Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:5 - ಪರಿಶುದ್ದ ಬೈಬಲ್‌

5 ಸೇವಕರೇ, ನಿಮ್ಮ ಇಹಲೋಕದ ಯಜಮಾನರಿಗೆ ಭಯದಿಂದಲೂ ಗೌರವದಿಂದಲೂ ವಿಧೇಯರಾಗಿರಿ. ನೀವು ಕ್ರಿಸ್ತನಿಗೆ ವಿಧೇಯರಾಗುವಂತೆ ಯಥಾರ್ಥವಾದ ಹೃದಯದಿಂದ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸೇವಕರೇ, ನೀವು ಮಾಡುತ್ತಿರುವುದು ಕ್ರಿಸ್ತಯೇಸುವಿನ ಸೇವೆಯನ್ನೇ ಎಂದು ಭಾವಿಸಿ, ನಿಮ್ಮ ಲೌಕಿಕ ಧಣಿಗಳಿಗೆ ಭಯಭಕ್ತಿಯಿಂದಲೂ ಏಕಮನಸ್ಸಿನಿಂದಲೂ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಾಸತ್ವದಲ್ಲಿರುವವರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸೇವಕರೇ, ಭಯಭಕ್ತಿಯಿಂದಲೂ ಸರಳ ಹೃದಯದಿಂದ ಕ್ರಿಸ್ತನಿಗೆ ವಿಧೇಯರಾಗುವ ಪ್ರಕಾರ ಲೌಕಿಕವಾಗಿ ನಿಮ್ಮ ಯಜಮಾನನಾಗಿರುವವರಿಗೆ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಗುಲಾಮಾನು, ತುಮ್ಚ್ಯಾ ಹ್ಯಾ ಜಗಾಚ್ಯಾ ಯಜಮಾನಾಕ್ನಿ ಭಿಂಯಾನ್, ಥರ್ತರುನ್ಗೆತ್ ಅನಿ ಮಾನ್ ದಿವ್ನ್ ಖಾಲ್ತಿ ಹೊವ್ನ್ ರಾವಾ, ತುಮಿ ಕ್ರಿಸ್ತಾಕ್ ಖಾಲ್ತಿ ಹೊಲ್ಯಾ ಸಾರ್ಕೆ ಸರಳ್ ಮನಾನ್ ಖಾಲ್ತಿ ಹೊವ್ನ್ ರಾವಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:5
27 ತಿಳಿವುಗಳ ಹೋಲಿಕೆ  

ಸ್ತ್ರೀಯರೇ, ನೀವು ಪ್ರಭುವಿಗೆ ಅಧೀನರಾಗಿರುವಂತೆ ನಿಮ್ಮ ಗಂಡಂದಿರಿಗೂ ಅಧೀನರಾಗಿರಿ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.


ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿದ್ದು ನಿಷ್ಕಳಂಕರಾಗಿ ಜೀವಿಸುವುದನ್ನು ಕಂಡು ವಾಕ್ಯೋಪದೇಶವಿಲ್ಲದಿದ್ದರೂ ದೇವರ ವಾಕ್ಯದ ಮೇಲೆ ನಂಬಿಕೆಯಿಡಲು ನಿಮ್ಮ ನಡತೆಯಿಂದಲೇ ಪ್ರೋತ್ಸಾಹಿಸಲ್ಪಡುವರು.


ಇನ್ನು ಮೇಲೆ ಅವನು ನಿನಗೆ ಕೇವಲ ಗುಲಾಮನಾಗಿರದೆ ಗುಲಾಮನಿಗಿಂತಲೂ ಹೆಚ್ಚಿನ ಪ್ರಿಯ ಸಹೋದರನಾಗಿದ್ದಾನೆ. ಅವನನ್ನು ಬಹಳವಾಗಿ ಪ್ರೀತಿಸುತ್ತೇನೆ. ಆದರೆ ನೀನು ಅವನನ್ನು ಮತ್ತಷ್ಟು ಹೆಚ್ಚಾಗಿ ಪ್ರೀತಿಸುವೆ. ನೀನು ಅವನನ್ನು ಮನುಷ್ಯನೆಂದು ಮತ್ತು ಪ್ರಭುವಿನಲ್ಲಿ ಒಬ್ಬ ಸಹೋದರನೆಂದು ಪ್ರೀತಿಸುವೆ.


