Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:1 - ಪರಿಶುದ್ದ ಬೈಬಲ್‌

1 ಅಹಷ್ವೇರೋಷನು ರಾಜನಾಗಿದ್ದಾಗ ನಡೆದ ಘಟನೆ. ಹಿಂದೂಸ್ಥಾನದಿಂದ ಇಥಿಯೋಪ್ಯದ ತನಕ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅವನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಭಾರತ (ಇಂಡಿಯಾ) ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇದ್ದ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅರಸ ಅಹಷ್ವೇರೋಷನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಭಾರತ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗಿನ ನೂರ ಇಪ್ಪತ್ತೇಳು ಸಂಸ್ಥಾನಗಳನ್ನು ಅಹಷ್ವೇರೋಷನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:1
10 ತಿಳಿವುಗಳ ಹೋಲಿಕೆ  

ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಂದು ನಡೆದ ಸಂಗತಿಗಳಿವು: ದಾರ್ಯಾವೆಷನು ಅಹಷ್ವೇರೋಷನೆಂಬವನ ಮಗನು. ದಾರ್ಯವೆಷನು ಮೇದ್ಯಯ ವಂಶದವನು. ಅವನು ಕಸ್ದೀಯ ರಾಜ್ಯದ ದೊರೆಯಾದನು.


ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.


ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಜನ ದೇಶಾಧಿಪತಿಗಳನ್ನು ನೇಮಿಸಿದನು.


ಅರಸನ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿರುವ ಯೆಹೂದ್ಯರಿಗೆಲ್ಲಾ ಪತ್ರವನ್ನು ಕಳುಹಿಸಿದನು. ಅದರಲ್ಲಿ ಆ ಹಬ್ಬವು ಜನರ ಮಧ್ಯದಲ್ಲಿ ಸಮಾಧಾನ ಹುಟ್ಟಿಸಿ ಒಬ್ಬರಮೇಲೊಬ್ಬರ ಮೇಲೆ ನಂಬಿಕೆ ಬೆಳೆಸುವುದು ಎಂದು ಬರೆದಿದ್ದನು.


ಆ ಶತ್ರುಗಳು ಪರ್ಶಿಯ ರಾಜನಿಗೆ ಪತ್ರವನ್ನು ಬರೆದು ದೇವಾಲಯವನ್ನು ಕಟ್ಟುವ ಕಾರ್ಯವನ್ನು ನಿಲ್ಲಿಸಬೇಕೆಂದು ಬೇಡಿಕೊಂಡರು. ಅಹಷ್ವೇರೋಷನು ಪರ್ಶಿಯ ದೇಶದ ಅರಸನಾದಾಗ ಅವನಿಗೆ ಪತ್ರ ಬರೆದರು.


ಇಥಿಯೋಪ್ಯದ ನದಿಯ ದಡದಲ್ಲಿರುವ ಪ್ರಾಂತ್ಯಗಳನ್ನು ಗಮನಿಸಿರಿ. ಆ ಪ್ರಾಂತ್ಯವು ಕ್ರಿಮಿಕೀಟಗಳಿಂದ ತುಂಬಿದೆ. ಅವುಗಳ ರೆಕ್ಕೆಗಳ ಝೇಂಕಾರವನ್ನು ನೀವು ಕೇಳಬಹುದು.


ರಾಜನು ತನ್ನ ಸಾಮ್ರಾಜ್ಯದ ಪ್ರತಿಯೊಂದು ಪ್ರಾಂತ್ಯದಲ್ಲೂ ನಾಯಕರುಗಳನ್ನು ಆರಿಸಲಿ. ಆ ನಾಯಕರು ಅತ್ಯಂತ ರೂಪವತಿಯರಾದ ಕನ್ನಿಕೆಯರನ್ನು ಶೂಷನ್ ರಾಜಧಾನಿಗೆ ಕರೆದುಕೊಂಡು ಬಂದು ಅವರನ್ನು ರಾಜನ ಸ್ತ್ರೀಯರೊಡನೆ ಇರಿಸಲಿ. ಆ ಸ್ತ್ರೀಯರು ಮೇಲ್ವಿಚಾರಕನಾದ ರಾಜನ ಕಂಚುಕಿ ಹೇಗೈಯ ಪರಿಪಾಲನೆಯಲ್ಲಿರಲಿ. ಬಳಿಕ ಅವರಿಗೆ ಸೌಂದರ್ಯವರ್ಧಕ ಚಿಕಿತ್ಸೆ ಕೊಡಲಿ.


ಅಹಷ್ವೇರೋಷ್ ರಾಜನು ತನ್ನ ಪ್ರಜೆಗಳಿಂದ ತೆರಿಗೆಯನ್ನು ಎತ್ತಿದನು. ಅವನ ಸಾಮ್ರಾಜ್ಯದ ಪ್ರಜೆಗಳೆಲ್ಲರೂ ಹಾಗೂ ದೂರದ ಕರಾವಳಿಯ ನಗರವಾಸಿಗಳೂ, ತೆರಿಗೆಯನ್ನು ಕಟ್ಟಬೇಕಾಯಿತು.


“ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ರಾಜರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ರಾಜರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು