16 ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳಿಕೆಯ ಏಳನೆಯ ವರುಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರತಂದರು. ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು.
ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.
ರಾಜನು ತನ್ನ ಸಾಮ್ರಾಜ್ಯದ ಪ್ರತಿಯೊಂದು ಪ್ರಾಂತ್ಯದಲ್ಲೂ ನಾಯಕರುಗಳನ್ನು ಆರಿಸಲಿ. ಆ ನಾಯಕರು ಅತ್ಯಂತ ರೂಪವತಿಯರಾದ ಕನ್ನಿಕೆಯರನ್ನು ಶೂಷನ್ ರಾಜಧಾನಿಗೆ ಕರೆದುಕೊಂಡು ಬಂದು ಅವರನ್ನು ರಾಜನ ಸ್ತ್ರೀಯರೊಡನೆ ಇರಿಸಲಿ. ಆ ಸ್ತ್ರೀಯರು ಮೇಲ್ವಿಚಾರಕನಾದ ರಾಜನ ಕಂಚುಕಿ ಹೇಗೈಯ ಪರಿಪಾಲನೆಯಲ್ಲಿರಲಿ. ಬಳಿಕ ಅವರಿಗೆ ಸೌಂದರ್ಯವರ್ಧಕ ಚಿಕಿತ್ಸೆ ಕೊಡಲಿ.
ರಾಜನ ಬಳಿಗೆ ಹೋಗಲು ಎಸ್ತೇರಳ ಸರದಿ ಬಂದಾಗ ಆಕೆ ಏನನ್ನೂ ಕೇಳಿಕೊಳ್ಳಲಿಲ್ಲ. ತಾನು ಏನನ್ನು ತೆಗೆದುಕೊಂಡು ಹೋಗಬೇಕೆಂದು ರಾಜನ ಸ್ತ್ರೀಯರ ಮೇಲ್ವಿಚಾರಕನಾಗಿದ್ದ ರಾಜಕಂಚುಕಿ ಹೇಗೈನನ್ನು ಮಾತ್ರ ಕೇಳಿದಳು. (ಎಸ್ತೇರಳು ಮೊರ್ದೆಕೈಯ ಚಿಕ್ಕಪ್ಪ ಅಭೀಹೈಲನ ಮಗಳೂ ತನ್ನ ಸಾಕು ಮಗಳೂ ಆಗಿದ್ದಳು.) ಎಸ್ತೇರಳನ್ನು ನೋಡಿದವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.
ಎಲ್ಲಾ ಕನ್ಯೆಯರಿಗಿಂತ ರಾಜನು ಎಸ್ತೇರಳನ್ನು ಬಹಳವಾಗಿ ಪ್ರೀತಿಸಿದನು. ಆಕೆ ಅವನ ಮೆಚ್ಚಿಕೆಗೆ ಪಾತ್ರಳಾದಳು. ಎಲ್ಲಾ ಕನ್ಯೆಯರಲ್ಲಿ ಅವಳನ್ನು ಮಾತ್ರ ರಾಜನು ಹೆಚ್ಚಾಗಿ ಇಷ್ಟಪಟ್ಟನು. ಅರಸನಾದ ಅಹಷ್ವೇರೋಷನು ರಾಜ ಕಿರೀಟವನ್ನು ಆಕೆಯ ತಲೆಯ ಮೇಲಿರಿಸಿ ವಷ್ಟಿಯ ಬದಲಾಗಿ ಎಸ್ತೇರಳನ್ನು ತನ್ನ ರಾಣಿಯನ್ನಾಗಿ ಮಾಡಿದನು.
ಆ ಶತ್ರುಗಳು ಪರ್ಶಿಯ ರಾಜನಿಗೆ ಪತ್ರವನ್ನು ಬರೆದು ದೇವಾಲಯವನ್ನು ಕಟ್ಟುವ ಕಾರ್ಯವನ್ನು ನಿಲ್ಲಿಸಬೇಕೆಂದು ಬೇಡಿಕೊಂಡರು. ಅಹಷ್ವೇರೋಷನು ಪರ್ಶಿಯ ದೇಶದ ಅರಸನಾದಾಗ ಅವನಿಗೆ ಪತ್ರ ಬರೆದರು.