Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:14 - ಪರಿಶುದ್ದ ಬೈಬಲ್‌

14 ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಲ್ಪಡಬೇಕು ಅಲ್ಲದೆ ಆ ದಿನಕ್ಕಾಗಿ ಎಲ್ಲಾ ಜನರೂ ಸಿದ್ಧರಾಗಿರಬೇಕೆಂಬುದಾಗಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದು ಮಾತ್ರವಲ್ಲದೆ, “ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಹೊರಡಿಸಿ ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಎಲ್ಲಾ ಜನರಿಗೆ ತಿಳಿಯುವಂತೆ ಪ್ರಕಟಿಸಬೇಕು” ಎಂದು ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರ ಆಸ್ತಿಯನ್ನು ಕೊಳ್ಳೆಹೊಡೆಯಿರಿ. ಎಲ್ಲರೂ ಆ ದಿನಕ್ಕೆ ಸಿದ್ಧರಾಗಿರುವಂತೆ ಈ ಪತ್ರದ ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲೂ ರಾಜಾಜ್ಞೆಯಂತೆ ಪ್ರಕಟವಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿಯೂ ಪ್ರಕಟಿಸಲ್ಪಡಬೇಕು ಎಂದೂ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಪ್ರತಿ ಪ್ರಾಂತದಲ್ಲಿಯೂ ರಾಜಾಜ್ಞೆ ಜಾರಿಗೆ ತರುವುದರಲ್ಲಿ ಇತ್ತು. ರಾಜಾಜ್ಞೆಯಾಗಿ ಬರೆದ ಪತ್ರದ ಪ್ರತಿಯಲ್ಲಿ ಎಲ್ಲಾ ಜನರಲ್ಲಿಯೂ ಜಾರಿಗೆ ತರಲು ಪ್ರಕಟಿಸಬೇಕೆಂದು ಸಹ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:14
2 ತಿಳಿವುಗಳ ಹೋಲಿಕೆ  

ಯೆಹೂದ್ಯರನ್ನು ಕೊಲ್ಲಬೇಕೆಂಬುವ ಅರಸನ ಆಜ್ಞಾಪತ್ರದ ಒಂದು ಪ್ರತಿಯನ್ನು ಹತಾಕನ ಕೈಯಲ್ಲಿ ಮೊರ್ದೆಕೈ ಕೊಟ್ಟನು. ಈ ಆಜ್ಞಾಪತ್ರವನ್ನು ಶೂಷನ್ ನಗರದ ಎಲ್ಲೆಡೆಯಲ್ಲಿಯೂ ಕಳುಹಿಸಲ್ಪಟ್ಟಿತ್ತು. ಹತಾಕನು ಆ ಪ್ರತಿಯನ್ನು ಎಸ್ತೇರಳಿಗೆ ತೋರಿಸಿ ಎಲ್ಲವನ್ನು ವಿವರಿಸಬೇಕೆಂದು ಮೊರ್ದೆಕೈ ಉದ್ದೇಶಿಸಿದನು. ಅಷ್ಟೇ ಅಲ್ಲ. ಎಸ್ತೇರ್ ರಾಣಿ ಅರಸನ ಬಳಿಗೆ ಹೋಗಿ ತನಗೂ ಆಕೆಯ ಜನರಿಗೂ ದಯೆ ತೋರಿಸಲು ಅರಸನೊಡನೆ ಬೇಡಲಿ ಎಂದು ಹತಾಕನೊಡನೆ ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು