Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:21 - ಪರಿಶುದ್ದ ಬೈಬಲ್‌

21 ನೀವು ಒಬ್ಬರಿಗೊಬ್ಬರು ವಿಧೇಯರಾಗಿರಬೇಕು. ಏಕೆಂದರೆ ನೀವು ಕ್ರಿಸ್ತನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕ್ರಿಸ್ತಯೇಸುವಿನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಕ್ರಿಸ್ತನ ಭಯಭಕ್ತಿಯಲ್ಲಿ ಒಬ್ಬರಿಗೊಬ್ಬರು ಅಧೀನರಾಗಿ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತುಮಿ ಎಕಾಮೆಕಾಕ್ ಖಾಲ್ತಿ ಹೊವ್ನ್ ಚಲ್ತಲೆ ಹೊವ್ನ್ ರ್‍ಹಾವ್ಚೆ ಕಶ್ಯಾಕ್ ಮಟ್ಲ್ಯಾರ್, ತುಮಿ ಕ್ರಿಸ್ತಾಚೆ ಭ್ಹಿಂಯೆ ಅನಿ ದೆವಸ್ಪಾನ್ ಹೊತ್ತೆ ಹೊವ್ನ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:21
20 ತಿಳಿವುಗಳ ಹೋಲಿಕೆ  

ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.


ಸಭೆಯು ಕ್ರಿಸ್ತನ ಅಧೀನದಲ್ಲಿದೆ. ಇದೇ ನಿಯಮವು ಸ್ತ್ರೀಯರಿಗೆ ಅನ್ವಯಿಸುತ್ತದೆ. ಪ್ರತಿಯೊಂದು ವಿಷಯದಲ್ಲಿಯೂ ಸ್ತ್ರೀಯರು ತಮ್ಮ ಗಂಡಂದಿರಿಗೆ ಅಧೀನರಾಗಿರಬೇಕು.


ಸ್ತ್ರೀಯರೇ, ನೀವು ಪ್ರಭುವಿಗೆ ಅಧೀನರಾಗಿರುವಂತೆ ನಿಮ್ಮ ಗಂಡಂದಿರಿಗೂ ಅಧೀನರಾಗಿರಿ.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.


ಜನರೆಲ್ಲರಿಗೂ ಗೌರವವನ್ನು ತೋರಿಸಿರಿ. ದೇವರ ಕುಟುಂಬದ ಸಹೋದರ ಸಹೋದರಿಯರೆಲ್ಲರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ ಮತ್ತು ರಾಜನನ್ನು ಗೌರವಿಸಿರಿ.


ಅವನು ತನ್ನ ಸ್ವಂತ ಕುಟುಂಬಕ್ಕೆ ಒಳ್ಳೆಯ ನಾಯಕನಾಗಿರಬೇಕು. ಅವನ ಮಕ್ಕಳು ಅವನಿಗೆ ವಿಧೇಯರಾಗಿದ್ದು ಪೂರ್ಣ ಗೌರವವನ್ನು ನೀಡುವಂತಿರಬೇಕೆಂಬುದು ಇದರ ಅರ್ಥ.


ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.


ಸ್ತ್ರೀಯರು ಉಪದೇಶವನ್ನು ಕೇಳಬೇಕು ಮತ್ತು ವಿಧೇಯರಾಗಲು ಪೂರ್ಣಸಿದ್ಧರಾಗಿರಬೇಕು.


ಈ ರೀತಿಯ ಮುಂದಾಳುಗಳನ್ನು ಮತ್ತು ಅವರೊಂದಿಗೆ ಕೆಲಸ ಮಾಡುವವರನ್ನು ಹಾಗೂ ಸೇವೆ ಮಾಡುವವರನ್ನು ಹಿಂಬಾಲಿಸಿರಿ.


ಮಗನೇ, ಯೆಹೋವನನ್ನೂ ರಾಜನನ್ನೂ ಗೌರವಿಸು. ಅವರನ್ನು ವಿರೋಧಿಸುವವರ ಜೊತೆ ಸೇರಬೇಡ.


ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.


ನಿಮ್ಮಲ್ಲಿ ಪ್ರತಿಯೊಬ್ಬರೂ ಯೆಹೋವನಿಗೆ ಭಯಪಡುವವರಾಗಿರಬೇಕು. ಆತನು ನ್ಯಾಯವಂತನಾಗಿದ್ದಾನೆ. ಆತನಿಗೆ ಎಲ್ಲಾ ಜನರು ಸಮಾನರೇ. ಆತನು ಲಂಚ ಸ್ವೀಕರಿಸಿ ನ್ಯಾಯವನ್ನು ಬದಲಾಯಿಸುವದಿಲ್ಲ” ಎಂದು ಹೇಳಿದನು.


ಈ ಲೋಕದ ಅಧಿಕಾರಿಗಳಿಗೆ ವಿಧೇಯರಾಗಿರಿ. ಪ್ರಭುವಿಗಾಗಿ ಇದನ್ನು ಮಾಡಿರಿ. ಸರ್ವಾಧಿಕಾರಿಯಾದ ರಾಜನಿಗೆ ವಿಧೇಯರಾಗಿರಿ.


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


ನಾನು ಹೇಳುವುದನ್ನು ಮುಂದುವರಿಸುತ್ತಾ, “ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ದೇವರಿಗೆ ಭಯಪಟ್ಟು ಆತನನ್ನು ಗೌರವಿಸಬೇಕೆಂದು ನಿಮಗೆ ಗೊತ್ತಿದೆ. ಇತರ ಜನರು ಮಾಡುವ ನಾಚಿಕೆಕರವಾದ ಕೆಲಸವನ್ನು ನೀವು ಮಾಡಬಾರದು.


ಎಲ್ಲಾ ನಾಯಕರು, ಸೈನಿಕರು ಮತ್ತು ದಾವೀದನ ಗಂಡುಮಕ್ಕಳು ಸೊಲೊಮೋನನನ್ನು ತಮ್ಮ ಅರಸನನ್ನಾಗಿ ಸ್ವೀಕರಿಸಿ ಅವನಿಗೆ ವಿಧೇಯರಾದರು.


ಯೆಹೋವನ ದೂತನು ಹಾಗರಳಿಗೆ, “ಸಾರಯಳು ನಿನ್ನ ಯಜಮಾನಿ. ನೀನು ಆಕೆಯ ಬಳಿಗೆ ಹಿಂತಿರುಗಿ ಹೋಗಿ ಆಕೆಗೆ ವಿಧೇಯಳಾಗಿರು” ಎಂದು ಹೇಳಿದನು.


ಪ್ರಭುವಿನ ಭಯ ಎಂದರೇನೆಂಬುದು ನಮಗೆ ತಿಳಿದಿದೆ. ಆದ್ದರಿಂದ ಸತ್ಯವನ್ನು ಸ್ವೀಕರಿಸಿಕೊಳ್ಳುವಂತೆ ಜನರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲನು. ನೀವು ಸಹ ನಿಮ್ಮ ಹೃದಯಗಳಲ್ಲಿ ನಮ್ಮನ್ನು ತಿಳಿದುಕೊಂಡಿದ್ದೀರೆಂದು ನಂಬುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು