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದುಗೂಡಿಸಿ ಆತನಿಗೆ ಅಧೀನ ಪಡಿಸಬೇಕೆಂಬುದೇ ದೇವರ ಯೋಜನೆಯಾಗಿತ್ತು.


ನನ್ನ ಹಿಂದಿನ ಜೀವಿತದ ಬಗ್ಗೆ ನೀವು ಕೇಳಿದ್ದೀರಿ. ನಾನು ಯೆಹೂದ್ಯಧರ್ಮಕ್ಕೆ ಸೇರಿದವನಾಗಿದ್ದೆನು. ದೇವರ ಸಭೆಯನ್ನು ಬಹಳವಾಗಿ ಹಿಂಸಿಸಿದೆನು. ಕ್ರೈಸ್ತ ಸಭೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದೆನು.


“ಆದರೆ ಯೇಸು ನನಗೆ, ‘ಈಗ ಹೊರಡು, ಬಹುದೂರದಲ್ಲಿರುವ ಯೆಹೂದ್ಯರಲ್ಲದ ಜನರ ಬಳಿಗೆ ನಾನು ನಿನ್ನನ್ನು ಕಳುಹಿಸುವೆನು’ ಎಂದು ಹೇಳಿದನು.”


ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!


ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು.


ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.


ಆದ ಕಾರಣವೇ ಸುವಾರ್ತೆಯನ್ನು ಸಾರುವುದಕ್ಕಾಗಿಯೂ ಅಪೊಸ್ತಲನಾಗುವುದಕ್ಕಾಗಿಯೂ ಯೆಹೂದ್ಯರಲ್ಲದ ಜನರಿಗೆ ಬೋಧಿಸುವುದಕ್ಕಾಗಿಯೂ ನನ್ನನ್ನು ಆರಿಸಿಕೊಳ್ಳಲಾಯಿತು. (ಇದು ಸತ್ಯ, ಖಂಡಿತವಾಗಿಯೂ ಸುಳ್ಳಲ್ಲ.) ಸತ್ಯವನ್ನು ತಿಳಿದುಕೊಳ್ಳಬೇಕೆಂತಲೂ ನಂಬಬೇಕೆಂತಲೂ ನಾನು ಅವರಿಗೆ ಬೋಧಿಸುತ್ತೇನೆ.


ಕಲ್ಪನಾಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಗಮನಕೊಡಬಾರದೆಂದು ಅವರಿಗೆ ಆಜ್ಞಾಪಿಸು. ಆ ಸಂಗತಿಗಳು ವಾದವಿವಾದಗಳನ್ನು ಮಾತ್ರ ತರುತ್ತವೆ. ಅವುಗಳಿಂದ ದೇವರ ಕಾರ್ಯಕ್ಕೆ ಪ್ರಯೋಜನವೇನೂ ಇಲ್ಲ. ದೇವರ ಕಾರ್ಯವನ್ನು ನಂಬಿಕೆಯಿಂದ ಮಾಡಬೇಕು.


ನಾವು ದೇವರಿಗೆ ಸ್ತೋತ್ರ ಮಾಡಲು ಕಾರಣವೇನೆಂದರೆ ಕ್ರಿಸ್ತ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ, ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದ್ದೇವೆ.


ನೀವು ಆತನ ವಿಷಯವಾಗಿ ಕೇಳಿದ್ದೀರೆಂಬುದು ನನಗೆ ಗೊತ್ತಿದೆ. ನೀವು ಆತನಲ್ಲಿರುವುದರಿಂದ ಸತ್ಯವನ್ನು ಕಲಿತುಕೊಂಡಿರಿ. ಹೌದು, ಸತ್ಯವು ಯೇಸುವಿನಲ್ಲಿದೆ.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.


ಈಗ ನಾನು ಯೆಹೂದ್ಯರಲ್ಲದ ಜನರೊಂದಿಗೆ ಮಾತಾಡುತ್ತಿದ್ದೇನೆ. ನಾನು ಅವರಿಗೆ ಅಪೊಸ್ತಲನಾಗಿದ್ದೇನೆ. ಆದ್ದರಿಂದ ನಾನು ಈ ಕೆಲಸವನ್ನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿಯೇ ಮಾಡುತ್ತೇನೆ.


ದೇವರು ನೀಡಿದ ವಿಶೇಷವಾದ ಕೃಪಾವರದಿಂದ ನಾನು ಸುವಾರ್ತೆಯನ್ನು ತಿಳಿಸಲು ಸೇವಕನಾದೆನು. ದೇವರು ತನ್ನ ಶಕ್ತಿಯನ್ನು ಪ್ರಯೋಗಿಸಿ ನನಗೆ ಆ ಕೃಪಾವರವನ್ನು ಕೊಟ್ಟನು.


ರಹಸ್ಯವಾಗಿದ್ದ ತನ್ನ ಯೋಜನೆಯನ್ನು ಜನರೆಲ್ಲರಿಗೆ ತಿಳಿಸಬೇಕೆಂಬ ಕೆಲಸವನ್ನು ದೇವರು ನನಗೆ ಕೊಟ್ಟನು. ಆದಿಯಿಂದಲೂ ಅದು ದೇವರಲ್ಲಿ ಮರೆಯಾಗಿತ್ತು. ಪ್ರತಿಯೊಂದನ್ನೂ ಸೃಷ್ಟಿಸಿದಾತನು ದೇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು