Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:25 - ಪರಿಶುದ್ದ ಬೈಬಲ್‌

25 ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದಕಾರಣ ಸುಳ್ಳಾಡುವದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆ ಹೊವ್ನ್, ತುಮಿ ಝುಟೆ ಸಾಂಗಿನಸ್ತಾನಾ ಎಕಾಮೆಕಾಕ್ ಕನ್ನಾಬಿ ಖರೆಚ್ ಬೊಲುನ್ಗೆತ್ ರಾವಾ, ಕಶ್ಯಾಕ್ ಮಟ್ಲ್ಯಾರ್ ಅಮಿ ಸಗ್ಳ್ಯೆಬಿ ಎಕುಚ್ ಆಂಗಾಚಿ ಭಾಗಾ ಹೊವ್ನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:25
42 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ ನೀವು ನಿಮ್ಮ ಹಳೆಯ ಪಾಪಪೂರಿತ ಜೀವನವನ್ನು ಮತ್ತು ನಿಮ್ಮ ಮೊದಲಿನ ಕಾರ್ಯಗಳನ್ನು ಬಿಟ್ಟುಬಿಟ್ಟಿದ್ದೀರಿ.


ಆದರೆ ನೀವು ಮಾಡಬೇಕಾದದ್ದೇನೆಂದರೆ, ನಿಮ್ಮ ನೆರೆಯವರ ಸಂಗಡ ಸತ್ಯವನ್ನೇ ಆಡಿರಿ. ನಿಮ್ಮ ನಗರಗಳಲ್ಲಿ ಯಾವುದೇ ತೀರ್ಮಾನಗಳನ್ನು ಮಾಡುವುದಾಗಿದ್ದರೂ ಅವು ನ್ಯಾಯವಾದವುಗಳಾಗಿಯೂ ಸತ್ಯವಾದವುಗಳಾಗಿಯೂ ಸಮಾಧಾನವನ್ನು ತರುವಂಥವುಗಳಾಗಿಯೂ ಇರಲಿ.


ಸುಳ್ಳುಗಾರರು ಯೆಹೋವನಿಗೆ ಅಸಹ್ಯ. ಆದರೆ ಸತ್ಯವಂತರು ಆತನಿಗೆ ಇಷ್ಟಕರ.


ಹೀಗೆ ನಮ್ಮಲ್ಲಿ ಅನೇಕರಿದ್ದರೂ ಕ್ರಿಸ್ತನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ನಾವು ಆ ದೇಹದ ಅಂಗಗಳಾಗಿದ್ದೇವೆ. ಆ ದೇಹದ ಪ್ರತಿಯೊಂದು ಅಂಗವು ಇತರ ಅಂಗಗಳಿಗೂ ಸೇರಿಕೊಂಡಿದೆ.


ನಾವಾದರೊ ಸತ್ಯವನ್ನು ಪ್ರೀತಿಯಿಂದ ಹೇಳಬೇಕು; ಎಲ್ಲಾ ವಿಷಯಗಳಲ್ಲಿಯೂ ಬೆಳೆದು ಕ್ರಿಸ್ತನಂತಾಗಲು ಪ್ರಯತ್ನಿಸಬೇಕು. ಕ್ರಿಸ್ತನು ಶಿರಸ್ಸಾಗಿದ್ದಾನೆ ಮತ್ತು ನಾವು ದೇಹವಾಗಿದ್ದೇವೆ.


ಸತ್ಯಸಾಕ್ಷಿಯು ನ್ಯಾಯವನ್ನು ಪ್ರತಿಪಾದಿಸುವನು. ಆದರೆ ಸುಳ್ಳುಸಾಕ್ಷಿಯು ಅನ್ಯಾಯವನ್ನು ಪ್ರಕಟಿಸುವನು.


ನನ್ನ ಮಾತುಗಳು ಸತ್ಯ. ನನ್ನ ತುಟಿಗಳಿಗೆ ದುಷ್ಟತನ ಅಸಹ್ಯ.


ಸುಳ್ಳುತುಟಿಗಳು ಕ್ಷಣಿಕ. ಆದರೆ ಸತ್ಯವು ಶಾಶ್ವತ.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.


ಆ ಬೋಧನೆಗಳು ಸುಳ್ಳು ಹೇಳುವ ಮತ್ತು ವಂಚಿಸುವ ಜನರ ಮೂಲಕ ಬರುತ್ತವೆ. ಅವರು ಸರಿತಪ್ಪುಗಳ ಭೇದವನ್ನು ಗುರುತಿಸುವುದಿಲ್ಲ. ಕಾದ ಕಬ್ಬಿಣದಿಂದ ಸುಟ್ಟು ಬೂದಿಯಾಗುವಂತೆ ಅವರ ವಿವೇಕವು ನಾಶಗೊಂಡಿದೆ.


“ನೀವು ಕದಿಯಬಾರದು; ಮೋಸಮಾಡಬಾರದು; ಒಬ್ಬರಿಗೊಬ್ಬರು ಸುಳ್ಳಾಡಬಾರದು.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ.


ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದೆನು. ಅದು ಸಮರ್ಪಕವೆಂದು ನೀವು ನಿರೂಪಿಸಿದಿರಿ. ನಾವು ನಿಮಗೆ ಹೇಳಿದ ಪ್ರತಿಯೊಂದೂ ಸತ್ಯವಾಗಿತ್ತು. ನಾವು ತೀತನ ಮುಂದೆ ನಿಮ್ಮ ವಿಷಯದಲ್ಲಿ ಹೇಳಿದ ಹೊಗಳಿಕೆಯ ಮಾತುಗಳೆಲ್ಲಾ ಸತ್ಯವೆಂದು ನೀವು ನಿರೂಪಿಸಿದಿರಿ.


ಅವರ ಪ್ರವಾದಿಗಳಲ್ಲಿ ಒಬ್ಬನು, “ಕ್ರೇತದ ಜನರು ಯಾವಾಗಲೂ ಸುಳ್ಳು ಹೇಳುತ್ತಾರೆ. ಅವರು ದುಷ್ಟ ಮೃಗಗಳಾಗಿದ್ದಾರೆ; ಸೋಮಾರಿತನದಿಂದ ಕೆಲಸವನ್ನೇ ಮಾಡದೆ ಹೊಟ್ಟೆಬಾಕರಾಗಿದ್ದಾರೆ” ಎಂದು ಹೇಳಿದ್ದಾನೆ.


ರೊಟ್ಟಿಯು ಒಂದೇ. ಆದ್ದರಿಂದ ನಮ್ಮಲ್ಲಿ ಅನೇಕರಿದ್ದರೂ ನಾವು ಒಂದೇ ದೇಹವಾಗಿದ್ದೇವೆ. ಯಾಕೆಂದರೆ ನಾವೆಲ್ಲಾ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಳ್ಳುತ್ತೇವೆ.


ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.


ಆತನು ಹೇಳುವುದೇನೆಂದರೆ, “ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳಿನಲ್ಲಿ ನೀವು ದುಃಖದಿಂದ ಉಪವಾಸ ಮಾಡುವ ವಿಶೇಷ ದಿವಸಗಳಿವೆ. ಆ ದುಃಖದ ದಿವಸಗಳು ನಿಮ್ಮ ಸಂತಸದ ದಿವಸಗಳಾಗಿ ಪರಿಗಣಿಸಬೇಕು. ನೀವು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸುವವರಾಗಬೇಕು.”


ಜನರು ಆಣೆ ಇಟ್ಟುಕೊಳ್ಳುತ್ತಾರೆ, ಸುಳ್ಳನ್ನಾಡುತ್ತಾರೆ, ಕೊಲೆ ಮಾಡುತ್ತಾರೆ ಮತ್ತು ಸೂರೆ ಮಾಡುತ್ತಾರೆ. ಅವರು ವ್ಯಭಿಚಾರವೆಂಬ ಪಾಪಗಳನ್ನು ಮಾಡುತ್ತಾರೆ. ಆದ್ದರಿಂದ ಅವರು ಮಕ್ಕಳನ್ನು ಹುಟ್ಟಿಸುತ್ತಾರೆ. ಜನರು ತಿರುಗಿತಿರುಗಿ ಕೊಲೆ ಮಾಡುತ್ತಾರೆ.


ಯೆಹೋವನು ಹೇಳಿದ್ದೇನೆಂದರೆ: “ಇವರೇ ನನ್ನ ಜನರು. ಇವರೆಲ್ಲಾ ನನ್ನ ಸ್ವಂತ ಮಕ್ಕಳು.” ಆದ್ದರಿಂದ ಯೆಹೋವನು ಅವರನ್ನು ರಕ್ಷಿಸಿದ್ದಾನೆ.


ತಲೆ ಅಂದರೆ ಹಿರಿಯರು ಮತ್ತು ಪ್ರಮುಖರು. ಬಾಲವೆಂದರೆ ಸುಳ್ಳುಪ್ರವಾದಿಗಳು.


ನೀನು ಮೋಸದಿಂದ ಐಶ್ವರ್ಯವಂತನಾದರೆ, ಆ ಐಶ್ವರ್ಯವು ಬಹುಬೇಗನೆ ಇಲ್ಲವಾಗುತ್ತದೆ. ನಿನ್ನ ಐಶ್ವರ್ಯವು ನಿನ್ನನ್ನು ಮರಣಕ್ಕೆ ನಡೆಸುತ್ತದೆ.


ಗರ್ವದ ಕಣ್ಣು, ಸುಳ್ಳಾಡುವ ನಾಲಿಗೆ, ನಿರಪರಾಧಿಗಳನ್ನು ಕೊಲ್ಲುವ ಕೈ.


ಮೋಸಮಾರ್ಗದಲ್ಲಿ ಜೀವಿಸಲು ನನ್ನನ್ನು ಬಿಡಬೇಡ. ನಿನ್ನ ಉಪದೇಶಗಳಿಂದ ಮಾರ್ಗದರ್ಶನ ಮಾಡು.


ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು ಪ್ರೀತಿಸುವೆ. ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ.


ಏಕೆಂದರೆ ನಾವು ಆತನ ದೇಹದ ಅಂಗಗಳಾಗಿದ್ದೇವೆ.


ಆಗ ಆ ಪ್ರವಾದಿಯು, “ಆದರೆ ನಾನೂ ನಿನ್ನಂತೆಯೇ ಒಬ್ಬ ಪ್ರವಾದಿ” ಎಂದು ಹೇಳಿದನು. ನಂತರ ವಯಸ್ಸಾದ ಪ್ರವಾದಿಯು ಅವನಿಗೆ “ಯೆಹೋವನಿಂದ ಒಬ್ಬ ದೇವದೂತನು ನನ್ನ ಬಳಿಗೆ ಬಂದಿದ್ದನು. ಆ ದೂತನು ನಿನ್ನನ್ನು ನನ್ನ ಮನೆಗೆ ಕರೆತರಲು ನಿನ್ನೊಂದಿಗೆ ಅನ್ನಪಾನಗಳನ್ನು ತೆಗೆದುಕೊಳ್ಳಲು ನನಗೆ ತಿಳಿಸಿದನು” ಎಂದು ಸುಳ್ಳು ಹೇಳಿದನು.


“ನೀವು ಮೋಸದ ಕಾರ್ಯಕ್ಕೆ ದೂರವಿರಬೇಕು. ನಿರಪರಾಧಿಯೂ ನೀತಿವಂತನೂ ಆಗಿರುವ ವ್ಯಕ್ತಿಗೆ ಮರಣದಂಡನೆ ವಿಧಿಸಕೂಡದು. ಅಂಥ ದುಷ್ಟಕಾರ್ಯ ಮಾಡಿದವನಿಗೆ ನಾನು ದಂಡನೆಯನ್ನು ವಿಧಿಸೇ ವಿಧಿಸುವೆನು.


ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಹೃದಯದಿಂದ ಸತ್ಯವನ್ನು ಮಾತಾಡುವವನೂ ಆಗಿರಬೇಕು.


ಬೇರೊಬ್ಬನ ವಿರೋಧವಾಗಿ ಸಕಾರಣವಿಲ್ಲದೆ ಸಾಕ್ಷಿ ಹೇಳಬೇಡ, ಸುಳ್ಳನ್ನೂ ಹೇಳಬೇಡ.


ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ.


ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.


ಈಗಲಾದರೋ ಕೋಪ, ಕ್ರೋಧ, ಮತ್ಸರ, ಚುಚ್ಚು ಮಾತು ಮತ್ತು ದುರ್ಭಾಷೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ.


ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.


ಆದ್ದರಿಂದ ಎಲ್ಲಾ ನೀಚತನವನ್ನೂ ದುಷ್ಟತನವನ್ನೂ ನಿಮ್ಮ ಜೀವನದಿಂದ ದೂರತಳ್ಳಿರಿ. ನಿಮ್ಮ ಹೃದಯದಲ್ಲಿ ಬೇರೂರಿರುವ ದೇವರ ವಾಕ್ಯವನ್ನು ದೀನತೆಯಿಂದ ಒಪ್ಪಿಕೊಳ್ಳಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುತ್ತದೆ.


ಆದ್ದರಿಂದ ಇತರ ಜನರಿಗೆ ಕೇಡುಮಾಡಬೇಡಿ, ಸುಳ್ಳಾಡದಿರಿ, ಜನರನ್ನು ಮೋಸಗೊಳಿಸಬೇಡಿ, ಹೊಟ್ಟೆಕಿಚ್ಚುಪಡದಿರಿ, ಜನರ ಬಗ್ಗೆ ಕೆಟ್ಟಮಾತುಗಳನ್ನು ಆಡದಿರಿ. ಇವುಗಳನ್ನೆಲ್ಲಾ ನಿಮ್ಮ ಜೀವಿತದಿಂದ ಹೊರಕ್ಕೆ ಹಾಕಿರಿ.


ಅದಕ್ಕೆ ಸಂಸೋನನು, “ಎಂದೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬೇರೆಯವರಂತೆ ನಿರ್ಬಲನಾಗುತ್ತೇನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು