ಎಫೆಸದವರಿಗೆ 6:9 - ಪರಿಶುದ್ದ ಬೈಬಲ್9 ಯಜಮಾನರೇ, ಅದೇರೀತಿಯಲ್ಲಿ ನಿಮ್ಮ ಸೇವಕರಿಗೆ ಒಳ್ಳೆಯವರಾಗಿರಿ. ಅವರಿಗೆ ಹೆದರಿಕೆಯಾಗುವಂಥ ಮಾತುಗಳನ್ನಾಡಬೇಡಿ. ನಿಮಗೂ ಅವರಿಗೂ ಒಡೆಯನಾಗಿರುವಾತನು ಪರಲೋಕದಲ್ಲಿದ್ದಾನೆ ಎಂಬುದು ನಿಮಗೆ ತಿಳಿದಿದೆ. ಆತನು ಪ್ರತಿಯೊಬ್ಬನಿಗೂ ಪಕ್ಷಪಾತವಿಲ್ಲದೆ ನ್ಯಾಯತೀರಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯಜಮಾನರೇ, ನೀವು ಕೂಡ ನಿಮ್ಮ ಸೇವಕರೊಡನೆ ಯೋಗ್ಯವಾದ ರೀತಿಯಲ್ಲಿ ವರ್ತಿಸಿರಿ. ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿ. ಸ್ವರ್ಗಲೋಕದಲ್ಲಿ ನಿಮಗೂ ಅವರಿಗೂ ಒಬ್ಬ ಯಜಮಾನ ಇರುತ್ತಾನೆ. ಆತ ಪಕ್ಷಪಾತಿಯಲ್ಲ ಎಂಬುದನ್ನು ಮರೆಯದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯಜಮಾನರೇ, ನಿಮ್ಮ ಕೈಕೆಳಗಿರುವ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆಯಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯಜಮಾನರೇ, ನೀವು ಸಹ ನಿಮ್ಮ ಸೇವಕರೊಡನೆ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೆ ಯಜಮಾನನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಯಜಮಾನಾನು, ತಸೆಚ್ ತುಮಿಬಿ ತುಮ್ಚ್ಯಾ ಸೆವಾಕಾಕ್ನಿ ಬರಿ ಮಾನ್ಸಾ ಹೊವ್ನ್ ರಾವಾ, ತೆಂಕಾ ಭಿಂಯೆ ಕರಿಸಾರ್ಕೆ ಬೊಲುನಕಾಸಿ, ತುಮ್ಕಾಬಿ, ಅನಿ ತೆಂಕಾಬಿ ರಾಜಾ ಹೊಲ್ಲೊ ಹೊತ್ತೊ ಸರ್ಗಾತ್ ಹಾಯ್ ಮನ್ತಲೆ ತುಮ್ಕಾ ಗೊತ್ತ್ ಹಾಯ್, ತೊ ಹರ್ ಎಕ್ಲ್ಯಾಕ್ಬಿ ಮೊಟೊ ಬಾರಿಕ್ ಮನುನ್ ಬಗಿನಸ್ತಾನಾ ಝುಡ್ತಿ ಕರ್ತಾ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.