Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:4 - ಪರಿಶುದ್ದ ಬೈಬಲ್‌

4 ಔತಣ ಸಮಾರಂಭವು ನೂರೆಂಭತ್ತು ದಿವಸಗಳ ತನಕ ಮುಂದುವರೆಯಿತು. ಆ ಸಮಯದಲ್ಲಿ ತನ್ನ ರಾಜ್ಯದ ಸಕಲ ವೈಭವವನ್ನೂ ಅರಮನೆಯ ಐಶ್ವರ್ಯವನ್ನೂ ಅತಿಥಿಗಳಿಗೆ ಪ್ರದರ್ಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಅನೇಕ ದಿನ ಅಂದರೆ, ನೂರ ಎಂಭತ್ತು ದಿನಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮತ್ತು ಮಹಾಮಹಿಮೆಯ ವೈಭವದ ಪ್ರತಾಪಗಳನ್ನೂ ಪ್ರದರ್ಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅರಸನು ತನ್ನ ಘನರಾಜ್ಯದ ಸಿರಿಸಂಪತ್ತನ್ನು, ವೈಭವವನ್ನು ಹಾಗು ರಾಜ್ಯದ ಆಡಂಬರವನ್ನು ಅವರೆಲ್ಲರ ಮುಂದೆ ಬಹುದಿನಗಳವರೆಗೆ ಅಂದರೆ, ನೂರೆಂಬತ್ತು ದಿನಗಳವರೆಗೆ ಪ್ರದರ್ಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಅನೇಕ ದಿವಸ ಅಂದರೆ ನೂರೆಂಭತ್ತು ದಿವಸಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮಹಾಮಹಿಮೆಯ ವೈಭವಗಳನ್ನೂ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ನೂರ ಎಂಬತ್ತು ದಿವಸಗಳವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ವೈಭವ ಹಾಗು ಆಡಂಬರವನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:4
25 ತಿಳಿವುಗಳ ಹೋಲಿಕೆ  

ನೀನು ದೇವರಂತಿದ್ದರೆ ಹೆಮ್ಮೆಪಡು! ನೀನು ದೇವರಂತಿದ್ದರೆ ಘನತೆಯನ್ನೂ ಮಹಿಮೆಯನ್ನೂ ವಸ್ತ್ರಗಳಂತೆ ಧರಿಸಿಕೋ.


“ನಮ್ಮ ಪ್ರಭುವೇ, ನಮ್ಮ ದೇವರೇ! ನೀನು ಪ್ರಭಾವ, ಗೌರವ, ಅಧಿಕಾರಗಳನ್ನು ಪಡೆಯಲು ಯೋಗ್ಯನಾಗಿರುವೆ. ಎಲ್ಲವನ್ನೂ ನಿರ್ಮಿಸಿದಾತನು ನೀನೇ. ನಿನ್ನ ಚಿತ್ತದಂತೆಯೇ ಎಲ್ಲವೂ ಇದ್ದವು; ಎಲ್ಲವೂ ಸೃಷ್ಟಿಗೊಂಡವು.”


ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.


ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ.


ದೇವರು ತನ್ನ ಅತಿಶಯವಾದ ಮಹಿಮೆಯನ್ನು ತೋರ್ಪಡಿಸಬೇಕೆಂದು ತಾಳ್ಮೆಯಿಂದ ಕಾದುಕೊಂಡಿದ್ದನು. ತನ್ನ ಕರುಣೆಯನ್ನು ಹೊಂದಿಕೊಳ್ಳುವ ಜನರಿಗೆ ದೇವರು ಆ ಮಹಿಮೆಯನ್ನು ಕೊಡಬೇಕೆಂದಿದ್ದನು. ತನ್ನ ಮಹಿಮೆಯನ್ನು ಹೊಂದಿಕೊಳ್ಳಲೆಂದು ದೇವರು ಆ ಜನರನ್ನು ಸಿದ್ಧಪಡಿಸಿದನು.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ಬಳಿಕ ಸೈತಾನನು ಯೇಸುವನ್ನು ಎತ್ತರವಾದ ಬೆಟ್ಟದ ತುದಿಗೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಮತ್ತು ಅವುಗಳ ವೈಭವವನ್ನು ತೋರಿಸಿ,


“ರಾಜನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನನ್ನು ಮಹಾ ದೊಡ್ಡ ರಾಜನನ್ನಾಗಿಯೂ ಬಲಿಷ್ಠನಾದ ರಾಜನನ್ನಾಗಿಯೂ ಪ್ರಮುಖನಾದ ರಾಜನನ್ನಾಗಿಯೂ ಮಾಡಿದ್ದನು.


ಆಗ ದೇವರು ನನಗೆ ಸರಿಯಾದ ಬುದ್ಧಿಯನ್ನು ಕೊಟ್ಟನು. ನನಗೆ ರಾಜನ ಗೌರವ, ಪ್ರಭಾವ, ವೈಭವಗಳು ಮತ್ತೆ ಲಭಿಸಿದವು. ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸ್ವೀಕರಿಸಿದರು. ನಾನು ಮತ್ತೆ ಅರಸನಾದೆನು. ನಾನು ಮೊದಲಿಗಿಂತಲೂ ಅಧಿಕ ಶಕ್ತಿಶಾಲಿಯಾದ ಮತ್ತು ಪ್ರಭಾವಶಾಲಿಯಾದ ಅರಸನಾದೆನು.


ನಿನ್ನ ವ್ಯಾಪಾರದ ಜಾಣತನದಿಂದ ನಿನ್ನ ಐಶ್ವರ್ಯವು ಬೆಳೆಯುವಂತೆ ಮಾಡಿದ್ದೀ. ಆ ಐಶ್ವರ್ಯದ ಕಾರಣದಿಂದ ನೀನು ಹೆಮ್ಮೆಯಿಂದ ತುಂಬಿರುತ್ತೀ.


ಅವುಗಳನ್ನು ನೋಡಿ ಹಿಜ್ಕೀಯನಿಗೆ ಬಹು ಸಂತೋಷವಾಯಿತು. ಅವನು ಬಾಬಿಲೋನಿನ ದೂತರಿಗೆ ತನ್ನ ಅರಮನೆಯ ಉಗ್ರಾಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನೂ ತಾನು ಕೊಡಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೂ ಸಾಂಬಾರ ಪದಾರ್ಥಗಳನ್ನೂ ಮತ್ತು ಸುಗಂಧದ್ರವ್ಯಗಳನ್ನೂ ತೋರಿಸಿದನು. ಅಲ್ಲದೆ ಯುದ್ಧದಲ್ಲಿ ಉಪಯೋಗಿಸುವ ಖಡ್ಗಗಳನ್ನು, ಗುರಾಣಿಗಳನ್ನು ತೋರಿಸಿದನು; ಅಲ್ಲದೆ ತನ್ನ ರಾಜ್ಯದಲ್ಲಿರುವ ಪ್ರತಿಯೊಂದು ವಿಷಯಗಳನ್ನು ಅವರಿಗೆ ಪ್ರದರ್ಶಿಸಿದನು.


ನಿನ್ನ ಪ್ರಭಾವವುಳ್ಳ ಮಹಿಮೆಯ ಕುರಿತು ಜನರು ಹೇಳುವರು. ನಾನು ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವೆನು.


ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ.


ನಿನ್ನ ಖಡ್ಗವನ್ನು ಕಟ್ಟಿಕೊ. ನಿನ್ನ ಮಹಿಮಾವಸ್ತ್ರವನ್ನು ಧರಿಸಿಕೊ.


ನೀನು ರಾಜನಿಗೆ ಜಯವನ್ನು ದೊರಕಿಸಿ ಅವನಿಗೆ ಗೌರವವನ್ನೂ ಹೊಗಳಿಕೆಯನ್ನೂ ಬರಮಾಡಿದೆ.


ಯೆಹೋವನು ಸೊಲೊಮೋನನನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು. ಇಸ್ರೇಲಿನಲ್ಲಿದ್ದ ಯಾವ ಅರಸನಿಗೂ ಸೊಲೊಮೋನನಿಗಿದ್ದಷ್ಟು ಗೌರವವೂ ವೈಭವವೂ ಇರಲಿಲ್ಲ.


ತನ್ನ ಆಳ್ವಿಕೆಯ ಮೂರನೆ ವರ್ಷದಲ್ಲಿ ರಾಜ್ಯದ ಅಧಿಕಾರಿಗಳಿಗೂ ನಾಯಕರುಗಳಿಗೂ ಒಂದು ಔತಣವನ್ನು ಏರ್ಪಡಿಸಿದನು. ಮೇದ್ಯ. ಪರ್ಶಿಯದ ಎಲ್ಲಾ ಸೈನ್ಯಾಧಿಕಾರಿಗಳೂ ಪ್ರಧಾನರೂ ಔತಣದಲ್ಲಿ ಭಾಗವಹಿಸಿದ್ದರು.


ಆ ನೂರೆಂಭತ್ತು ದಿವಸಗಳು ಕಳೆದ ಬಳಿಕ ಅಹಷ್ವೇರೋಷನು ಮತ್ತೆ ಇನ್ನೊಂದು ಔತಣವನ್ನು ಒಂದು ವಾರದ ತನಕ ಮುಂದುವರಿಸಿದನು. ಇದು ಅರಮನೆಯ ಒಳ ಉದ್ಯಾನವನದಲ್ಲಿ ನಡೆಯಿತು. ಇದಕ್ಕೆ ಶೂಷನ್ ನಗರದಿಂದ ಗಣ್ಯರು, ಸಾಮಾನ್ಯರು ಎಂಬ ಭೇದಭಾವವಿಲ್ಲದೆ ಎಲ್ಲರೂ ಆಮಂತ್ರಿಸಲ್ಪಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು