Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:3 - ಪರಿಶುದ್ದ ಬೈಬಲ್‌

3 ಆದರೆ ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿರಕೂಡದು. ಯಾವ ಬಗೆಯ ದುಷ್ಟತ್ವವಾಗಲಿ ಸ್ವಾರ್ಥತೆಯಾಗಲಿ ಇರಕೂಡದು. ಏಕೆಂದರೆ ಅವುಗಳು ದೇವರ ಪರಿಶುದ್ಧ ಜನರಿಗೆ ಯೋಗ್ಯವಾದವುಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜಾರತ್ವ ಯಾವ ವಿಧವಾದ ಬಂಡುತನ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು; ಇವುಗಳಿಗೆ ದೂರವಾಗಿರುವದೇ ದೇವಜನರಿಗೆ ಯೋಗ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ನಿಮ್ಮೊಳಗೆ ಅನೈತಿಕತೆಯಾಗಲಿ, ಯಾವ ಅಶುದ್ಧತ್ವವಾಗಲಿ, ಇಲ್ಲವೆ ಲೋಭವಾಗಲಿ ಇರಲೇಬಾರದು. ಇವು ದೇವರ ಪರಿಶುದ್ಧರಿಗೆ ಯೋಗ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ತುಮ್ಚ್ಯಾ ಮದ್ದಿ ಲೈಂಗಿಕ್ ಪಾಪ್ ರ್‍ಹಾವ್ಚೆ ನ್ಹಯ್, ಕಸ್ಲ್ಯಾ ನಮುನ್ಯಾಚೆಬಿ ಬುರ್ಶೆಪಾನ್ ಹೊಂವ್ದಿ ಮೊಟೆಪಾನ್ ಹೊಂವ್ದಿ ರ್‍ಹಾವ್ಚೆ ನ್ಹಯ್, ಕಶ್ಯಾಕ್ ಮಟ್ಲ್ಯಾರ್, ತೆ ಸಗ್ಳೆ ದೆವಾಚ್ಯಾ ಪವಿತ್ರ್ ಲೊಕಾಕ್ನಿ ಬರೆ ದಿಸಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:3
58 ತಿಳಿವುಗಳ ಹೋಲಿಕೆ  

ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.


ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.


ನೀವು ಪವಿತ್ರರಾಗಿರಬೇಕೆಂಬುದು ದೇವರ ಚಿತ್ತವಾಗಿದೆ. ಆದುದರಿಂದ ನೀವು ಲೈಂಗಿಕ ಪಾಪಗಳಿಂದ ದೂರವಿರಿ.


ಆದ್ದರಿಂದ ಲೈಂಗಿಕ ಪಾಪದಿಂದ ಓಡಿಹೋಗಿರಿ. ಒಬ್ಬನು ಮಾಡುವ ಇತರ ಪಾಪಗಳೆಲ್ಲಾ ಅವನ ದೇಹದ ಹೊರಗಾಗಿವೆ. ಆದರೆ ಲೈಂಗಿಕ ಪಾಪ ಮಾಡುವ ವ್ಯಕ್ತಿ ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.


ದೇವರು ನಮ್ಮನ್ನು ಪರಿಶುದ್ಧರಾಗಿ ಜೀವಿಸುವುದಕ್ಕೆ ಕರೆದಿದ್ದಾನೆ. ನಾವು ಪಾಪದಲ್ಲಿ ಜೀವಿಸಲು ಆತನು ಇಷ್ಟಪಡುವುದಿಲ್ಲ.


“ಆಹಾರವು ಹೊಟ್ಟೆಗೋಸ್ಕರವಿದೆ, ಹೊಟ್ಟೆಯು ಆಹಾರಕ್ಕೋಸ್ಕರವಿದೆ.” ಹೌದು, ದೇವರು ಅವೆರಡನ್ನು ನಾಶಮಾಡುವನು. ದೇಹವಿರುವುದು ಲೈಂಗಿಕ ಪಾಪಮಾಡುವುದಕ್ಕಾಗಿಯಲ್ಲ. ದೇಹವು ಪ್ರಭುವಿಗೋಸ್ಕರವಿದೆ, ಪ್ರಭುವು ದೇಹಕ್ಕೋಸ್ಕರವಿದ್ದಾನೆ.


ಆ ಜನರು ಕತ್ತಲೆಯಲ್ಲಿ ಮಾಡುವ ಗುಪ್ತಕಾರ್ಯಗಳ ಬಗ್ಗೆ ಮಾತಾಡುವುದಕ್ಕೂ ನಾಚಿಕೆಯಾಗುತ್ತದೆ.


ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟುಬರುತ್ತವೆ.


ತನ್ನ ಮನಸ್ಸನ್ನು ಪರಿವರ್ತಿಸಿಕೊಂಡು ಪಾಪಗಳಿಂದ ದೂರ ಸರಿಯಲು ನಾನು ಆಕೆಗೆ ಸಮಯ ಕೊಟ್ಟರೂ ಪರಿವರ್ತನೆ ಹೊಂದಲು ಆಕೆಗೆ ಇಷ್ಟವಿಲ್ಲ.


ಅವರಲ್ಲಿ ಕೆಲವರು ಮಾಡಿದಂತೆ ನಾವು ಲೈಂಗಿಕ ಪಾಪಗಳನ್ನು ಮಾಡಬಾರದು. ಅವರಲ್ಲಿ ಇಪ್ಪತ್ತಮೂರು ಸಾವಿರ ಮಂದಿ ತಮ್ಮ ಆ ಪಾಪದ ಫಲವಾಗಿ ಒಂದೇ ದಿನದಲ್ಲಿ ಸತ್ತುಹೋದರು.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.


ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿದೆಯೆಂದು ಜನರು ನಿಜವಾಗಿಯೂ ಹೇಳುತ್ತಿದ್ದಾರೆ. ದೇವರನ್ನು ತಿಳಿದಿಲ್ಲದ ಜನರ ನಡುವೆಯೂ ಇಲ್ಲದಂಥ ಕೆಟ್ಟ ಬಗೆಯ ಲೈಂಗಿಕ ಪಾಪ ಅದಾಗಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನೆಂದು ಜನರು ಹೇಳುತ್ತಿದ್ದಾರೆ.


ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.


“ನೀವು ನೆರೆಯವನ ಮನೆಯನ್ನು ಆಶಿಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.”


ಈ ಜನರು ತಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಪರಿವರ್ತಿಸಿಕೊಳ್ಳಲಿಲ್ಲ ಮತ್ತು ಇತರರನ್ನು ಕೊಲ್ಲುವುದನ್ನು ಬಿಟ್ಟುಬಿಡಲಿಲ್ಲ. ಅವರು ತಾವು ನಡೆಸುತ್ತಿದ್ದ ಮಾಟಮಂತ್ರಗಳನ್ನು, ಲೈಂಗಿಕ ಪಾಪಗಳನ್ನು ಮತ್ತು ಕಳ್ಳತನವನ್ನು ತೊರೆದುಬಿಡಲಿಲ್ಲ.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ನಿಮ್ಮಲ್ಲಿ ಯಾರೂ ಮಾಡದಂತೆ ಜಾಗ್ರತೆಯಿಂದಿರಿ; ಪ್ರಾಪಂಚಿಕನಾದ ಏಸಾವನಂತೆ ಆಗದಿರಲು ಎಚ್ಚರದಿಂದಿರಿ. ಹಿರಿಯ ಮಗನಾದ ಏಸಾವನು ತನ್ನ ತಂದೆಯ ಸಮಸ್ತಕ್ಕೂ ವಾರಸುದಾರನಾಗುತ್ತಿದ್ದನು. ಆದರೆ ಅವನು ಒಂದು ಹೊತ್ತಿನ ಊಟಕ್ಕಾಗಿ ಎಲ್ಲವನ್ನೂ ಮಾರಿದನು.


ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.


ಅಂತೆಯೇ ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು. ಅವರು ಚಾಡಿ ಹೇಳಬಾರದು; ಮದ್ಯಾಸಕ್ತರಾಗಿರಬಾರದು. ಅವರು ಒಳ್ಳೆಯದನ್ನೇ ಉಪದೇಶಿಸಬೇಕು.


ಆ ಕಾಲದಲ್ಲಿ ಜನರು ಸ್ವಾರ್ಥಿಗಳಾಗಿರುತ್ತಾರೆ, ಹಣದಾಸೆ ಉಳ್ಳವರಾಗಿರುತ್ತಾರೆ; ಬಡಾಯಿಕೊಚ್ಚುವವರಾಗಿರುತ್ತಾರೆ; ಗರ್ವಿಷ್ಠರಾಗಿರುತ್ತಾರೆ; ಚಾಡಿಕೋರರಾಗಿರುತ್ತಾರೆ; ತಂದೆತಾಯಿಗಳಿಗೆ ಅವಿಧೇಯರಾಗಿರುತ್ತಾರೆ; ಕೃತಜ್ಞತೆಯಿಲ್ಲದವರಾಗಿರುತ್ತಾರೆ; ಅಪವಿತ್ರರಾಗಿರುತ್ತಾರೆ;


ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ಈ ವಿಷಯಗಳನ್ನು ತಿಳಿಸೋಣ: ವಿಗ್ರಹಗಳಿಗೆ ಅರ್ಪಿಸಿದ ಆಹಾರವನ್ನು ತಿನ್ನಬೇಡಿರಿ. (ಈ ಆಹಾರ ಅಶುದ್ಧವಾದದ್ದು.) ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ.


ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.


ಅವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರಾಗಿದ್ದಾರೆ. ಅವರು ದುರ್ಬಲರನ್ನು ಪಾಪವೆಂಬ ಉರುಲಿನಲ್ಲಿ ಬೀಳಿಸುತ್ತಾರೆ. ಅವರು ತಮ್ಮ ಹೃದಯಗಳಿಗೆ ಸ್ವಾರ್ಥವನ್ನೇ ಕಲಿಸಿದ್ದಾರೆ. ಅವರು ಶಾಪಗ್ರಸ್ತರಾಗಿದ್ದಾರೆ.


ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ.


ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.


ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ.


ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು.


ಮದ್ಯಪಾನದಲ್ಲಿ ಆಸ್ತಕನಾಗಿರಬಾರದು ಮತ್ತು ಹಿಂಸಾತ್ಮಕನಾಗಿರಬಾರದು. ಅವನು ಸಾತ್ವಿಕನೂ ಶಾಂತನೂ ಆಗಿರಬೇಕು; ಹಣದಾಸೆ ಉಳ್ಳವನಾಗಿರಬಾರದು.


ಆದರೆ ಅವರು ಯೋಗ್ಯಕಾರ್ಯಗಳನ್ನು ಮಾಡುವುದರ ಮೂಲಕ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬೇಕು. ದೇವರನ್ನು ಆರಾಧಿಸುತ್ತೇವೆ ಎಂದು ಹೇಳುವ ಸ್ತ್ರೀಯರು ತಮ್ಮನ್ನು ಈ ರೀತಿಯಲ್ಲಿಯೇ ಅಲಂಕರಿಸಿಕೊಳ್ಳಬೇಕು.


ಅದೇನೇ ಇರಲಿ, ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ಬಾಳಿರಿ. ಆಗ ನಾನು ನಿಮ್ಮ ಬಳಿಗೆ ಬಂದರೂ ಸರಿ, ನಿಮ್ಮಿಂದ ದೂರದಲ್ಲಿದ್ದರೂ ಸರಿ, ನಿಮ್ಮ ವಿಷಯದಲ್ಲಿ ಒಳ್ಳೆಯ ಸಂಗತಿಗಳನ್ನು ಕೇಳುತ್ತೇನೆ. ನೀವು ಒಂದೇ ಉದ್ದೇಶದಿಂದ ದೃಢವಾಗಿದ್ದೀರೆಂದೂ ಸುವಾರ್ತೆಯಿಂದ ಉಂಟಾದ ನಂಬಿಕೆಗೋಸ್ಕರ ಏಕಮನಸ್ಸಿನಿಂದ ಕೆಲಸ ಮಾಡುತ್ತಿದ್ದೀರೆಂದೂ ಕೇಳುತ್ತಲೇ ಇರುತ್ತೇನೆ.


ನೀವು ಆಕೆಯನ್ನು ಪ್ರಭುವಿನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ದೇವಜನರಿಗೆ ತಕ್ಕಂತೆ ಈಕೆಯನ್ನು ಸ್ವೀಕರಿಸಿಕೊಳ್ಳಿರಿ. ಆಕೆಗೆ ಬೇಕಾದ ಸಹಾಯಗಳನ್ನೆಲ್ಲಾ ಮಾಡಿರಿ. ಆಕೆಯು ನನಗೆ ಬಹಳವಾಗಿ ಸಹಾಯ ಮಾಡಿದ್ದಾಳೆ. ಅಲ್ಲದೆ ಇತರ ಅನೇಕ ಜನರಿಗೂ ಆಕೆ ಸಹಾಯ ಮಾಡಿದ್ದಾಳೆ.


ನಿಮ್ಮ ದೇಹದ ಅಂಗಗಳನ್ನು ಪಾಪದ ಸೇವೆಗೆ ಒಪ್ಪಿಸಬೇಡಿ; ನಿಮ್ಮ ದೇಹಗಳನ್ನು ಪಾಪಕ್ಕೆ ಒಪ್ಪಿಸಿ ದುಷ್ಟತ್ವವನ್ನು ನಡೆಸುವ ಸಾಧನಗಳಾಗಬೇಡಿ. ಅದಕ್ಕೆ ಬದಲಾಗಿ, ನಿಮ್ಮನ್ನೇ ದೇವರಿಗೆ ಸಮರ್ಪಿಸಿಕೊಳ್ಳಿರಿ; ಸತ್ತು ಈಗ ಜೀವಂತವಾಗಿ ಎದ್ದುಬಂದಿರುವವರಂತೆ ಜೀವಿಸಿರಿ; ಒಳ್ಳೆಯ ಕಾರ್ಯಗಳನ್ನು ಮಾಡುವ ಸಾಧನಗಳನ್ನಾಗಿ ನಿಮ್ಮ ದೇಹದ ಅಂಗಗಳನ್ನು ದೇವರಿಗೆ ಸಮರ್ಪಿಸಿರಿ.


ಅವರಲ್ಲಿ ಪ್ರತಿಯೊಂದು ಬಗೆಯ ಪಾಪ, ದುಷ್ಟತನ, ಸ್ವಾರ್ಥ, ದ್ವೇಷ, ಹೊಟ್ಟೆಕಿಚ್ಚು, ಕೊಲೆ, ಹೊಡೆದಾಟ, ಸುಳ್ಳುನುಡಿ ಮತ್ತು ಕೆಟ್ಟ ಆಲೋಚನೆ ಇವುಗಳೆಲ್ಲಾ ತುಂಬಿಕೊಂಡಿವೆ. ಅವರು ಹರಟೆ ಹೊಡೆಯುತ್ತಾರೆ;


ನಾನು ನಿಮ್ಮೊಂದಿಗೆ ಇದ್ದಾಗ, ಯಾರ ಹಣವನ್ನಾಗಲಿ ಒಳ್ಳೆಯ ಬಟ್ಟೆಗಳನ್ನಾಗಲಿ ಎಂದೂ ಬಯಸಲಿಲ್ಲ.


ಫರಿಸಾಯರು ಈ ಎಲ್ಲಾ ಸಂಗತಿಗಳನ್ನು ಕೇಳುತ್ತಿದ್ದರು. ಫರಿಸಾಯರೆಲ್ಲರು ಹಣದಾಸೆ ಉಳ್ಳವರಾಗಿದ್ದರಿಂದ ಅವರು ಯೇಸುವನ್ನು ಟೀಕಿಸಿದರು.


ಅವರಿಗೆ ಹೊಲಗದ್ದೆಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಅವರಿಗೆ ಮನೆಮಠಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಒಬ್ಬನಿಗೆ ಮೋಸಮಾಡಿ ಅವನ ಮನೆಯನ್ನು ಕಿತ್ತುಕೊಳ್ಳುವರು. ಇನ್ನೊಬ್ಬನಿಗೆ ಮೋಸಮಾಡಿ ಅವನ ಹೊಲಗದ್ದೆಗಳನ್ನು ಕಿತ್ತುಕೊಳ್ಳುವರು.


“ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”


ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.


“ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.


ವಿವೇಕವಿಲ್ಲದ ಅಧಿಪತಿ ತನ್ನ ಅಧೀನದಲ್ಲಿರುವವರಿಗೆ ಕೇಡುಮಾಡುವನು. ಅನ್ಯಾಯದ ಹಣವನ್ನು ತೆಗೆದುಕೊಳ್ಳದ ಅಧಿಪತಿ ಬಹುಕಾಲ ಆಳುವನು.


ಐಶ್ವರ್ಯದ ಮೇಲೆ ಮನಸ್ಸಿಡದೆ ನಿನ್ನ ಒಡಂಬಡಿಕೆಯ ಬಗ್ಗೆ ಧ್ಯಾನಿಸಲು ನನಗೆ ಸಹಾಯಮಾಡು.


ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.


ಆದರೆ ಸಮುವೇಲನ ಮಕ್ಕಳು ಅವನಂತೆ ನಡೆದುಕೊಳ್ಳಲಿಲ್ಲ. ಅವರು ಲಂಚವನ್ನು ಪಡೆದು ನ್ಯಾಯಾಲಯದಲ್ಲಿ ಅನ್ಯಾಯದ ತೀರ್ಪುಗಳು ಮಾಡುತ್ತಿದ್ದರು ಮತ್ತು ಜನರನ್ನು ವಂಚಿಸುತ್ತಿದ್ದರು.


ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.


ಇಸ್ರೇಲರು ಅಖಾಸಿಯದ ಸಮೀಪದಲ್ಲಿ ಇಳಿದುಕೊಂಡಿದ್ದರು. ಅವರು ಅಲ್ಲಿದ್ದಾಗ ಮೋವಾಬ್ ಸ್ತ್ರೀಯರೊಡನೆ ಲೈಂಗಿಕ ಪಾಪಗಳನ್ನು ಮಾಡತೊಡಗಿದರು.


“ನೀವು ಈ ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನು ಉಚ್ಚರಿಸಲೂ ಕೂಡದು.


ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.


ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ, ಆಗ ಅವರಿಬ್ಬರೂ ಸ್ನಾನಮಾಡಬೇಕು. ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು