Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:2 - ಪರಿಶುದ್ದ ಬೈಬಲ್‌

2 ಯಾವಾಗಲೂ ದೀನತೆಯಿಂದ, ಸಾತ್ವಿಕತೆಯಿಂದ ಮತ್ತು ತಾಳ್ಮೆಯಿಂದ ಕೂಡಿದವರಾಗಿದ್ದು ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಪೂರ್ಣ ವಿನಯ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ಸಂಪೂರ್ಣ ದೀನತ್ವದಿಂದಲೂ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮಿ ಕನ್ನಾಬಿ ಖಾಲ್ತಿ ಹೊವ್ನ್ ಸಾದೆ ಅನಿ ಸೊಸುನ್ ಘೆವ್ನ್ ರಾತಲೆ ಹೊವಾ ಅನಿ ಎಕಾಮೆಕಾಕ್ ಪ್ರೆಮಾನ್ ಸಂಬಾಳುನ್ಗೆವ್ನ್ ಜಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:2
28 ತಿಳಿವುಗಳ ಹೋಲಿಕೆ  

ಪ್ರೀತಿಯು ಎಲ್ಲವನ್ನು ತಾಳ್ಮೆಯಿಂದ ಸ್ವೀಕರಿಸಿಕೊಳ್ಳುತ್ತದೆ; ಯಾವಾಗಲೂ ನಂಬುತ್ತದೆ; ಯಾವಾಗಲೂ ನಿರೀಕ್ಷಿಸುತ್ತದೆ; ಯಾವಾಗಲೂ ದೃಢವಾಗಿರುತ್ತದೆ.


ಆದ್ದರಿಂದ ನಂಬಿಕೆಯಲ್ಲಿ ಬಲಹೀನವಾಗಿರುವವರ ಬಲಹೀನತೆಗಳನ್ನು ನಾವು ಸಹಿಸಿಕೊಳ್ಳಬೇಕು. ನಾವು ಕೇವಲ ನಮ್ಮ ಹಿತವನ್ನು ಮಾತ್ರ ನೋಡಿಕೊಳ್ಳಬಾರದು.


ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು.


ಯಾರು ಗರ್ವದಿಂದ ಬೇರೆಯವರನ್ನು ಗೇಲಿಮಾಡುತ್ತಾರೋ ಅವರನ್ನು ಯೆಹೋವನೂ ಗೇಲಿಮಾಡುತ್ತಾನೆ. ದೀನರಿಗಾದರೋ ಆತನ ಕರುಣೆ ದೊರೆಯುವುದು.


(ಮೋಶೆಯು ಬಹಳ ದೀನನಾದ ವ್ಯಕ್ತಿ. ಅವನು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ದೀನನಾಗಿದ್ದನು.)


ಯೆಹೋವನೇ ಮಹೋನ್ನತನು. ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ.


ನಿಮ್ಮ ಹೃದಯಗಳಲ್ಲಿ ಕ್ರಿಸ್ತನೇ ಪ್ರಭುವಾಗಿರಲಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ನಿಮ್ಮನ್ನು ಕೇಳುವ ಪ್ರತಿಯೊಬ್ಬರಿಗೂ ಉತ್ತರ ಹೇಳಲು ಯಾವಾಗಲೂ ಸಿದ್ಧವಾಗಿರಿ.


ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.


ನಿಮ್ಮ ಭಾರವಾದ ಹೊರೆಗಳನ್ನು ಹೊರಲು ಒಬ್ಬರಿಗೊಬ್ಬರು ಸಹಾಯಮಾಡಿರಿ. ಹೀಗೆ ನೀವು ಕ್ರಿಸ್ತನ ಆಜ್ಞೆಯನ್ನು ನಿಜವಾಗಿಯೂ ಅನುಸರಿಸಿರಿ.


ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡನು. ತನ್ನ ಸನ್ನಿಧಿಯಲ್ಲಿ ನಾವು ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂಬುದು ಆತನ ಉದ್ದೇಶವಾಗಿತ್ತು.


ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು.


ಯೆಹೂದ್ಯರು ನನಗೆ ವಿರೋಧವಾಗಿ ಮಾಡಿದ ಒಳಸಂಚುಗಳಿಂದ ನಾನು ಬಹಳ ಕಷ್ಟಪಡಬೇಕಾಯಿತು. ಅನೇಕ ಸಲ ಕಣ್ಣೀರಿಡಬೇಕಾಯಿತು. ಆದರೆ ನಾನು ಯಾವಾಗಲೂ ಪ್ರಭುವಿನ ಸೇವೆ ಮಾಡಿದೆನೆಂಬುದು ನಿಮಗೆ ಗೊತ್ತಿದೆ. ನಾನು ನನ್ನ ಬಗ್ಗೆ ಚಿಂತಿಸದೆ,


ಗರ್ವಿಷ್ಠರೊಡನೆ ಐಶ್ವರ್ಯವನ್ನು ಹಂಚಿಕೊಳ್ಳುವದಕ್ಕಿಂತ ದೀನರಾಗಿದ್ದು ಬಡಜನರೊಡನೆ ವಾಸಿಸುವುದೇ ಉತ್ತಮ.


ಯೇಸು, “ವಿಶ್ವಾಸವಿಲ್ಲದ ಸಂತಾನವೇ, ನಾನು ನಿಮ್ಮೊಡನೆ ಇನ್ನೆಷ್ಟು ಕಾಲ ಇರಲಿ? ಇನ್ನೆಷ್ಟು ಕಾಲ ಸಹಿಸಿಕೊಳ್ಳಲಿ? ಆ ಹುಡುಗನನ್ನು ನನ್ನ ಬಳಿಗೆ ತನ್ನಿರಿ!” ಎಂದು ಉತ್ತರಿಸಿದನು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ನೀನು ವೈಭವಯುತವಾಗಿ ಕಾಣುತ್ತಿರುವೆ! ಒಳ್ಳೆಯದಕ್ಕಾಗಿಯೂ ನ್ಯಾಯಕ್ಕಾಗಿಯೂ ಹೋರಾಡಿ ಗೆಲ್ಲು. ಶಕ್ತಿಯುತವಾದ ನಿನ್ನ ಬಲತೋಳಿನಿಂದ ಮಹತ್ಕಾರ್ಯಗಳನ್ನು ಮಾಡು.


ಆದ್ದರಿಂದ ಎಲ್ಲಾ ನೀಚತನವನ್ನೂ ದುಷ್ಟತನವನ್ನೂ ನಿಮ್ಮ ಜೀವನದಿಂದ ದೂರತಳ್ಳಿರಿ. ನಿಮ್ಮ ಹೃದಯದಲ್ಲಿ ಬೇರೂರಿರುವ ದೇವರ ವಾಕ್ಯವನ್ನು ದೀನತೆಯಿಂದ ಒಪ್ಪಿಕೊಳ್ಳಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುತ್ತದೆ.


ಆರಂಭಿಸುವ ಸಮಯಕ್ಕಿಂತಲೂ ಪೂರ್ಣಗೊಳಿಸುವ ಸಮಯವೇ ಮೇಲು. ಗರ್ವಕ್ಕಿಂತಲೂ ತಾಳ್ಮೆಯೇ ಉತ್ತಮ.


ಆತನ ಮಹಿಮಾಶಕ್ತಿಯಿಂದ ಪರಿಪೂರ್ಣ ಬಲ ಹೊಂದಿ ಆನಂದಪೂರ್ವಕವಾದ ತಾಳ್ಮೆಯನ್ನು, ದೀರ್ಘಶಾಂತಿಯನ್ನು ಯಾವಾಗಲೂ ತೋರಿಸುವವರಾಗಿರಬೇಕೆಂತಲೂ ನಾವು ಪ್ರಾರ್ಥಿಸುತ್ತಿದ್ದೇವೆ.


ಆದ್ದರಿಂದ ನೀವೆಲ್ಲರೂ ಒಟ್ಟಾಗಿ ಶಾಂತಿಯಿಂದ ಬಾಳಿರಿ; ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರಿ. ಒಬ್ಬರನ್ನೊಬ್ಬರು ಸಹೋದರರಂತೆ ಪ್ರೀತಿಸಿರಿ. ದಯೆ ತೋರುವವರೂ ಮತ್ತು ದೀನತೆ ಉಳ್ಳವರೂ ಆಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು