Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:8 - ಪರಿಶುದ್ದ ಬೈಬಲ್‌

8 ಈಗ ಇನ್ನೊಂದು ರಾಜಾಜ್ಞೆಯನ್ನು ಬರೆಯಿಸಲು ನಾನು ನಿಮಗೆ ಅಧಿಕಾರ ಕೊಡುತ್ತೇನೆ. ನಿಮಗೆ ಸರಿತೋಚುವ ರೀತಿಯಲ್ಲಿ ಯೆಹೂದ್ಯರಿಗೆ ಸಹಾಯವಾಗುವಂತೆ ಆ ಆಜ್ಞೆಯನ್ನು ರಾಜನ ಅಧಿಕಾರದೊಡನೆ ಬರೆಯಿಸಿ, ರಾಜನ ಉಂಗುರದಿಂದ ಮುದ್ರೆ ಒತ್ತಿರಿ. ರಾಜ ಮುದ್ರೆಯುಳ್ಳ ಯಾವ ಆಜ್ಞೆಯೂ ರದ್ದಾಗಕೂಡದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದುದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವುದನ್ನು ಅರಸನ ಹೆಸರಿನಲ್ಲಿ ನೀವೂ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅರಸನ ಹೆಸರಿನಲ್ಲಿ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ರದ್ದುಮಾಡಲಾಗದು. ಆದ್ದರಿಂದ ಯೆಹೂದ್ಯರ ವಿಷಯದಲ್ಲಿ ನಿಮಗೆ ಸರಿತೋರಿದಂತೆ ಅರಸನ ಹೆಸರಿನಲ್ಲಿ ನೀವೂ ಪತ್ರ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಕೂಡದಷ್ಟೆ. ಹೀಗಿರುವದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವದನ್ನು ಅರಸನ ಹೆಸರಿನಲ್ಲಿ ನೀವು ಬರೆಯಿಸಿ ರಾಜ ಮುದ್ರೆಯನ್ನು ಹಾಕಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈಗ ನೀವು ಯೆಹೂದ್ಯರಿಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋರುವ ಹಾಗೆ ಬೇರೆ ಒಂದು ಪತ್ರವನ್ನು ಬರೆದು, ಅರಸನ ಉಂಗುರದಿಂದ ಮುದ್ರೆಹಾಕಿರಿ. ಏಕೆಂದರೆ ಅರಸನ ಹೆಸರಿನಿಂದ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ಈಗ ರದ್ದುಮಾಡಲಾಗದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:8
9 ತಿಳಿವುಗಳ ಹೋಲಿಕೆ  

“ಆದ್ದರಿಂದ ರಾಜನು ಒಪ್ಪುವುದಾದರೆ ನನ್ನ ಸಲಹೆ ಏನೆಂದರೆ, ಅರಸನು ಒಂದು ರಾಜಾಜ್ಞೆಯನ್ನು ಹೊರಡಿಸಬೇಕು. ಆ ಆಜ್ಞೆಯು ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳಲ್ಲಿ ಬರೆಯಲ್ಪಡಬೇಕು. ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳು ಎಂದಿಗೂ ಬದಲಾಗುವದಿಲ್ಲ. ರಾಜಾಜ್ಞೆಯು ಏನೆಂದರೆ, ಅರಸನಾದ ಅಹಷ್ವೇರೋಷನ ಸನ್ನಿಧಿಗೆ ರಾಣಿಯು ಪ್ರವೇಶಿಸಲೇ ಕೂಡದು. ಮಾತ್ರವಲ್ಲ ರಾಜನು ವಷ್ಟಿ ರಾಣಿಯ ಸ್ಥಾನವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಾಕೆಗೆ ಕೊಡಲಿ.


ಮೊದಲನೆ ತಿಂಗಳಿನ ಹದಿಮೂರನೇ ದಿವಸದಂದು ರಾಜಲೇಖಕರನ್ನು ಕರೆಯಿಸಿ ಹಾಮಾನನ ಆಜ್ಞೆಯನ್ನು ಆಯಾಭಾಷೆಗಳಲ್ಲಿ ಬರೆಯಿಸಿದನು. ರಾಜನ ಸಂಸ್ಥಾನಾಧಿಕಾರಿಗಳಿಗೆ, ರಾಜ್ಯಪಾಲರಿಗೆ ಮತ್ತು ವಿವಿಧ ಜನಾಂಗದ ಅಧಿಕಾರಿಗಳಿಗೆ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅದಕ್ಕೆ ರಾಜನ ಮುದ್ರೆಯನ್ನೊತ್ತಲಾಯಿತು.


ಅರಸನೇ, ಈ ನಿಬಂಧನೆಯನ್ನು ಬರೆದ ಕಾಗದಕ್ಕೆ ನಿನ್ನ ಹಸ್ತಾಕ್ಷರ ಹಾಕಿ ಅದನ್ನು ಶಾಸನವನ್ನಾಗಿ ಮಾಡು. ಹೀಗೆ ಮಾಡಿದರೆ ಶಾಸನವನ್ನು ಬದಲಾಯಿಸಲಾಗುವುದಿಲ್ಲ. ಏಕೆಂದರೆ ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ಎಂದಿಗೂ ರದ್ದಾಗುವದಿಲ್ಲ ಮತ್ತು ಅವುಗಳನ್ನು ಬದಲಾಯಿಸಲಾಗುವುದಿಲ್ಲ.”


ಆಕೆ ಅರಸನಿಗೆ, “ನೀವು ನನ್ನನ್ನು ಇಷ್ಟಪಡುವುದಾದರೆ ಮತ್ತು ನಿಮಗೆ ಮೆಚ್ಚಿಕೆಯಾದರೆ ನೀವು ನನ್ನ ಈ ಬಿನ್ನಹವನ್ನು ಪೂರೈಸಬೇಕು. ಅದೇನೆಂದರೆ, ರಾಜನ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ನಾಶಮಾಡಬೇಕೆಂದು ಹಾಮಾನನು ಹೊರಡಿಸಿರುವ ಆಜ್ಞೆಯನ್ನು ರದ್ದುಮಾಡಲು ನೀವು ಇನ್ನೊಂದು ಆಜ್ಞೆಯನ್ನು ಹೊರಡಿಸಬೇಕು.


ನಂತರ ಈಜೆಬೆಲಳು ಕೆಲವು ಪತ್ರಗಳನ್ನು ಬರೆದಳು. ಅವಳು ಆ ಪತ್ರಗಳಿಗೆ ಅಹಾಬನ ಹೆಸರಿನ ಸಹಿಯನ್ನು ಮಾಡಿದಳು. ಅಹಾಬನ ಸ್ವಂತ ಮೊಹರನ್ನು ಅವಳು ಆ ಪತ್ರಗಳಿಗೆ ಹಾಕಿದಳು. ನಾಬೋತನು ಇದ್ದ ಆ ಪಟ್ಟಣದಲ್ಲಿ ವಾಸವಾಗಿದ್ದ ಮುಖ್ಯಜನರಿಗೂ ಹಿರಿಯರಿಗೂ ಅವಳು ಆ ಪತ್ರಗಳನ್ನು ಕಳುಹಿಸಿದಳು.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ರಾಜನ ಆಜ್ಞೆಯ ಪ್ರಕಾರ ಮೊರ್ದೆಕೈ ರಾಜಶಾಸನವನ್ನು ಬರೆಯಿಸಿದನು. ಅದಕ್ಕೆ ರಾಜಮುದ್ರೆಯನ್ನು ಒತ್ತಿಸಿ ರಾಜನಿಗಾಗಿ ವಿಶೇಷವಾಗಿ ಬೆಳೆಸಿದ ಅತ್ಯಂತ ವೇಗವಾಗಿ ಓಡುವ ಕುದುರೆಗಳ ಮೂಲಕ ಸಂದೇಶವಾಹಕರಿಂದ ರಾಜ್ಯದ ಮೂಲೆ ಮೂಲೆಗೆ ರಾಜಾಜ್ಞೆಯನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು