Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:14 - ಪರಿಶುದ್ದ ಬೈಬಲ್‌

14 ನೀನು ಈಗ ಸುಮ್ಮನಿದ್ದರೆ ಯೆಹೂದ್ಯರಿಗೆ ಸಹಾಯವೂ ಸ್ವಾತಂತ್ರ್ಯವೂ ಬೇರೆ ದಿಕ್ಕಿನಿಂದ ಬರುವವು. ಆದರೆ ನೀನೂ ನಿನ್ನ ತಂದೆಯ ಬಳಗದವರೆಲ್ಲರೂ ಸಾಯುವರು. ಇಂಥ ಸಮಯದಲ್ಲಿ ನೀನು ರಾಣಿಯಾಗಿ ಆಯ್ಕೆಯಾದದ್ದು ಇದಕ್ಕೋಸ್ಕರವೋ ಎಂದು ಯಾರಿಗೆ ಹೇಳಲು ಸಾಧ್ಯ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀನೀಗ ಸುಮ್ಮನಿದ್ದುಬಿಟ್ಟರೆ ಬೇರಾವ ಕಡೆಯಿಂದಲೂ ಯೆಹೂದ್ಯರಿಗೆ ಸಹಾಯವಾಗಲಿ, ವಿಮೋಚನೆಯಾಗಲಿ ದೊರಕದು. ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗಿಹೋಗುವೆ. ಇದಲ್ಲದೆ ಇಂಥ ಸಂದರ್ಭಕ್ಕಾಗಿಯೇ ನೀನು ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು?” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ಈಗ ಸುಮ್ಮನಿದ್ದು ಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:14
31 ತಿಳಿವುಗಳ ಹೋಲಿಕೆ  

“ಆದರೆ ಯೆಹೋವನು ತನ್ನ ಜನರನ್ನು ಕೈಬಿಡುವುದಿಲ್ಲ. ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನರನ್ನಾಗಿ ಮಾಡಿಕೊಳ್ಳಲು ಇಷ್ಟಪಟ್ಟನು. ಆದ್ದರಿಂದ ಆತನು ತನ್ನ ಮಹಾ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ತ್ಯಜಿಸುವುದಿಲ್ಲ.


“ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.


“ಯೆಹೋವನು ತನ್ನ ಜನರಿಗೆ ನ್ಯಾಯತೀರಿಸುವನು. ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರುವನು. ಅವರ ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲಿ ಸ್ವತಂತ್ರರಾಗಿರಲಿ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು.


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”


ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”


ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ.


ರಾಜನ ಬಳಿಗೆ ಹೋಗಲು ಎಸ್ತೇರಳ ಸರದಿ ಬಂದಾಗ ಆಕೆ ಏನನ್ನೂ ಕೇಳಿಕೊಳ್ಳಲಿಲ್ಲ. ತಾನು ಏನನ್ನು ತೆಗೆದುಕೊಂಡು ಹೋಗಬೇಕೆಂದು ರಾಜನ ಸ್ತ್ರೀಯರ ಮೇಲ್ವಿಚಾರಕನಾಗಿದ್ದ ರಾಜಕಂಚುಕಿ ಹೇಗೈನನ್ನು ಮಾತ್ರ ಕೇಳಿದಳು. (ಎಸ್ತೇರಳು ಮೊರ್ದೆಕೈಯ ಚಿಕ್ಕಪ್ಪ ಅಭೀಹೈಲನ ಮಗಳೂ ತನ್ನ ಸಾಕು ಮಗಳೂ ಆಗಿದ್ದಳು.) ಎಸ್ತೇರಳನ್ನು ನೋಡಿದವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.


“ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ.


ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. ಆ ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತು ಕೊಡುವರು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”


ಇವನ ಬಳಿಯಲ್ಲಿ ಇವನ ಚಿಕ್ಕಪ್ಪನ ಮಗಳಾದ ಹದೆಸ್ಸಾ ಎಂಬ ಕನ್ನಿಕೆ ಇದ್ದಳು. ಈಕೆ ತಂದೆಯೂ ತಾಯಿಯೂ ಇಲ್ಲದ ತಬ್ಬಲಿಯಾಗಿದ್ದಳು. ಈಕೆಯ ತಂದೆತಾಯಿಗಳು ಸತ್ತಂದಿನಿಂದ ಈಕೆಯನ್ನು ಮೊರ್ದೆಕೈಯು ತನ್ನ ಮಗಳನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಹದೆಸ್ಸಾಳನ್ನು ಎಸ್ತೇರ್ ಎಂಬ ಹೆಸರಿನಿಂದಲೂ ಕರೆಯುತ್ತಿದ್ದರು. ತುಂಬಾ ಸೌಂದರ್ಯವತಿಯಾಗಿದ್ದ ಈಕೆ ಆಕರ್ಷಕಳಾಗಿದ್ದಳು.


ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.


ಆದರೆ ನಾನು ಶೆಮಾಯನಿಗೆ, “ನನ್ನಂಥ ಪುರುಷನು ಓಡಿಹೋಗಬೇಕೆ? ನನ್ನಂಥ ಸಾಮಾನ್ಯ ವ್ಯಕ್ತಿ ದೇವಾಲಯಕ್ಕೆ ಹೋಗಿ ಅವಿತುಕೊಳ್ಳಬಾರದು. ನಾನು ಬರುವುದಿಲ್ಲ” ಎಂದು ಹೇಳಿದೆನು.


ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ, ಇಂದು ಮಹಾಕಷ್ಟದ ದಿನವಾಗಿದೆ. ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಇದು ಪ್ರಸವವೇದನೆಯ ದಿನದಂತಿದೆ. ಆದರೆ ಹೆರಲು ಶಕ್ತಿಯೇ ಇಲ್ಲವಾಗಿದೆ.


ಅದಕ್ಕೆ ದಾವೀದನು, “ನಾನೇನು ಮಾಡಿದೆ? ನಾನು ಯಾವ ತಪ್ಪನ್ನೂ ಮಾಡಲಿಲ್ಲ. ನಾನು ಕೇವಲ ಮಾತನಾಡುತ್ತಿದ್ದೆ” ಎಂದು ಹೇಳಿದನು.


“ಇದನ್ನು ಮಾಡಿದವರು ಯಾರು?” ಎಂದು ಫಿಲಿಷ್ಟಿಯರು ವಿಚಾರಿಸಿದರು. ಒಬ್ಬನು, “ತಿಮ್ನಾ ನಗರದವನ ಅಳಿಯನಾದ ಸಂಸೋನನು ಇದನ್ನು ಮಾಡಿದನು. ಸಂಸೋನನ ಮಾವನು ಸಂಸೋನನ ಹೆಂಡತಿಯನ್ನು ಮದುವೆಯಲ್ಲಿದ್ದ ಉತ್ತಮ ಪುರುಷನೊಬ್ಬನಿಗೆ ಮದುವೆಮಾಡಿಕೊಟ್ಟಿದ್ದಕ್ಕಾಗಿ ಅವನು ಹೀಗೆಲ್ಲಾ ಮಾಡಿದನು” ಎಂದು ಹೇಳಿದನು. ಆಗ ಫಿಲಿಷ್ಟಿಯರು ಸಂಸೋನನ ಹೆಂಡತಿಯನ್ನು ಮತ್ತು ಅವಳ ತಂದೆಯನ್ನು ಸುಟ್ಟುಹಾಕಿದರು.


ಉಸಿರೆಳೆದುಕೊಳ್ಳಲೂ ಬಿಡುವು ನೀಡದೆ ಕಷ್ಟದ ಮೇಲೆ ಕಷ್ಟವನ್ನು ಕೊಡುವನು.


ಆಗ ನಾನು ಯಾಕೋಬನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಇಸಾಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.


ಇಸ್ರೇಲನ್ನು ರಕ್ಷಿಸಲು ಒಬ್ಬನನ್ನು ಯೆಹೋವನು ಕಳುಹಿಸಿದನು. ಇಸ್ರೇಲರು ಅರಾಮ್ಯದಿಂದ ಬಿಡುಗಡೆಗೊಂಡು ಸ್ವತಂತ್ರರಾದರು. ಇಸ್ರೇಲರು ತಮ್ಮ ಸ್ವಂತ ಮನೆಗಳಿಗೆ ಹಿಂದಿರುಗಿ ಸುರಕ್ಷಿತವಾಗಿ ವಾಸಿಸಿದರು.


ಆಗ ಎಸ್ತೇರಳು ಈ ಉತ್ತರವನ್ನು ಮೊರ್ದೆಕೈಗೆ ಕಳುಹಿಸಿದಳು: “ಮೊರ್ದೆಕೈ, ನೀನು ಹೋಗಿ ಶೂಷನ್‌ನಲ್ಲಿರುವ ಎಲ್ಲಾ ಯೆಹೂದ್ಯರನ್ನು ಒಟ್ಟಿಗೆ ಸೇರಿಸಿ ನನಗಾಗಿ ಉಪವಾಸವಿರಲು ಅವರಿಗೆ ಹೇಳು. ಮೂರು ದಿನ ಹಗಲುರಾತ್ರಿ ಊಟಮಾಡಲೂಬಾರದು ಕುಡಿಯಲೂಬಾರದು. ನಾನೂ ನಿಮ್ಮ ಹಾಗೆ ಉಪವಾಸದಿಂದಿರುವೆನು. ನನ್ನೊಂದಿಗೆ ನನ್ನ ಸೇವಕಿಯರೂ ಉಪವಾಸ ಮಾಡುವರು. ನಾವು ಉಪವಾಸ ಮಾಡಿದ ಬಳಿಕ ನಾನು ರಾಜನ ಬಳಿಗೆ ಹೋಗುವೆನು. ಆತನು ಕರೆಯದೆ ನಾನು ಆತನ ಬಳಿಗೆ ಹೋಗುವುದು ನ್ಯಾಯಬಾಹಿರ. ಆದರೂ ನಾನು ಹೋಗುವೆನು, ನಾನು ಸಾಯಬೇಕಾದರೆ ಸಾಯುವೆನು.”


ಎಲ್ಲಾ ಕನ್ಯೆಯರಿಗಿಂತ ರಾಜನು ಎಸ್ತೇರಳನ್ನು ಬಹಳವಾಗಿ ಪ್ರೀತಿಸಿದನು. ಆಕೆ ಅವನ ಮೆಚ್ಚಿಕೆಗೆ ಪಾತ್ರಳಾದಳು. ಎಲ್ಲಾ ಕನ್ಯೆಯರಲ್ಲಿ ಅವಳನ್ನು ಮಾತ್ರ ರಾಜನು ಹೆಚ್ಚಾಗಿ ಇಷ್ಟಪಟ್ಟನು. ಅರಸನಾದ ಅಹಷ್ವೇರೋಷನು ರಾಜ ಕಿರೀಟವನ್ನು ಆಕೆಯ ತಲೆಯ ಮೇಲಿರಿಸಿ ವಷ್ಟಿಯ ಬದಲಾಗಿ ಎಸ್ತೇರಳನ್ನು ತನ್ನ ರಾಣಿಯನ್ನಾಗಿ ಮಾಡಿದನು.


ಬಟ್ಟೆಯನ್ನು ಹರಿಯುವ ಸಮಯ, ಬಟ್ಟೆಯನ್ನು ಹೊಲಿಯುವ ಸಮಯ. ಮೌನವಾಗಿರುವ ಸಮಯ, ಮಾತಾಡುವ ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು