Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:4 - ಪರಿಶುದ್ದ ಬೈಬಲ್‌

4 ಯಾಕೆಂದರೆ ನಾನು, ನನ್ನ ಜನರೂ ಕೊಲ್ಲಲ್ಪಡಲು, ನಾಶವಾಗಲು, ಸಂಪೂರ್ಣವಾಗಿ ನಿರ್ಮೂಲವಾಗಲು ಮಾರಲ್ಪಟ್ಟಿರುತ್ತೇವೆ. ನಾವು ಬರೇ ಗುಲಾಮರಾಗಿ ಮಾರಲ್ಪಟ್ಟಿದರೆ ನಾನು ಸುಮ್ಮನಿರುತ್ತಿದ್ದೆ. ಯಾಕೆಂದರೆ ಅದು ರಾಜನನ್ನು ತೊಂದರೆಪಡಿಸುವಂಥ ದೊಡ್ಡ ವಿಷಯವಲ್ಲ” ಎಂದು ಉತ್ತರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜನರು ನಮ್ಮನ್ನು ಕೊಂದು, ಸಂಹರಿಸಿ, ನಿರ್ನಾಮಗೊಳಿಸುವ ಹಾಗೆ ನಮ್ಮನ್ನು ಮಾರಲಾಯಿತು. ಬರೀ ಮಾರಾಟವಾಗಿದ್ದರೆ ಈ ದುರಂತ ಪರಿಸ್ಥಿತಿಯ ವಿಷಯದಲ್ಲಿ ಅರಸರಿಗೆ ತೊಂದರೆಪಡಿಸುವುದು ಸರಿಯಲ್ಲವೆಂದು ಸುಮ್ಮನಿದ್ದುಬಿಡುತ್ತಿದ್ದೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಜನರು ನಮ್ಮನ್ನು ಕೊಂದು ಸಂಹರಿಸಿ ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ದಾಸದಾಸಿಯರಾಗುವದಕ್ಕೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆ ಪಡಿಸುವದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ನಾನು ಮತ್ತು ನನ್ನ ಜನರು ದುರಂತಕ್ಕೂ, ಕೊಲೆಗೂ, ಸರ್ವನಾಶಕ್ಕೂ ಮಾರಟವಾಗಿದ್ದೇವೆ. ಒಂದು ವೇಳೆ, ನಾವು ದಾಸರಾಗಿಯಾಗಲಿ, ದಾಸಿಯರಾಗಲಿ ಮಾರಾಟವಾಗಿದ್ದರೆ ನಾನು ಸುಮ್ಮನಿರುತ್ತಿದ್ದೆ. ಅಂಥ ಕಷ್ಟಕ್ಕಾಗಿ ನಾನು ಅರಸನನ್ನು ತೊಂದರೆಪಡಿಸದೆ ಸುಮ್ಮನೆ ಇದ್ದುಬಿಡುತ್ತಿದ್ದೆನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:4
18 ತಿಳಿವುಗಳ ಹೋಲಿಕೆ  

“ರಾಜನೇ, ನೀನು ಸಮ್ಮತಿಸುವದಾದರೆ ನನ್ನ ಸಲಹೆ ಏನೆಂದರೆ, ಆ ಜನರನ್ನು ನಿರ್ಮೂಲ ಮಾಡಲು ಅಪ್ಪಣೆ ಕೊಡು. ನಾನು ಹತ್ತು ಸಾವಿರ ಬೆಳ್ಳಿನಾಣ್ಯಗಳನ್ನು ರಾಜ ಖಜಾನೆಯಲ್ಲಿ ಹಾಕುವೆನು. ಆ ಹಣವನ್ನು ಆ ಕಾರ್ಯ ಮಾಡುವ ಜನರ ಸಂಬಳಕ್ಕಾಗಿ ವಿನಿಯೋಗಿಸಬಹುದು” ಎಂದು ಹೇಳಿದನು.


ಯೆಹೋವನು ನಿಮ್ಮನ್ನು ಹಡಗುಗಳ ಮುಖಾಂತರ ಈಜಿಪ್ಟಿಗೆ ಕೊಂಡೊಯ್ಯುವನು. ನೀವು ಅಲ್ಲಿಗೆ ಹೋಗುವುದೇ ಇಲ್ಲವೆಂದು ನಾನು ಹೇಳಿದ್ದೆನು. ಆದರೆ ದೇವರು ನಿಮ್ಮನ್ನು ಅಲ್ಲಿಗೆ ಕಳುಹಿಸುವನು. ಈಜಿಪ್ಟಿನಲ್ಲಿ ನಿಮ್ಮನ್ನು ನೀವೇ ಗುಲಾಮರನ್ನಾಗಿ ನಿಮ್ಮ ವೈರಿಗಳಿಗೆ ಮಾರಿಕೊಳ್ಳುವಿರಿ; ಆದರೆ ಯಾರೂ ನಿಮ್ಮನ್ನು ಕೊಂಡುಕೊಳ್ಳುವವರಿರುವುದಿಲ್ಲ.”


ರಾಜಾಜ್ಞೆಯನ್ನು ಹೊತ್ತ ಸಂದೇಶವಾಹಕರು ದೇಶದ ಎಲ್ಲಾ ಕಡೆಗಳಲ್ಲಿ ಹೊತ್ತುಕೊಂಡು ಬಂದರು. ಆ ಪತ್ರದಲ್ಲಿ ಹನ್ನೆರಡನೇ ತಿಂಗಳಿನ ಹದಿಮೂರನೇ ದಿವಸದಂದು ಆಯಾ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ಚಿಕ್ಕವರು ದೊಡ್ಡವರು ಎನ್ನದೆ ಕೊಂದು ಅವರ ವಸ್ತುಗಳನ್ನೆಲ್ಲ ಸೂರೆ ಮಾಡಬೇಕೆಂಬದಾಗಿ ಬರೆದಿತ್ತು.


ಆ ರಾಜಾಜ್ಞೆಯು ಹೀಗಿತ್ತು: “ಪ್ರತಿಯೊಂದು ನಗರಗಳಲ್ಲಿರುವ ಯೆಹೂದ್ಯರು ಸ್ವರಕ್ಷಣೆಗೋಸ್ಕರ ಒಟ್ಟಾಗಿ ಸೇರಿಬರಲು ಅವರಿಗೆ ಹಕ್ಕಿದೆ. ಅಲ್ಲದೆ ಅವರನ್ನು ಕೊಲ್ಲಲು, ಆಸ್ತಿ ಅಪಹರಿಸಲು ಅವರನ್ನು ನಿರ್ಮೂಲ ಮಾಡುವ ಉದ್ದೇಶದಿಂದ ಅವರ ಬಳಿಗೆ ಬರುವವರನ್ನು ಎದುರಿಸಿ, ಕೊಂದು ನಾಶಮಾಡುವ ಹಕ್ಕು ಅವರಿಗಿದೆ. ಯೆಹೂದ್ಯರಿಗೆ ತಮ್ಮನ್ನು ಹಗೆಮಾಡುವ ವೈರಿಗಳನ್ನು ಕೊಂದು ಅವರ ಆಸ್ತಿಪಾಸ್ತಿಗಳನ್ನು ಸೂರೆಮಾಡುವ ಹಕ್ಕಿದೆ.”


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಇಸ್ರೇಲನ್ನು ನಾನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ಸ್ವಲ್ಪ ಬೆಳ್ಳಿಗಾಗಿ ಒಳ್ಳೆಯವರನ್ನೂ ಮತ್ತು ನಿರಪರಾಧಿಗಳನ್ನೂ ಮಾರಿದರು; ಒಂದು ಜೊತೆ ಕೆರಗಳ ಕ್ರಯಕ್ಕೆ ಬಡ ಜನರನ್ನು ಮಾರಿದರು.


“ನೀವು ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿರಿ. ಆ ರೀತಿಯಾಗಿ ಅವರನ್ನು ಅವರ ದೇಶದಿಂದ ಬಹಳ ದೂರ ತೆಗೆದುಬಿಟ್ಟಿರಿ.


ಎಸ್ತೇರಳು ಉತ್ತರಿಸುತ್ತಾ, “ನಮ್ಮನ್ನು ದ್ವೇಷಿಸುವ ಮನುಷ್ಯನು ಈ ಕೆಟ್ಟ ಹಾಮಾನನೇ” ಎಂದು ಹೇಳಿದಳು. ಆಗ ಹಾಮಾನನು ಭಯದಿಂದ ನಡುಗಿದನು.


“ಆ ಧನಿಕರನ್ನು ನೋಡಿರಿ. ನಾವೂ ಅವರಂತೆಯೇ ಇದ್ದೇವೆ. ನಮ್ಮ ಮಕ್ಕಳು ಅವರ ಮಕ್ಕಳಂತೆಯೇ ಇದ್ದಾರೆ. ಆದರೆ ನಾವು ಮಾತ್ರ ನಮ್ಮ ಗಂಡುಹೆಣ್ಣು ಮಕ್ಕಳನ್ನು ಗುಲಾಮರಾಗಿ ಮಾರುವ ಸ್ಥಿತಿಯಲ್ಲಿದ್ದೇವೆ. ನಮ್ಮಲ್ಲಿ ಕೆಲವರು ಆಗಲೇ ತಮ್ಮ ಹೆಣ್ಣುಮಕ್ಕಳನ್ನು ಗುಲಾಮರನ್ನಾಗಿ ಮಾರಿದ್ದಾರೆ. ನಮಗೆ ಬೇರೆ ಮಾರ್ಗವೇ ಇಲ್ಲ. ನಮ್ಮ ಹೊಲಗದ್ದೆಗಳನ್ನು ಯಾವಾಗಲೋ ಕಳೆದುಕೊಂಡಿದ್ದೇವೆ.”


ನಿನ್ನನ್ನು ಕೊಲ್ಲಲು ಯಾವ ಮನುಷ್ಯ ಬಯಸಿರುವನೋ ಅವನು ನನ್ನನ್ನು ಸಹ ಕೊಲ್ಲಲು ಬಯಸಿದ್ದಾನೆ. ನನ್ನ ಜೊತೆಯಲ್ಲಿರು. ಆಗ ನೀನು ಸುರಕ್ಷಿತವಾಗಿರುವೆ” ಎಂದು ಹೇಳಿದನು.


ಈಗ ನೀವು ಶಾಪಕ್ಕೆ ಗುರಿಯಾಗಿದ್ದೀರಿ. ದೇವರ ಮಂದಿರಕ್ಕಾಗಿ ಸೌಧೆಯನ್ನು ಕಡಿಯುವುದೂ ನೀರನ್ನು ಹೊರುವುದೂ ನಿಮಗೆಂದಿಗೂ ತಪ್ಪಿದ್ದಿಲ್ಲ” ಎಂದು ಹೇಳಿದನು.


“ಆದರೆ ಆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಆ ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು.


ಆಗ ರಾಜನು ಎಸ್ತೇರಳಿಗೆ, “ಹೀಗೆ ನಿನಗೆ ಯಾರು ಮಾಡಿದರು? ನಿನ್ನ ಜನರಿಗೆ ಇಂಥಾ ಕೆಲಸವನ್ನು ಮಾಡಲು ಯಾರಿಗೆ ಧೈರ್ಯವಾಯಿತು?” ಎಂದು ಕೇಳಿದನು.


ನನ್ನ ಜನರಿಗೆ ಭಯಂಕರವಾದ ಆ ಪರಿಸ್ಥತಿ ಉಂಟಾಗುವುದನ್ನಾಗಲಿ ನನ್ನ ಕುಟಂಬವು ಕೊಲ್ಲಲ್ಪಡುವುದನ್ನು ಕಣ್ಣಾರೆ ನೋಡುವುದಕ್ಕಾಗಲಿ ನನಗೆ ಸಾಧ್ಯವಿಲ್ಲದಿರುವುದರಿಂದ ರಾಜನಲ್ಲಿ ಬೇಡಿಕೊಳ್ಳುತ್ತಿದ್ದೇನೆ” ಎಂದಳು.


ಹಾಮಾನನ ಕುತಂತ್ರವನ್ನು ಎಸ್ತೇರ್ ರಾಣಿಯು ರಾಜನ ಸಂಗಡ ಮಾತಾಡುವುದರ ಮೂಲಕ ನಿರರ್ಥಕಗೊಳಿಸಿ ಅವನಿಗೂ ಅವನ ಕುಟುಂಬಕ್ಕೂ ಮರಣವಾಗುವಂತೆ ಮಾಡಿದಳು. ಹಾಮಾನನೂ ಅವನ ಗಂಡುಮಕ್ಕಳೂ ಗಲ್ಲಿಗೇರಿಸಲ್ಪಟ್ಟರು.


ಆ ನೂರಿಪ್ಪತ್ತು ಜನರ ಮೇಲೆ ಮೂರು ಜನ ಮುಖ್ಯಾಧಿಕಾರಿಗಳನ್ನು ನೇಮಿಸಿದನು. ದಾನಿಯೇಲನು ಈ ಮೂರು ಜನ ಮುಖ್ಯಾಧಿಕಾರಿಗಳಲ್ಲೊಬ್ಬನಾಗಿದ್ದನು. ಯಾರೊಬ್ಬರೂ ತನಗೆ ಮೋಸ ಮಾಡದಂತೆ ಮತ್ತು ತನ್ನ ರಾಜ್ಯಕ್ಕೆ ನಷ್ಟವಾಗದಂತೆ ನೋಡಿಕೊಳ್ಳಲು ರಾಜನು ಈ ಮೂವರನ್ನು ನೇಮಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು