Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:15 - ಪರಿಶುದ್ದ ಬೈಬಲ್‌

15 ರಾಜನ ಬಳಿಗೆ ಹೋಗಲು ಎಸ್ತೇರಳ ಸರದಿ ಬಂದಾಗ ಆಕೆ ಏನನ್ನೂ ಕೇಳಿಕೊಳ್ಳಲಿಲ್ಲ. ತಾನು ಏನನ್ನು ತೆಗೆದುಕೊಂಡು ಹೋಗಬೇಕೆಂದು ರಾಜನ ಸ್ತ್ರೀಯರ ಮೇಲ್ವಿಚಾರಕನಾಗಿದ್ದ ರಾಜಕಂಚುಕಿ ಹೇಗೈನನ್ನು ಮಾತ್ರ ಕೇಳಿದಳು. (ಎಸ್ತೇರಳು ಮೊರ್ದೆಕೈಯ ಚಿಕ್ಕಪ್ಪ ಅಭೀಹೈಲನ ಮಗಳೂ ತನ್ನ ಸಾಕು ಮಗಳೂ ಆಗಿದ್ದಳು.) ಎಸ್ತೇರಳನ್ನು ನೋಡಿದವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನ ಬಳಿಗೆ ಹೋಗುವುದಕ್ಕೆ ಮೊರ್ದೆಕೈಯ ದತ್ತುಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇಮಿಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹೀಗೆ ಅರಸನ ಬಳಿಗೆ ಹೋಗಲು ಮೊರ್ದೆಕೈಯ ದತ್ತುಮಗಳೂ ಅವನ ಚಿಕ್ಕಪ್ಪನಾದಅಬಿಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರಪಾಲಕ ಹೇಗೈ ಎಂಬ ರಾಜಕಂಚುಕಿ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ನೋಡಿದವರೆಲ್ಲರೂ ಆಕೆಯನ್ನು ಬಹುವಾಗಿ ಮೆಚ್ಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅರಸನ ಬಳಿಗೆ ಹೋಗುವದಕ್ಕೆ ಮೊರ್ದೆಕೈಯ ದತ್ತಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರತಿ ಬಂದಾಗ ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇವಿುಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮೊರ್ದೆಕೈಯ ದತ್ತುಮಗಳೂ, ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ, ಸ್ತ್ರೀಯರ ಪಾಲಕನೂ ರಾಜಕಂಚುಕಿಯೂ ಆದ ಹೇಗೈ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದಲೂ ದಯೆಹೊಂದಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:15
10 ತಿಳಿವುಗಳ ಹೋಲಿಕೆ  

ಆದರೆ ನನ್ನ ಪಾರಿವಾಳವೂ ನಿರ್ಮಲೆಯೂ ಒಬ್ಬಳೇ ಒಬ್ಬಳು. ಆಕೆಯು ತನ್ನ ತಾಯಿಗೆ ಅಚ್ಚುಮೆಚ್ಚಿನವಳು. ಯುವತಿಯರು ಆಕೆಯನ್ನು ಕಂಡು ಹೊಗಳುವರು. ಹೌದು, ರಾಣಿಯರೂ ಉಪಪತ್ನಿಯರೂ ಆಕೆಯನ್ನು ಹೊಗಳುವರು.


ರಾಜನು ತನ್ನ ಸಾಮ್ರಾಜ್ಯದ ಪ್ರತಿಯೊಂದು ಪ್ರಾಂತ್ಯದಲ್ಲೂ ನಾಯಕರುಗಳನ್ನು ಆರಿಸಲಿ. ಆ ನಾಯಕರು ಅತ್ಯಂತ ರೂಪವತಿಯರಾದ ಕನ್ನಿಕೆಯರನ್ನು ಶೂಷನ್ ರಾಜಧಾನಿಗೆ ಕರೆದುಕೊಂಡು ಬಂದು ಅವರನ್ನು ರಾಜನ ಸ್ತ್ರೀಯರೊಡನೆ ಇರಿಸಲಿ. ಆ ಸ್ತ್ರೀಯರು ಮೇಲ್ವಿಚಾರಕನಾದ ರಾಜನ ಕಂಚುಕಿ ಹೇಗೈಯ ಪರಿಪಾಲನೆಯಲ್ಲಿರಲಿ. ಬಳಿಕ ಅವರಿಗೆ ಸೌಂದರ್ಯವರ್ಧಕ ಚಿಕಿತ್ಸೆ ಕೊಡಲಿ.


ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.


ಹಾಗೆ, ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಮತ್ತು ಯೆಹೂದಿಯಾದ ಮೊರ್ದೆಕೈಯು ಈ ಪೂರಿಮ್ ಹಬ್ಬದ ಬಗ್ಗೆ ಒಂದು ಅಧಿಕೃತ ಪತ್ರವನ್ನು ಬರೆಯಿಸಿದರು. ಜನರು ಅವರ ಎರಡನೆಯ ಪತ್ರವನ್ನು ಸತ್ಯವೆಂದು ನಂಬುವ ಹಾಗೆ ರಾಜಮುದ್ರೆಯೊಂದಿಗೆ ಕಳುಹಿಸಿದರು.


ನಾನು ಕೋಟೆ; ನನ್ನ ಸ್ತನಗಳೇ ಅದರ ಗೋಪುರಗಳು. ಹೀಗೆ ಸೊಲೊಮೋನನು ನನ್ನಲ್ಲಿ ತೃಪ್ತನಾದನು.


ಮುಸ್ಸಂಜೆಯ ಸಮಯದಲ್ಲಿ ಕನ್ಯೆಯು ರಾಜನಿವಾಸವನ್ನು ಪ್ರವೇಶಿಸುವಳು. ಮರುದಿವಸ ಮುಂಜಾನೆ ಆಕೆಯು ಅಲ್ಲಿಂದ ಹಿಂತಿರುಗಿ ರಾಜನ ಉಪಪತ್ನಿಯರು ಉಳಿದುಕೊಳ್ಳುವ ಅಂತಃಪುರದ ಇನ್ನೊಂದು ಭಾಗದಲ್ಲಿ ನೆಲೆಸುವಳು. ಅಲ್ಲಿ ಆಕೆ ರಾಜನ ಕಂಚುಕಿ ಶವಷ್ಗಜನ ಮೇಲ್ವಿಚಾರಣೆಯಲ್ಲಿರುವಳು. ಶವಷ್ಗಜನು ರಾಜನ ಉಪಪತ್ನಿಗಳ ಮೇಲ್ವಿಚಾರಕನಾಗಿದ್ದನು. ರಾಜನು ಆಕೆಯ ಹೆಸರೆತ್ತಿ ಕರೆದಾಗ ಮಾತ್ರವೇ ಆಕೆಯು ತಿರುಗಿ ರಾಜನ ಬಳಿಗೆ ಹೋಗುವಳು. ಕರೆಯದಿದ್ದಲ್ಲಿ ಆಕೆಯು ಅಲ್ಲಿಯೇ ಇರುವಳು.


ಹೀಗೆ ಹತ್ತನೇ ತಿಂಗಳಾದ ಟೆಬೇತ್ ಮಾಸದಲ್ಲಿ ರಾಜನ ಏಳನೇ ವರ್ಷದಲ್ಲಿ ಎಸ್ತೇರಳು ಅಹಷ್ವೇರೋಷನ ರಾಜನಿವಾಸಕ್ಕೆ ಕರೆದೊಯ್ಯಲ್ಪಟ್ಟಳು.


ಅದೇ ದಿವಸದಲ್ಲಿ ರಾಜ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಆಸ್ತಿಪಾಸ್ತಿಗಳನ್ನೆಲ್ಲಾ ರಾಣಿ ಎಸ್ತೇರಳಿಗೆ ಕೊಟ್ಟನು. ಎಸ್ತೇರ್ ರಾಣಿಯು ಅರಸನಿಗೆ, “ಮೊರ್ದೆಕೈ ತನ್ನ ಸೋದರಣ್ಣನಾಗ ಬೇಕು” ಎಂದಳು. ನಂತರ ಮೊರ್ದೆಕೈಯು ಅರಸನನ್ನು ಕಾಣಲು ಬಂದನು.


ಯೆಹೋವನಲ್ಲಿ ಭಯಭಕ್ತಿಯುಳ್ಳವನು ಜ್ಞಾನಿಯಾಗುತ್ತಿದ್ದಾನೆ. ಸನ್ಮಾನ ಹೊಂದಬೇಕೆನ್ನುವವನು ಮೊದಲು ದೀನನಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು