ಎಸ್ತೇರಳು 7:8 - ಪರಿಶುದ್ದ ಬೈಬಲ್8 ಅರಸನು ಹೂತೋಟದಿಂದ ಹಿಂದಿರುಗಿ ಕೋಣೆಯೊಳಗೆ ಬಂದಾಗ ಹಾಮಾನನು ಆಸನದ ಮೇಲೆ ಒರಗಿದ್ದ ಎಸ್ತೇರ್ ರಾಣಿಯ ಆಸನದ ಮೇಲೆ ಬೀಳುವದನ್ನು ಕಂಡನು. ಅರಸನು ಸಿಟ್ಟು ತುಂಬಿದವನಾಗಿ, “ನನ್ನ ಮುಂದೆಯೇ ನೀನು ರಾಣಿಯ ಮೇಲೆ ಕೈಮಾಡುತ್ತೀಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸ ಪಾನಮಾಡಿದ ಗೃಹಕ್ಕೆ ಹಿಂತಿರುಗಿ ಬಂದು ಎಸ್ತೇರಳು ಒರಗಿಕೊಳ್ಳುವ ಸುಖಾಸನದ ಮೇಲೆ ಹಾಮಾನನು ಬಿದ್ದುಕೊಂಡಿರುವುದನ್ನು ಕಂಡು, “ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಬೇಕೆಂದಿರುತ್ತಾನೋ?” ಅಂದನು. ಅರಸನ ಬಾಯಿಂದ ಈ ಮಾತು ಹೊರಬಂದ ಕೂಡಲೆ ಸೇವಕರು ಹಾಮಾನನ ಮುಖಕ್ಕೆ ಮುಸುಕು ಹಾಕಿ ಎಳೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅರಸನು ಅರಮನೆಯ ತೋಟದಿಂದ, ತಾನು ದ್ರಾಕ್ಷಾರಸ ಸೇವಿಸುತ್ತಿದ್ದ ಕೊಠಡಿಗೆ ಹಿಂದಿರುಗಿಬಂದಾಗ ಎಸ್ತೇರಳು ಒರಗಿಕೊಂಡಿದ್ದ ಸುಖಾಸನದತ್ತ ಹಾಮಾನನು ಬಾಗಿರುವುದನ್ನು ಕಂಡು, “ಇದೇನು? ಇವನು ನನ್ನ ಮುಂದೆಯೇ ನನ್ನ ಅರಮನೆಯಲ್ಲಿಯೇ ರಾಣಿಯ ಮೇಲೆ ಬಲಾತ್ಕಾರ ಮಾಡಲು ಹೊರಟಿರುವನೆ?” ಎಂದನು. ಅರಸನ ಬಾಯಿಂದ ಈ ಮಾತುಗಳು ಹೊರಬಿದ್ದದ್ದೇ ತಡ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಎಳೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸಪಾನ ಮಾಡಿದ ಗೃಹಕ್ಕೆ ತಿರಿಗಿ ಬಂದು ಎಸ್ತೇರಳು ಒರಗಿಕೊಳ್ಳುವ ಲೋಡಿನ ಮೇಲೆ ಹಾಮಾನನು ಬಿದ್ದುಕೊಂಡಿರುವದನ್ನು ಕಂಡು - ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಲೂ ಬೇಕೆಂದಿರುತ್ತಾನೋ ಅಂದನು. ಅರಸನ ಬಾಯಿಂದ ಈ ಮಾತು ಹೊರಟ ಕೂಡಲೇ ಸೇವಕರು ಹಾಮಾನನ ಮೋರೆಗೆ ಮುಸುಕು ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅರಸನು ಅರಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ಹಿಂದಿರುಗಿ ಬಂದಾಗ, ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು, “ನನ್ನ ಮುಂದೆಯೇ ಇವನು ರಾಣಿಯನ್ನು ಬಲಾತ್ಕಾರ ಮಾಡಬೇಕೆಂದಿರುವನೋ?” ಎಂದನು. ಆ ಮಾತು ಅರಸನ ಬಾಯಿಂದ ಹೊರಟ ಕೂಡಲೆ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಹಾಕಿದರು. ಅಧ್ಯಾಯವನ್ನು ನೋಡಿ |
“ಮನುಷ್ಯನೇ, ಯೆಹೋವನು ನಿನ್ನನ್ನು ಧ್ವಂಸ ಮಾಡುವನು. ಆತನು ನಿನ್ನನ್ನು ಚೆಂಡಿನಂತೆ ಉರುಳಿಸಿ ಬಹುದೂರಕ್ಕೆ ಅಂದರೆ ಬೇರೊಂದು ದೇಶದ ತೆರೆದ ತೋಳುಗಳಿಗೆ ಎಸೆದುಬಿಡುವನು. ಅಲ್ಲಿ ನೀನು ಸಾಯುವೆ” ಎಂದು ಹೇಳಿದನು. ಅದಕ್ಕೆ ಯೆಹೋವನು, “ನೀನು ನಿನ್ನ ರಥಗಳಲ್ಲಿ ಹೆಚ್ಚಳಪಡುತ್ತಿರುವೆ. ಆದರೆ ಆ ದೂರದೇಶದಲ್ಲಿರುವ ನಿನ್ನ ಹೊಸ ಅರಸನ ಬಳಿಯಲ್ಲಿ ಇದಕ್ಕಿಂತಲೂ ಶ್ರೇಷ್ಠವಾದ ರಥಗಳಿವೆ. ಅವನ ಅರಮನೆಯಲ್ಲಿ ನಿನ್ನ ರಥಗಳು ಮುಖ್ಯವಾದವುಗಳಾಗಿರುವುದಿಲ್ಲ.
ಯೆಹೋವನು ಹೇಳುವುದೇನೆಂದರೆ, “ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಆ ಕುರಿಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೋ ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.”