Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:9 - ಪರಿಶುದ್ದ ಬೈಬಲ್‌

9 ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ರಾಜಲೇಖಕರನ್ನು ಕರೆಯಿಸಲಾಯಿತು. ಇವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೇ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ, ಯೆಹೂದ್ಯರಿಗೂ ಭಾರತ ಮೊದಲ್ಗೊಂಡು ಕೂಷಿನವರೆಗೂ ಹರಡಿರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ, ಆಯಾ ಸಂಸ್ಥಾನಗಳ ಲಿಪಿಯಲ್ಲೂ ಆಯಾ ಜನಾಂಗಗಳ ಭಾಷೆಯಲ್ಲೂ ಪತ್ರಗಳನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತ ಮೂರನೆಯ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ ಭಾಷೆಯಲ್ಲಿಯೂ ಲಿಖಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:9
10 ತಿಳಿವುಗಳ ಹೋಲಿಕೆ  

ಅಹಷ್ವೇರೋಷನು ತನ್ನ ರಾಜ್ಯದ ಎಲ್ಲಾ ಕಡೆಗಳಿಗೆ, ಎಲ್ಲಾ ಸಂಸ್ಥಾನಗಳಿಗೆ ಅವರವರ ಭಾಷೆಯಲ್ಲಿ ಪತ್ರಗಳನ್ನು ಬರೆಯಿಸಿ ರವಾನಿಸಿದನು. ಅವರವರ ಭಾಷೆಯಲ್ಲಿ ಬರೆದ ಪತ್ರದಲ್ಲಿ ಪ್ರತಿಯೊಬ್ಬ ಗಂಡಸು ತನ್ನ ಸಂಸಾರವನ್ನು ಆಳಬೇಕು ಎಂಬುದಾಗಿ ಬರೆಯಲ್ಪಟ್ಟಿತ್ತು.


ಅಹಷ್ವೇರೋಷನು ರಾಜನಾಗಿದ್ದಾಗ ನಡೆದ ಘಟನೆ. ಹಿಂದೂಸ್ಥಾನದಿಂದ ಇಥಿಯೋಪ್ಯದ ತನಕ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅವನು ಆಳುತ್ತಿದ್ದನು.


ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಜನ ದೇಶಾಧಿಪತಿಗಳನ್ನು ನೇಮಿಸಿದನು.


ಲೋಕದಲ್ಲೆಲ್ಲ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳ ಜನರಿಗೆ ಅರಸನಾದ ನೆಬೂಕದ್ನೆಚ್ಚರನು ಈ ಪತ್ರವನ್ನು ಕಳುಹಿಸಿದನು. ಶುಭಾಶಯಗಳು,


ನಂತರ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬುವರು ಸೇನಾಧಿಪತಿಗೆ, “ದಯವಿಟ್ಟು ನಮ್ಮೊಂದಿಗೆ ಅರಾಮ್ಯರ ಭಾಷೆಯಲ್ಲಿ ಮಾತನಾಡು. ನಾವು ಆ ಭಾಷೆಯನ್ನು ಅರ್ಥಮಾಡಿಕೊಳ್ಳುತ್ತೇವೆ. ಗೋಡೆಯ ಮೇಲಿರುವ ಜನರಿಗೆ ನಮ್ಮ ಮಾತುಗಳು ಕೇಳುವುದರಿಂದ ಯೆಹೂದದ ಭಾಷೆಯಲ್ಲಿ ನಮ್ಮೊಂದಿಗೆ ಮಾತನಾಡಬೇಡ” ಎಂದು ಹೇಳಿದರು.


ಆಗ ಅರಸನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪತ್ರವನ್ನು ಬರೆದನು: ಶುಭಾಶಯಗಳು.


ಅವರೆಲ್ಲರೂ ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಲ್ಲಿ ಜೆರುಸಲೇಮಿನಲ್ಲಿ ಸೇರಿಬಂದರು.


ಅಹಷ್ವೇರೋಷ್ ರಾಜನು ತನ್ನ ಪ್ರಜೆಗಳಿಂದ ತೆರಿಗೆಯನ್ನು ಎತ್ತಿದನು. ಅವನ ಸಾಮ್ರಾಜ್ಯದ ಪ್ರಜೆಗಳೆಲ್ಲರೂ ಹಾಗೂ ದೂರದ ಕರಾವಳಿಯ ನಗರವಾಸಿಗಳೂ, ತೆರಿಗೆಯನ್ನು ಕಟ್ಟಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು