Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:11 - ಪರಿಶುದ್ದ ಬೈಬಲ್‌

11 ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಉಪದೇಶಕರನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸೌವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕ್ರಿಸ್ತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಕೆಲವರನ್ನು ಉಪದೇಶಿಗಳನ್ನಾಗಿಯೂ ಸಭೆಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದೆನೆ ದಿತಲೊ ತೊಚ್ ತೊ ಉಲ್ಲ್ಯಾಕ್ನಿ ಅಪೊಸ್ತಲಾ, ಅನಿ ಉಲ್ಲ್ಯಾಕ್ನಿ ಪ್ರವಾದಿ, ಅನಿ ಉಲ್ಲ್ಯಾಕ್ನಿ ಬರಿ ಖಬರ್ ಸಾಂಗ್ತಲೆ ಅನಿ ಉಲ್ಲ್ಯಾಕ್ನಿ ತಾಂಡ್ಯಾಚಿ ಮುಖಂಡಾ ಅನಿ ಶಿಕ್ವುತಲೆ ಕರುನ್ ಎಚುನ್ ಕಾಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:11
19 ತಿಳಿವುಗಳ ಹೋಲಿಕೆ  

ನಿಮಗೆ ಹೊಸ ಪಾಲಕರನ್ನು ನೇಮಿಸುವೆನು. ಆ ಪಾಲಕರು ನನಗೆ ನಂಬಿಗಸ್ತರಾಗಿರುತ್ತಾರೆ. ಅವರು ಬುದ್ಧಿ ಮತ್ತು ಜ್ಞಾನಗಳಿಂದ ನಿಮಗೆ ಮಾರ್ಗದರ್ಶನ ಮಾಡುತ್ತಾರೆ.


ವಿಶ್ವಾಸಿಗಳಾದ ನೀವು ದೇವರ ಸ್ವಂತ ಕಟ್ಟಡವಾಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ಆ ಕಟ್ಟಡವು ಕಟ್ಟಲ್ಪಟ್ಟಿದೆ. ಕ್ರಿಸ್ತನೇ ಆ ಕಟ್ಟಡಕ್ಕೆ ಮೂಲೆಗಲ್ಲಾಗಿದ್ದಾನೆ.


ಆದರೆ ನೀನು ಎಲ್ಲಾ ಕಾಲದಲ್ಲಿಯೂ ಸ್ವಸ್ಥಚಿತ್ತನಾಗಿರು. ತೊಂದರೆಗಳು ಬಂದಾಗ ಸಹಿಸಿಕೊ. ಸುವಾರ್ತೆಯನ್ನು ಪ್ರಚಾರಮಾಡು. ದೇವರ ಸೇವಕನಿಗೆ ಯೋಗ್ಯವಾದ ಎಲ್ಲಾ ಕಾರ್ಯಗಳನ್ನು ಮಾಡುತ್ತಿರು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.


ಆದಕಾರಣವೇ ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆದಿದೆ: “ಆತನು ಆಕಾಶದ ಉನ್ನತಸ್ಥಾನಕ್ಕೆ ಏರಿಹೋದಾಗ, ಶತ್ರುಗಳನ್ನು ಸೆರೆಯಾಳುಗಳಾಗಿ ಕೊಂಡೊಯ್ದು ಜನರಿಗೆ ದಾನಗಳನ್ನು ಮಾಡಿದನು.”


ಹಿಂದಿನ ಕಾಲಗಳಲ್ಲಿದ್ದ ಜನರಿಗೆ ಆ ರಹಸ್ಯಸತ್ಯವನ್ನು ಆತನು ತಿಳಿಸಲಿಲ್ಲ. ಈಗಲಾದರೊ ದೇವರು ತನ್ನ ಆತ್ಮನ ಮೂಲಕವಾಗಿ ಆ ರಹಸ್ಯಸತ್ಯವನ್ನು ತನ್ನ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ತೋರಿಸಿದ್ದಾನೆ.


ಸೇವೆಮಾಡುವ ವರವನ್ನು ಹೊಂದಿರುವವನು ಸೇವೆಮಾಡಬೇಕು.


ಬಹಳಕಾಲದ ತನಕ ಇಸ್ರೇಲರಲ್ಲಿ ನಿಜವಾದ ದೇವರಿರಲಿಲ್ಲ; ಬೋಧಕನಿರಲಿಲ್ಲ; ಧರ್ಮಶಾಸ್ತ್ರವೂ ಇರಲಿಲ್ಲ.


ನಿಮಗೆ ಕಾಲವು ಬೇಕಾದಷ್ಟಿದ್ದುದರಿಂದ ಈಗಾಗಲೇ ನೀವು ಉಪದೇಶಕರಾಗಿರಬೇಕಿತ್ತು. (ಆದರೆ ನೀವಿನ್ನೂ ಆಗಿಲ್ಲ.) ಹೀಗಿರಲು ದೇವರ ಉಪದೇಶಗಳನ್ನು ಮೊದಲ ಪಾಠದಿಂದ ಮತ್ತೆ ಉಪದೇಶಿಸಲು ನಿಮಗೆ ಮತ್ತೊಬ್ಬ ವ್ಯಕ್ತಿಯ ಅಗತ್ಯವಿದೆ. ಹಾಲಿನಂತಿರುವ ಉಪದೇಶವನ್ನು ನಾವು ನಿಮಗೆ ಮಾಡಬೇಕಾಗಿದೆ. ನೀವು ಗಟ್ಟಿ ಆಹಾರವನ್ನು ತಿನ್ನುವವರಾಗಿಲ್ಲ.


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


ಮರುದಿನ ನಾವು ಪ್ಟೊಲೊಮಾಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಹೋದೆವು. ಅಲ್ಲಿ ನಾವು ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ತಂಗಿದೆವು. ಸುವಾರ್ತೆಯನ್ನು ತಿಳಿಸುವುದೇ ಫಿಲಿಪ್ಪನ ಕೆಲಸವಾಗಿತ್ತು. ಏಳುಮಂದಿ ಸಹಾಯಕರುಗಳಲ್ಲಿ ಅವನೂ ಒಬ್ಬನಾಗಿದ್ದನು.


ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.


ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.


ಪ್ರಿಯ ಸ್ನೇಹಿತರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಪೊಸ್ತಲರು ಮುಂಚೆ ಏನು ಹೇಳಿದರೆಂಬುದನ್ನು ನೆನಪು ಮಾಡಿಕೊಳ್ಳಿ.


ಅನೇಕ ರೀತಿಯ ಆತ್ಮಿಕ ವರಗಳಿವೆ. ಆದರೆ ಅವುಗಳೆಲ್ಲ ಒಬ್ಬನೇ ಆತ್ಮನಿಂದ ಬಂದಂಥವುಗಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು