10 ಇವರು ಹಾಮಾನನ ಹತ್ತು ಗಂಡುಮಕ್ಕಳಾಗಿದ್ದರು. ಹಾಮಾನನು ಹಮ್ಮೆದಾತನ ಮಗನೂ ಯೆಹೂದ್ಯರ ಶತ್ರುವೂ ಆಗಿದ್ದನು. ಯೆಹೂದ್ಯರು ಅವರನ್ನು ಹತಿಸಿದ್ದು ಮಾತ್ರವೇ, ಹೊರತು ಅವರ ಸೊತ್ತುಗಳನ್ನು ಅಪಹರಿಸಲಿಲ್ಲ.
ಆ ರಾಜಾಜ್ಞೆಯು ಹೀಗಿತ್ತು: “ಪ್ರತಿಯೊಂದು ನಗರಗಳಲ್ಲಿರುವ ಯೆಹೂದ್ಯರು ಸ್ವರಕ್ಷಣೆಗೋಸ್ಕರ ಒಟ್ಟಾಗಿ ಸೇರಿಬರಲು ಅವರಿಗೆ ಹಕ್ಕಿದೆ. ಅಲ್ಲದೆ ಅವರನ್ನು ಕೊಲ್ಲಲು, ಆಸ್ತಿ ಅಪಹರಿಸಲು ಅವರನ್ನು ನಿರ್ಮೂಲ ಮಾಡುವ ಉದ್ದೇಶದಿಂದ ಅವರ ಬಳಿಗೆ ಬರುವವರನ್ನು ಎದುರಿಸಿ, ಕೊಂದು ನಾಶಮಾಡುವ ಹಕ್ಕು ಅವರಿಗಿದೆ. ಯೆಹೂದ್ಯರಿಗೆ ತಮ್ಮನ್ನು ಹಗೆಮಾಡುವ ವೈರಿಗಳನ್ನು ಕೊಂದು ಅವರ ಆಸ್ತಿಪಾಸ್ತಿಗಳನ್ನು ಸೂರೆಮಾಡುವ ಹಕ್ಕಿದೆ.”
ತನ್ನ ಸಂಪತ್ತಿನ ವಿಷಯ ಕೊಚ್ಚಿಗೊಂಡನು. ತನ್ನ ಸ್ನೇಹಿತರಲ್ಲಿ ತನ್ನ ಮಕ್ಕಳ ವಿಚಾರವಾಗಿ ಹೆಗ್ಗಳಿಕೆಯಿಂದ ಮಾತಾಡುತ್ತಿದ್ದನು. ಮಾತ್ರವಲ್ಲದೆ ಅರಸನು ತನ್ನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಇತರ ಎಲ್ಲಾ ನಾಯಕರುಗಳ ಮೇಲೆ ನೇಮಿಸಿದನು.
ನಿನ್ನದಾಗಿರುವ ಯಾವುದನ್ನೂ ನಾನು ಇಟ್ಟುಕೊಳ್ಳುವುದಿಲ್ಲ; ಅದು ದಾರವಾಗಿದ್ದರೂ, ಪಾದರಕ್ಷೆಯ ಬಾರಾಗಿದ್ದರೂ, ನಾನಿಟ್ಟುಕೊಳ್ಳುವುದಿಲ್ಲ. ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದೆ’ ಎಂದು ನೀನು ಹೇಳಿಕೊಳ್ಳುವುದು ನನಗೆ ಬೇಕಾಗಿಲ್ಲ.
ಸಹೋದರ ಸಹೋದರಿಯರೇ, ಒಳ್ಳೆಯದಾದ ಮತ್ತು ಸ್ತುತಿಗೆ ಯೋಗ್ಯವಾದ ಸಂಗತಿಗಳ ಬಗ್ಗೆ ಆಲೋಚಿಸಿರಿ. ಸತ್ಯವಾದ, ಮಾನ್ಯವಾದ, ನ್ಯಾಯವಾದ, ಶುದ್ಧವಾದ, ಸುಂದರವಾದ ಮತ್ತು ಗೌರವಯುತವಾದ ವಿಷಯಗಳ ಬಗ್ಗೆ ಆಲೋಚಿಸಿರಿ.
ಯಾಕೆಂದರೆ ನಾನು, ನನ್ನ ಜನರೂ ಕೊಲ್ಲಲ್ಪಡಲು, ನಾಶವಾಗಲು, ಸಂಪೂರ್ಣವಾಗಿ ನಿರ್ಮೂಲವಾಗಲು ಮಾರಲ್ಪಟ್ಟಿರುತ್ತೇವೆ. ನಾವು ಬರೇ ಗುಲಾಮರಾಗಿ ಮಾರಲ್ಪಟ್ಟಿದರೆ ನಾನು ಸುಮ್ಮನಿರುತ್ತಿದ್ದೆ. ಯಾಕೆಂದರೆ ಅದು ರಾಜನನ್ನು ತೊಂದರೆಪಡಿಸುವಂಥ ದೊಡ್ಡ ವಿಷಯವಲ್ಲ” ಎಂದು ಉತ್ತರಿಸಿದಳು.
ಇದಾದ ಬಳಿಕ ರಾಜನಾದ ಅಹಷ್ವೇರೋಷನು ಹಾಮಾನನನ್ನು ಗೌರವಿಸಿದನು. ಹಾಮಾನನು ಹಮ್ಮೆದಾತನೆಂಬವನ ಮಗನು. ಇವನು ಅಗಾಗನ ವಂಶಕ್ಕೆ ಸೇರಿದವನಾಗಿದ್ದನು. ಅರಸನು ಹಾಮಾನನನ್ನು ಉನ್ನತಸ್ಥಾನಕ್ಕೆ ನೇಮಿಸಿ ಬೇರೆ ಅಧಿಕಾರಿಗಳಿಗಿಂತ ವಿಶೇಷವಾದ ಗೌರವವನ್ನು ಕೊಡಿಸಿದನು.
ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.
ರಾಜಾಜ್ಞೆಯನ್ನು ಹೊತ್ತ ಸಂದೇಶವಾಹಕರು ದೇಶದ ಎಲ್ಲಾ ಕಡೆಗಳಲ್ಲಿ ಹೊತ್ತುಕೊಂಡು ಬಂದರು. ಆ ಪತ್ರದಲ್ಲಿ ಹನ್ನೆರಡನೇ ತಿಂಗಳಿನ ಹದಿಮೂರನೇ ದಿವಸದಂದು ಆಯಾ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ಚಿಕ್ಕವರು ದೊಡ್ಡವರು ಎನ್ನದೆ ಕೊಂದು ಅವರ ವಸ್ತುಗಳನ್ನೆಲ್ಲ ಸೂರೆ ಮಾಡಬೇಕೆಂಬದಾಗಿ ಬರೆದಿತ್ತು.
ಆಗ ರಾಜನು ದಾನಿಯೇಲನ ಮೇಲೆ ದೋಷಾರೋಪಣೆಯನ್ನು ಮಾಡಿದ ಜನರನ್ನು ಸಿಂಹಗಳ ಗುಹೆಗೆ ಕರೆತರಬೇಕೆಂದು ಆಜ್ಞಾಪಿಸಿದನು. ಆ ಜನರನ್ನೂ ಅವರ ಹೆಂಡತಿಮಕ್ಕಳನ್ನೂ ಸಹಿತವಾಗಿ ಸಿಂಹಗಳ ಗುಹೆಯಲ್ಲಿ ಎಸೆಯಲಾಯಿತು. ಅವರು ಗುಹೆಯ ನೆಲಕ್ಕೆ ಮುಟ್ಟುವ ಮೊದಲೇ ಸಿಂಹಗಳು ಅವರನ್ನು ಎಳೆದುಕೊಂಡವು. ಸಿಂಹಗಳು ಅವರ ದೇಹಗಳನ್ನು ತಿಂದು ಎಲುಬುಗಳನ್ನು ಅಗಿದುಹಾಕಿದವು.