Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:21 - ಪರಿಶುದ್ದ ಬೈಬಲ್‌

21 ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿ ಕುಳಿತುಕೊಂಡಿದ್ದ ಸಮಯದಲ್ಲಿ ಒಂದು ವಿಷಯ ನಡೆಯಿತು. ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ದ್ವಾರಪಾಲಕರು ಅರಸನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಲು ಒಳಸಂಚು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರುದ್ಧವಾಗಿ ಕೈಯೆತ್ತಬೇಕೆಂದು ಒಳಸಂಚು ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ದಿನಗಳಲ್ಲಿ ಮೊರ್ದೆಕೈ, ಎಂದಿನಂತೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದಾಗ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಅರಸನ ವಿರುದ್ಧ ಕೈಯೆತ್ತಬೇಕು ಎಂದು ಒಳಸಂಚು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ಹೆಬ್ಬಾಗಲಿನಲ್ಲಿ ಕೂತುಕೊಂಡಿದ್ದಾಗ ಅರಮನೆಯ ದ್ವಾರಪಾಲಕರಾದ ಬಿಗೆತಾನ್ ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರೋಧವಾಗಿ ಕೈಯೆತ್ತಬೇಕೆಂದು ಒಳಸಂಚುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ಕುಳಿತಿರುವಾಗ, ದ್ವಾರಪಾಲಕರಾದಂಥ ಅರಸನ ರಾಜಕಂಚುಕಿಗಳಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ಅರಸನಾದ ಅಹಷ್ವೇರೋಷನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಬೇಕೆಂದು ಒಳಸಂಚು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:21
13 ತಿಳಿವುಗಳ ಹೋಲಿಕೆ  

ಆ ಸೇವಕನು ರಾಜನಿಗೆ ಪುಸ್ತಕದಿಂದ ಓದುತ್ತಾ ಹೋದನು. ರಾಜನನ್ನು ಕೊಲ್ಲುವ ಒಳಸಂಚಿನ ವಿಚಾರವನ್ನೂ ಕೇಳಿದನು. ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ದ್ವಾರಪಾಲಕರು ರಾಜನನ್ನು ಕೊಲ್ಲಲು ಒಳಸಂಚು ಮಾಡಿದಾಗ ಮೊರ್ದೆಕೈಗೆ ಅದು ತಿಳಿದುಬಂತು. ಕೂಡಲೇ ಅವನು ಬೇರೆಯವರ ಮುಖಾಂತರ ಅರಸನಿಗೆ ತಿಳಿಸಿದನು.


ರಾಜರುಗಳಿಗೆ ಸಹಾಯಮಾಡಿ ಯುದ್ಧಗಳಲ್ಲಿ ಗೆಲ್ಲಿಸುವವನೂ ನೀನೇ. ನಿನ್ನ ಸೇವಕನಾದ ದಾವೀದನನ್ನು ಅವನ ಶತ್ರುಗಳ ಖಡ್ಗಗಳಿಂದ ರಕ್ಷಿಸಿದವನೂ ನೀನೇ.


ಆಮೋನನ ಸೇವಕರು ಅವನ ವಿರುದ್ಧ ಒಳಸಂಚು ಮಾಡಿದರು ಮತ್ತು ಅವನ ಸ್ವಂತ ಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.


ಯೆಹೋವಾಷನ ಅಧಿಕಾರಿಗಳು ಅವನ ವಿರುದ್ಧವಾಗಿ ಸಂಚುಮಾಡಿ ಅವನನ್ನು ಸಿಲ್ಲಾಕ್ಕೆ ಹೋಗುವ ರಸ್ತೆಯಲ್ಲಿದ್ದ ಮಿಲ್ಲೋ ಮನೆಯಲ್ಲಿ ಕೊಂದುಹಾಕಿದರು.


ಜಿಮ್ರಿಯು ಏಲನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು. ಏಲನ ರಥಬಲದ ಅರ್ಧಭಾಗಕ್ಕೆ ಜಿಮ್ರಿಯು ಅಧಿಪತಿ. ಆದರೆ ಏಲನ ವಿರುದ್ಧ ಜಿಮ್ರಿಯು ಸಂಚುಮಾಡಿದನು. ರಾಜನಾದ ಏಲನು ತಿರ್ಚದಲ್ಲಿದ್ದನು. ಅವನು ಅರ್ಚನ ಮನೆಯಲ್ಲಿ ಕುಡಿದು ಮತ್ತನಾದನು. ಅರ್ಚನು ತಿರ್ಚದಲ್ಲಿದ್ದ ಅರಮನೆಯ ಮೇಲ್ವಿಚಾರಕ.


ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ.


ಆ ಶತ್ರುಗಳು ಪರ್ಶಿಯ ರಾಜನಿಗೆ ಪತ್ರವನ್ನು ಬರೆದು ದೇವಾಲಯವನ್ನು ಕಟ್ಟುವ ಕಾರ್ಯವನ್ನು ನಿಲ್ಲಿಸಬೇಕೆಂದು ಬೇಡಿಕೊಂಡರು. ಅಹಷ್ವೇರೋಷನು ಪರ್ಶಿಯ ದೇಶದ ಅರಸನಾದಾಗ ಅವನಿಗೆ ಪತ್ರ ಬರೆದರು.


ಕನ್ಯೆಯರು ಎರಡನೆ ಸಲ ಸಭೆ ಸೇರಿದ್ದಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.


ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಾಬಿಲೋನ್ ಸಂಸ್ಥಾನದ ದೊಡ್ಡ ಅಧಿಕಾರಿಗಳನ್ನಾಗಿ ನೇಮಿಸಬೇಕೆಂದು ದಾನಿಯೇಲನು ಅರಸನನ್ನು ಕೇಳಿಕೊಂಡನು. ದಾನಿಯೇಲನು ಹೇಳಿದಂತೆ ಅರಸನು ಮಾಡಿದನು. ದಾನಿಯೇಲನು ಅರಸನ ಸನ್ನಿಧಿಯಲ್ಲಿರುವ ಪ್ರಮುಖರಲ್ಲಿ ಒಬ್ಬನಾದನು.


ಆ ರಾತ್ರಿ ಅರಸನಿಗೆ ನಿದ್ರಿಸಲಾಗಲಿಲ್ಲ. ಒಬ್ಬ ಸೇವಕನನ್ನು ಕರೆದು ರಾಜಕಾಲವೃತ್ತಾಂತ ಪುಸ್ತಕವನ್ನು ತರಹೇಳಿ ಅವನಿಂದ ಅದನ್ನು ಓದಿಸಿದನು. (ಈ ಪುಸ್ತಕದಲ್ಲಿ ಅರಸರ ರಾಜ್ಯ ಆಳ್ವಿಕೆಯಲ್ಲಿ ನಡೆದ ಘಟನೆಗಳು ಲಿಖಿತವಾಗಿರುತ್ತದೆ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು