Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:13 - ಪರಿಶುದ್ದ ಬೈಬಲ್‌

13 ಆದಕಾರಣವೇ ನೀವು ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಬೇಕು. ಆಗ ಯುದ್ಧದ ದಿನದಲ್ಲಿಯೂ ಹೋರಾಟವು ಸಂಪೂರ್ಣವಾಗಿ ಮುಗಿದಾದ ಮೇಲೆಯೂ ದೃಢವಾಗಿನಿಂತುಕೊಳ್ಳಲು ನಿಮಗೆ ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎಂದೇ, ದೇವರು ಕೊಡುವ ಸಕಲ ಶಸ್ತ್ರಾಸ್ತ್ರಗಳೊಂದಿಗೆ ಸುಸಜ್ಜಿತರಾಗಿರಿ. ಆ ದುರ್ದಿನದಂದು ವೈರಿಗಳನ್ನು ಎದುರಿಸಲು ಆಗ ನೀವು ಶಕ್ತರಾಗುತ್ತೀರಿ. ಮಾತ್ರವಲ್ಲ, ಕಟ್ಟಕಡೆಯವರೆಗೆ ಹಿಮ್ಮೆಟ್ಟದೆ ನಿಲ್ಲುತ್ತೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದದರಿಂದ ಕಠಿನ ಯುದ್ಧವು ನಡೆಯುವ ದಿವಸದಲ್ಲಿ ಆ ವೈರಿಗಳನ್ನು ಎದುರಿಸುವದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ಜಯಶಾಲಿಗಳಾಗಿ ನಿಲ್ಲುವದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ತೆಗೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದುದರಿಂದ ವೈರಿಯು ದಾಳಿಮಾಡುವ ದಿನವು ಬರುವಾಗ ನೀವು ಅವನನ್ನು ಎದುರಿಸಿ ನಿಲ್ಲುವಂತೆಯು, ಎಲ್ಲವನ್ನು ಜಯಿಸಿ ಮುಗಿಸಿದ ಮೇಲೆ ನಿಲ್ಲಲು ಶಕ್ತರಾಗುವಂತೆ, ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತಸೆ ಹೊವ್ನ್ ತುಮಿ ದೆವಾಚಿ ಸಗ್ಳಿ ಹಾತಿಯಾರಾ ನೆಸುನ್ ಘೆವ್ಚೆ, ತನ್ನಾ ಝಗ್ಡ್ಯಾಂಚ್ಯಾ ದಿಸಾಂತ್ಲೊ ಝಗ್ಡೊ ಫುರಾ ಸರ್ಲ್ಯಾ ಮಾನಾ ಆಕ್ರಿಪತರ್ಬಿ ಘಟ್ ಇಬೆ ರಾವ್ಕ್ ತುಮ್ಕಾ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:13
15 ತಿಳಿವುಗಳ ಹೋಲಿಕೆ  

ಪ್ರಪಂಚದವರು ಉಪಯೋಗಿಸುವ ಆಯುಧಗಳಿಗೆ ತದ್ವಿರುದ್ಧವಾದ ಆಯುಧಗಳೊಂದಿಗೆ ನಾವು ಹೋರಾಡುತ್ತೇವೆ. ನಮ್ಮ ಆಯುಧಗಳು ದೇವರ ಶಕ್ತಿಯನ್ನು ಹೊಂದಿವೆ. ಅವು ಶತ್ರುವಿನ ಬಲವಾದ ಕೋಟೆಗಳನ್ನು ನಾಶ ಮಾಡಬಲ್ಲವು. ನಾವು ಜನರ ವಾದಗಳನ್ನು ನಾಶಮಾಡುತ್ತೇವೆ.


ಆದ್ದರಿಂದ ಎಲ್ಲಾ ಸಮಯದಲ್ಲಿಯೂ ಸಿದ್ಧರಾಗಿರಿ. ನಡೆಯಲಿರುವ ಈ ಎಲ್ಲಾ ಸಂಗತಿಗಳನ್ನು ಎದುರಿಸಿ ಸುರಕ್ಷಿತವಾಗಿ ಮುಂದುವರಿಯಲು ಮತ್ತು ಮನುಷ್ಯಕುಮಾರನ ಮುಂದೆ ನಿಲ್ಲಲು ಬೇಕಾದ ಶಕ್ತಿಗಾಗಿ ಪ್ರಾರ್ಥಿಸಿರಿ.”


ಈ ದಿನಗಳು ಕೆಟ್ಟವುಗಳಾಗಿವೆ. ಆದ್ದರಿಂದ ನಿಮಗಿರುವ ಪ್ರತಿಯೊಂದು ಅವಕಾಶವನ್ನು ಒಳ್ಳೆಯದಕ್ಕಾಗಿ ಉಪಯೋಗಿಸಿರಿ.


ಬಂಡೆಯ ಮೇಲೆ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯ ಕೇಳಿ ಸಂತೋಷದಿಂದ ಸ್ವೀಕರಿಸಿಕೊಳ್ಳುತ್ತಾರೆ. ಆದರೆ ಅವರಿಗೆ ಆಳವಾದ ಬೇರುಗಳಿರುವುದಿಲ್ಲ. ಅವರು ಸ್ವಲ್ಪಕಾಲ ಮಾತ್ರವೇ ನಂಬುತ್ತಾರೆ. ಬಳಿಕ ತೊಂದರೆಯೇನಾದರೂ ಬಂದರೆ ತಮ್ಮ ನಂಬಿಕೆಯನ್ನು ಕಳೆದುಕೊಂಡು ದೇವರಿಂದ ದೂರ ಸರಿಯುತ್ತಾರೆ.


ನೀನು ನನ್ನ ಆಜ್ಞೆಯನ್ನು ಸಹನೆಯಿಂದ ಮತ್ತು ತಾಳ್ಮೆಯಿಂದ ಅನುಸರಿಸಿದೆ. ಆದ್ದರಿಂದ ಈ ಲೋಕಕ್ಕೆಲ್ಲಾ ಉಂಟಾಗುವ ಕಡುಶೋಧನೆಯಿಂದ ನಾನು ನಿನ್ನನ್ನು ತಪ್ಪಿಸುತ್ತೇನೆ. ಭೂನಿವಾಸಿಗಳೆಲ್ಲರನ್ನು ಈ ಶೋಧನೆಯು ಪರಿಶೋಧಿಸುತ್ತದೆ.


ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ.


“ಆ ಸಮಯಕ್ಕಾಗಿ ಯಾರೂ ಸಿದ್ಧಮಾಡಿಕೊಳ್ಳಲಾರರು. ಯಾರೂ ಆತನು ಬರುವಾಗ ಆತನಿಗೆ ವಿರುದ್ಧವಾಗಿ ನಿಲ್ಲರು. ಆತನು ಸುಡುವ ಬೆಂಕಿಯಾಗಿರುವನು. ಆತನು ಶಕ್ತಿಯುತವಾದ ಸಾಬೂನಿನಂತೆ ಕೊಳೆಯನ್ನು ಹೋಗಲಾಡಿಸಿ ಶುದ್ಧಮಾಡುವನು.


ಕಷ್ಟಕಾಲಗಳು ಬರುವುದಕ್ಕಿಂತ ಮೊದಲೇ, ವರ್ಷಗಳು ಮುಗಿದು, “ನನಗೆ ಅವುಗಳಲ್ಲಿ ಸುಖವಿಲ್ಲ” ಎಂದು ಹೇಳುವ ಕಾಲಬರುವುದಕ್ಕಿಂತ ಮೊದಲೇ ಯೌವನಪ್ರಾಯದಲ್ಲಿ ನಿನ್ನ ಸೃಷ್ಟಿಕರ್ತನನ್ನು ಜ್ಞಾಪಿಸಿಕೊ.


ಅಸತ್ಯವಾದ ಸಂಗತಿಗಳನ್ನು ಹೇಳಿ ನಿಮ್ಮನ್ನು ಮೋಸಪಡಿಸಲು ಯಾರಿಗೂ ಅವಕಾಶ ಕೊಡಬೇಡಿ. ಆ ಕೆಟ್ಟಸಂಗತಿಗಳ ನಿಮಿತ್ತ ದೇವರ ಕೋಪವು ಆತನಿಗೆ ವಿಧೇಯರಾಗದ ಜನರ ಮೇಲೆ ಬರುತ್ತದೆ.


ಆತನ ಕೋಪವು ಪ್ರಕಟವಾಗುವ ಮಹಾದಿನವು ಬಂದುಬಿಟ್ಟಿದೆ. ಆ ಕೋಪದ ಎದುರಿನಲ್ಲಿ ನಿಲ್ಲಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿದರು.


ಶಿಕ್ಷಿಸಲ್ಪಡುವ ದಿವಸದ ಕಡೆಗೆ ನೀವು ಧಾವಿಸುತ್ತಿದ್ದೀರಿ. ಅಕ್ರಮ ಆಳ್ವಿಕೆಯನ್ನು ನೀವು ಹತ್ತಿರಕ್ಕೆ ಬರಮಾಡಿಕೊಳ್ಳುತ್ತಾ ಇದ್ದೀರಿ.


“ರಾತ್ರಿ”ಯು ಬಹುಮಟ್ಟಿಗೆ ಮುಗಿದುಹೋಗಿದೆ. “ಹಗಲು” ಬಹುಮಟ್ಟಿಗೆ ಬಂದಿದೆ. ಆದ್ದರಿಂದ ಕತ್ತಲೆಗೆ ಸೇರಿದ ಕಾರ್ಯಗಳನ್ನು ಇನ್ನು ಮೇಲೆ ಮಾಡದೆ ಬೆಳಕಿಗೆ ಸೇರಿದ ಕಾರ್ಯಗಳನ್ನು ಮಾಡಲು ನಮ್ಮನ್ನು ಸಿದ್ಧಪಡಿಸಿಕೊಳ್ಳಬೇಕು.


ಆದ್ದರಿಂದ ದೇವರಿಗೆ ನಿಮ್ಮನ್ನು ಒಪ್ಪಿಸಿಕೊಂಡು ಸೈತಾನನನ್ನು ಎದುರಿಸಿರಿ. ಆಗ ಅವನು ನಿಮ್ಮಿಂದ ದೂರ ಓಡಿಹೋಗುತ್ತಾನೆ.


ಕ್ರಿಸ್ತನು ದೇಹಾರೂಢನಾಗಿದ್ದಾಗ ಸಂಕಟಪಟ್ಟನು. ಆದ್ದರಿಂದ ಕ್ರಿಸ್ತನಲ್ಲಿದ್ದ ಮನೋಭಾವವನ್ನೇ ನೀವೂ ಹೊಂದಿದವರಾಗಿ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ಶಾರೀರಿಕವಾಗಿ ಸಂಕಟವನ್ನು ಅನುಭವಿಸಿದ ವ್ಯಕ್ತಿಯು ಪಾಪದಿಂದ ಮುಕ್ತನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು