Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:4 - ಪರಿಶುದ್ದ ಬೈಬಲ್‌

4 ಅದಕ್ಕೆ ಎಸ್ತೇರಳು, “ನಾನು ಒಂದು ಔತಣವನ್ನು ಸಿದ್ಧಪಡಿಸಿರುತ್ತೇನೆ. ಅದಕ್ಕೆ ನೀವೂ, ಹಾಮಾನನೂ ಬರಬೇಕು ಎಂದು ವಿನಂತಿಸುತ್ತೇನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದಕ್ಕೆ ಎಸ್ತೇರಳು, “ಅರಸನು ಒಪ್ಪುವುದಾದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ” ಎಂದು ಅರಿಕೆಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರತ್ಯುತ್ತರವಾಗಿ ಎಸ್ತೇರಳು, “ಅರಸರ ಚಿತ್ತವಾದರೆ ನಾನು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ತಾವು ಹಾಮಾನನೊಂದಿಗೆ ದಯಮಾಡಿಸಬೇಕು,” ಎಂದು ವಿನಂತಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದಕ್ಕೆ ಎಸ್ತೇರಳು - ಅರಸನ ಚಿತ್ತಕ್ಕೆ ಬಂದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ ಎಂದು ಅರಿಕೆಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ಎಸ್ತೇರಳು ಅರಸನಿಗೆ, “ಸಮ್ಮತಿಯಾದರೆ ನಾನು ಅರಸನಿಗಾಗಿ ಸಿದ್ಧಮಾಡಿಸಿರುವ ಔತಣಕ್ಕೆ ಅರಸನೂ ಹಾಮಾನನೂ ಈ ಹೊತ್ತು ಬರಬೇಕು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:4
10 ತಿಳಿವುಗಳ ಹೋಲಿಕೆ  

ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು; ಆದರೆ ಜ್ಞಾನಿಯು ತನ್ನನ್ನು ಹತೋಟಿಯಲ್ಲಿಟ್ಟುಕೊಳ್ಳುವನು.


ರಾಜನು ಸಮ್ಮತಿಸುವದಾದರೆ ಮತ್ತು ನಾನು ಕೇಳಿಕೊಳ್ಳುವುದನ್ನು ಕೊಡಲು ರಾಜನಿಗೆ ಇಷ್ಟವಾದರೆ, ನಾಳೆ ನಾನು ಇನ್ನೊಂದು ಔತಣ ಸಮಾರಂಭವನ್ನು ಏರ್ಪಡಿಸುತ್ತೇನೆ. ಅದಕ್ಕೆ ನೀವೂ ಹಾಮಾನನೂ ಬರಬೇಕು. ಆಗ ನಾನು ನನಗೇನುಬೇಕೆಂದು ತಿಳಿಸುವೆನು” ಅಂದಳು.


ಸಹೋದರ ಸಹೋದರಿಯರೇ, ಮಕ್ಕಳಂತೆ ಆಲೋಚಿಸಬೇಡಿ. ಕೆಟ್ಟ ವಿಷಯಗಳಲ್ಲಿ ಎಳೆಗೂಸುಗಳಂತಿರಿ. ಆದರೆ ನಿಮ್ಮ ಆಲೋಚನೆಗಳಲ್ಲಿ ಪ್ರಾಯಸ್ಥರಂತಿರಿ.


ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.


ರಾಜನ ಆಜ್ಞೆಯ ಪ್ರಕಾರ ಸಂದೇಶವಾಹಕರು ದೇಶದೇಶಗಳಿಗೆ ಚದರಿದರು. ರಾಜಧಾನಿಯಾದ ಶೂಷನ್ ನಗರದಲ್ಲೂ ಆ ಸಂದೇಶವನ್ನು ಪ್ರಕಟಿಸಲಾಯಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತರು. ಆದರೆ ರಾಜಧಾನಿಯಲ್ಲಿನ ಜನರು ಗಲಿಬಿಲಿಗೊಂಡಿದ್ದರು.


ನೀವು ಅವನಿಗೆ, ‘ಇದು ನಿನಗೆ ಕಳುಹಿಸಿರುವ ಉಡುಗೊರೆ. ಅಲ್ಲದೆ ನಿನ್ನ ಸೇವಕನಾದ ಯಾಕೋಬನು ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ಹೇಳಬೇಕು” ಎಂದು ತಿಳಿಸಿದನು. “ನಾನು ಈ ಜನರನ್ನು ಉಡುಗೊರೆಗಳೊಡನೆ ಮುಂದೆ ಕಳುಹಿಸಿದರೆ, ಒಂದುವೇಳೆ ಏಸಾವನು ನನ್ನನ್ನು ಕ್ಷಮಿಸಿ ನನ್ನನ್ನು ಸ್ವೀಕರಿಸಿಕೊಳ್ಳಬಹುದು” ಎಂಬುದು ಯಾಕೋಬನ ಆಲೋಚನೆಯಾಗಿತ್ತು.


ಆಗ ಇಸಾಕನು, “ಊಟವನ್ನು ತೆಗೆದುಕೊಂಡು ಬಾ. ನಾನು ಊಟಮಾಡಿ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಅಂತೆಯೇ ಯಾಕೋಬನು ಊಟವನ್ನು ತಂದು ಕೊಟ್ಟಾಗ ಊಟಮಾಡಿದನು; ದ್ರಾಕ್ಷಾರಸವನ್ನು ಕುಡಿದನು.


“ಎಸ್ತೇರ್ ರಾಣಿಯೇ, ಯಾವುದು ನಿನ್ನ ಮನಸ್ಸನ್ನು ಭಾದಿಸುತ್ತದೆ? ನನ್ನನ್ನು ಏನು ಕೇಳಲು ಬಂದಿರುವಿ? ಕೇಳು, ನಾನು ನಿನಗೆ ಅರ್ಧ ರಾಜ್ಯವನ್ನು ಕೇಳಿದರೂ ಕೊಡುವೆನು” ಎಂದು ರಾಜನು ಅಂದನು.


ಆಗ ಅರಸನು, “ಹಾಮಾನನನ್ನು ಬೇಗನೇ ಕರೆಯಿಸಿರಿ, ಎಸ್ತೇರಳು ಹೇಳಿದಂತೆ ನಾವು ಮಾಡುವೆವು” ಅಂದನು. ಹಾಗೆ ಅರಸನೂ ಹಾಮಾನನೂ ಎಸ್ತೇರಳು ಅವರಿಗಾಗಿ ಮಾಡಿದ ಔತಣಕ್ಕೆ ಹೋದರು.


ರಾಜನ ಅರಮನೆಯಲ್ಲಿ ವಷ್ಟಿರಾಣಿಯೂ ಅದೇ ಪ್ರಕಾರ ಸ್ತ್ರೀಯರಿಗೂ ಔತಣವನ್ನು ಮಾಡಿಸಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು