ಎಸ್ತೇರಳು 3:15 - ಪರಿಶುದ್ದ ಬೈಬಲ್15 ರಾಜನ ಆಜ್ಞೆಯ ಪ್ರಕಾರ ಸಂದೇಶವಾಹಕರು ದೇಶದೇಶಗಳಿಗೆ ಚದರಿದರು. ರಾಜಧಾನಿಯಾದ ಶೂಷನ್ ನಗರದಲ್ಲೂ ಆ ಸಂದೇಶವನ್ನು ಪ್ರಕಟಿಸಲಾಯಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತರು. ಆದರೆ ರಾಜಧಾನಿಯಲ್ಲಿನ ಜನರು ಗಲಿಬಿಲಿಗೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೆ ಅಂಚೆಯವರು ರಾಜಾಜ್ಞೆಯ ಮೇರೆಗೆ ತ್ವರಿತವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಮದ್ಯಪಾನ ಮಾಡಲು ಕುಳಿತುಕೊಂಡನು. ಅತ್ತ ಶೂಷನ್ ನಗರದಲ್ಲಿ ಎಲ್ಲೆಲ್ಲೂ ತಳಮಳ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈ ನಿರ್ಣಯವು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಸುರಾಪಾನ ಮಾಡುವದಕ್ಕೆ ಕೂತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನಿನ ಅರಮನೆಯಲ್ಲಿಂದ ಆ ಆಜ್ಞೆಯು ಹೊರಡಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವೋ ತಳಮಳಗೊಂಡಿತ್ತು. ಅಧ್ಯಾಯವನ್ನು ನೋಡಿ |
ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.