ನನ್ನ ಪ್ರಿಯ ಸ್ನೇಹಿತರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ ನಾನು ದೂರವಿರುವಾಗಲೂ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿರಿ. ನೀವು ದೇವರಿಗೆ ಭಯಭಕ್ತಿಯಿಂದಿದ್ದು ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಯೆಹೋವನೇ, ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು. ನಾನು ಜೀವಿಸುತ್ತಾ ನಿನ್ನ ಸತ್ಯತೆಗಳಿಗೆ ವಿಧೇಯನಾಗುವೆನು. ನಿನ್ನ ಹೆಸರನ್ನು ಆರಾಧಿಸಲು ನನಗೆ ಸಹಾಯಮಾಡು. ನನ್ನ ಜೀವನದಲ್ಲಿ ಅದೇ ಅತ್ಯಂತ ಮುಖ್ಯವಾದದ್ದು.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ದೇವರು ಕರೆದಾಗ ಗುಲಾಮನಾಗಿದ್ದವನು ಪ್ರಭುವಿನಲ್ಲಿ ಬಿಡುಗಡೆಯಾಗಿದ್ದಾನೆ. ಅವನು ಪ್ರಭುವಿಗೆ ಸೇರಿದವನಾಗಿದ್ದಾನೆ. ಅದೇರೀತಿಯಲ್ಲಿ ದೇವರು ಕರೆದಾಗ ಸ್ವತಂತ್ರನಾಗಿದ್ದವನು ಈಗ ಕ್ರಿಸ್ತನ ಗುಲಾಮನಾಗಿದ್ದಾನೆ.


ನಾನು ಸಹ ಬೇರೆ ಅಧಿಕಾರಿಗಳ ಅಧೀನದಲ್ಲಿದ್ದೇನೆ. ನನ್ನ ಅಧೀನದಲ್ಲಿ ಸಿಪಾಯಿಗಳಿದ್ದಾರೆ. ನಾನು ಒಬ್ಬ ಸಿಪಾಯಿಗೆ ‘ಹೋಗು’ ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬ ಸಿಪಾಯಿಗೆ ‘ಬಾ’ ಅಂದರೆ ಅವನು ಬರುತ್ತಾನೆ. ನಾನು ನನ್ನ ಸೇವಕನಿಗೆ, ‘ಇದನ್ನು ಮಾಡು’ ಅಂದರೆ ಅವನು ವಿಧೇಯತೆಯಿಂದ ಮಾಡುತ್ತಾನೆ. ನಿನಗೂ ಇದೇ ರೀತಿಯ ಅಧಿಕಾರವಿದೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.


“ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.


ಯೆಹೋವನ ದೂತನು ಹಾಗರಳಿಗೆ, “ಸಾರಯಳು ನಿನ್ನ ಯಜಮಾನಿ. ನೀನು ಆಕೆಯ ಬಳಿಗೆ ಹಿಂತಿರುಗಿ ಹೋಗಿ ಆಕೆಗೆ ವಿಧೇಯಳಾಗಿರು” ಎಂದು ಹೇಳಿದನು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವ ನಿಮ್ಮೆಲ್ಲರ ಮೇಲೆ ದೇವರ ಕೃಪೆಯಿರಲಿ.


ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು. ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. ಆತನ ಕರುಣೆಯನ್ನೇ ನಿರೀಕ್ಷಿಸುವೆವು.


ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.


ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು.


ನೀವೆಲ್ಲರೂ ವಿಧೇಯರಾಗಿರಲು ಸಿದ್ಧರಾಗಿದ್ದನ್ನು ಜ್ಞಾಪಿಸಿಕೊಂಡಾಗಲೆಲ್ಲಾ ಅವನಿಗೆ ನಿಮ್ಮ ಮೇಲೆ ಪ್ರೀತಿಯು ಹೆಚ್ಚಾಗುತ್ತದೆ. ನೀವು ಅವನನ್ನು ಗೌರವದಿಂದಲೂ ಭಯದಿಂದಲೂ ಸ್ವೀಕರಿಸಿದಿರಿ.


ನಾನು ನಿಮ್ಮ ಬಳಿಗೆ ಬಂದಿದ್ದಾಗ ಬಲಹೀನನಾಗಿದ್ದೆನು; ಭಯದಿಂದ ನಡುಗುತ್ತಿದ್ದೆನು.


ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.


“ಕಣ್ಣು ಶರೀರಕ್ಕೆ ಬೆಳಕಾಗಿದೆ. ನಿನ್ನ ಕಣ್ಣು ಸರಿಯಿದ್ದರೆ, ನಿನ್ನ ದೇಹವೆಲ್ಲಾ ಬೆಳಕಿನಿಂದ ಕೂಡಿರುವುದು.


ಅವರು ನನ್ನ ಸಹೋದರ ಸಹೋದರಿಯರಾಗಿದ್ದಾರೆ; ಇಹಲೋಕದ ಕುಟುಂಬದವರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವುದಕ್ಕೂ ಸಿದ್ಧನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು