Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:19 - ಪರಿಶುದ್ದ ಬೈಬಲ್‌

19 ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿರಿ. ನಿಮ್ಮ ಹೃದಯಗಳಲ್ಲಿ ಪ್ರಭುವಿಗೆ ವಾದ್ಯ ನುಡಿಸುತ್ತಾ ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕೀರ್ತನೆ, ಹಾಡು, ಭಕ್ತಿಗೀತೆ ಇವುಗಳಿಂದ ನಿಮ್ಮ ಭಾವಗಳನ್ನು ಪರಸ್ಪರ ವ್ಯಕ್ತಪಡಿಸಿರಿ. ಹೃದಯಾಂತರಾಳದಿಂದ ಹಾಡಿ ಪ್ರಭುವಿಗೆ ಸ್ತುತಿಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಪವಿತ್ರಾತ್ಮಭರಿತರಾಗಿದ್ದು ಕೀರ್ತನೆಗಳಿಂದಲೂ ಆತ್ಮಸಂಬಂಧವಾದ ಪದಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಗಾನಮಾಡುತ್ತಾ ಕೀರ್ತನೆ ಹಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮನಿಂದಾದ ಹಾಡುಗಳಿಂದಲೂ ಪರಸ್ಪರ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಾಂತರಾಳದಿಂದ ಕರ್ತನಿಗೆ ಹಾಡಿ ಹರಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಿರ್ತನ್ಯಾನಿ, ಗಿತಾನಿ, ಅನಿ ಆತ್ಮಿಕ್ ಗಿತಾನಿ ಎಕಾಮೆಕಾಕ್ ಬೊಲುನ್ಗೆತ್ ರಾವಾ ತುಮ್ಚ್ಯಾ ಮನಾತ್ನಿ ಧನಿಯಾಕ್ ವಾಜಾಪಾ ವಾಜ್ವುನ್ಗೆತ್ ಗಿತಾ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:19
16 ತಿಳಿವುಗಳ ಹೋಲಿಕೆ  

ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.


ಆದ್ದರಿಂದ ಸಹೋದರ ಸಹೋದರಿಯರೇ, ನೀವು ಮಾಡತಕ್ಕದ್ದೇನು? ನೀವು ಸಭೆಸೇರಿದಾಗ, ಒಬ್ಬನು ಹಾಡುತ್ತಾನೆ; ಒಬ್ಬನು ಉಪದೇಶ ಮಾಡುತ್ತಾನೆ; ಒಬ್ಬನು ದೇವರಿಂದ ಹೊಸ ಸತ್ಯವನ್ನು ತಿಳಿಸುತ್ತಾನೆ; ಒಬ್ಬನು ಪರಭಾಷೆಯಲ್ಲಿ ಮಾತಾಡುತ್ತಾನೆ; ಒಬ್ಬನು ಆ ಪರಭಾಷೆಯನ್ನು ಅನುವಾದಿಸುತ್ತಾನೆ. ಸಭೆಯು ದೃಢವಾಗಿ ಬೆಳೆಯಬೇಕೆಂಬುದೇ ಇವುಗಳ ಉದ್ದೇಶವಾಗಿರಬೇಕು.


ಆತನಿಗೆ ಕೃತಜ್ಞತಾಸುತ್ತಿ ಮಾಡೋಣ. ಸ್ತುತಿಗೀತೆಗಳೊಡನೆ ಆನಂದಘೋಷ ಮಾಡೋಣ.


ಸುಮಾರು ಮಧ್ಯರಾತ್ರಿಯಲ್ಲಿ ಪೌಲ ಸೀಲರು ಪ್ರಾರ್ಥನೆ ಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ನಮ್ಮ ದೇವರನ್ನು ಹಾರ್ಪ್‌ವಾದ್ಯಗಳೊಂದಿಗೆ ಸ್ತುತಿಸಿರಿ.


ನಿಮ್ಮಲ್ಲಿ ತೊಂದರೆಗೆ ಒಳಗಾಗಿರುವವನು ಪ್ರಾರ್ಥಿಸಬೇಕು. ನಿಮ್ಮಲ್ಲಿ ಸಂತೋಷದಿಂದಿರುವವನು ಹಾಡಬೇಕು.


ಜನರೇ, ಯಾವಾಗಲೂ ದೇವರನ್ನೇ ನಂಬಿಕೊಂಡಿರಿ. ನಿಮ್ಮ ಕಷ್ಟಗಳನ್ನೆಲ್ಲಾ ಆತನಿಗೆ ಹೇಳಿಕೊಳ್ಳಿರಿ. ಆತನೇ ನಮ್ಮ ಆಶ್ರಯಸ್ಥಾನ.


ನನ್ನ ಸೇವಕರ ಹೃದಯಗಳಲ್ಲಿ ಒಳ್ಳೆಯತನವಿದೆ. ಆದ್ದರಿಂದ ಅವರು ಸಂತೋಷವಾಗಿದ್ದಾರೆ. ದುಷ್ಟಜನರಾದ ನೀವಾದರೋ ಹೃದಯದ ಬೇನೆಯಿಂದಾಗಿ ಅಳುವಿರಿ. ನಿಮ್ಮ ಆತ್ಮವು ಕುಂದಿಹೋಗುವದು; ನೀವು ದುಃಖಕ್ರಾಂತರಾಗುವಿರಿ.


ನನ್ನ ದೇವರಾದ ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಸ್ತುತಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸನ್ಮಾನಿಸುವೆನು!


ಆಗ ಶಿಷ್ಯರೆಲ್ಲರೂ ಪಸ್ಕಹಬ್ಬದ ಹಾಡನ್ನು ಹಾಡಿದರು. ಬಳಿಕ ಅವರು ಆಲಿವ್ ಗುಡ್ಡಕ್ಕೆ ಹೋದರು.


‘ಇವರು ನನ್ನನ್ನು ಮಾತಿನಿಂದ ಗೌರವಿಸುತ್ತಾರೆ. ಇವರ ಮನಸ್ಸಾದರೋ ನನಗೆ ದೂರವಾಗಿದೆ.


ಆದ್ದರಿಂದ ನಾನೇನು ಮಾಡಬೇಕು? ನಾನು ನನ್ನ ಆತ್ಮದಿಂದಲೂ ಮನಸ್ಸಿನಿಂದಲೂ ಪ್ರಾರ್ಥಿಸುವೆನು; ನನ್ನ ಜೀವಾತ್ಮದೊಂದಿಗೂ ಮನಸ್ಸಿನೊಂದಿಗೂ ಹಾಡುವೆನು.


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು